Homeಕರ್ನಾಟಕಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

ಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್ ಗೆ ಭಾರತ ರತ್ನಕೊಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದೇ ವಿಷಯ ಈಗ ಪರ-ವಿರೋಧದ ಚರ್ಚೆಯ ಪ್ರಮುಖ ವಿಷಯವಾಗಿದೆ. ಬಿಜೆಪಿಯ ನಿಲುವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅಲ್ಲದೇ ಸಾವರ್ಕರ್ ಗೆ ಭಾರತ ರತ್ನ ಕೊಡುವ ವಿಚಾರವನ್ನು ಖಂಡಿಸಿದ್ದರು. ಇದೇ ವಿಷಯದಲ್ಲಿ ಈಗ ಸಚಿವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮತ್ತು ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ಶುರುವಾಗಿದೆ.

ಹೋದಲ್ಲಿ ಬಂದಲ್ಲಿ ಪರ-ವಿರೋಧ ಹೇಳಿಕೆ ನೀಡಿದ್ದ ನಾಯಕರ ಆರೋಪ-ಪ್ರತ್ಯಾರೋಪ ಈಗ ಸಾಮಾಜಿಕ ಜಾಲತಾಣದಲ್ಲಿಯೂ ಜೋರಾಗಿದೆ. ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವಾದ-ಪ್ರತಿವಾದದ ಸದ್ದು ಕೇಳಿ ಬರುತ್ತಿದೆ.

ಸಿದ್ದರಾಮಯ್ಯಅವರ ವಿರೋಧಕ್ಕೆ ಟ್ವೀಟ್ ಮಾಡಿ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾತ್ಮಾ ಗಾಂಧಿ ಹತ್ಯೆಯ ಸಂಚುಕೋರ ಎಂದು ರಾಷ್ಟ್ರವಾದಿ ಸಾವರ್ಕರ್ ಅವರನ್ನು ಅವಮಾನಿಸಿದ್ದೀರಿ. ಸಿಎಂ ಹುದ್ದೆ ಕಳೆದುಕೊಂಡ ಮೇಲೆ ನೀವು ಮಾನಸಿಕ ವೈಕಲ್ಯಕ್ಕೆ ತುತ್ತಾಗಿದ್ದೀರಾ..? ಇತಿಹಾಸದ ಬಗ್ಗೆ ನಿಮಗೆ ಗೊತ್ತಿದೆಯಾ..? ಸೆಲ್ಯುಲರ್ ಜೈಲಿಗೆ ನೀವು ಭೇಟಿ ನೀಡಿ, ಪ್ರವಾಸಕ್ಕೆ ವ್ಯವಸ್ಥೆ ಮಾಡುತ್ತೇನೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ. ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು, ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.  ನಮ್ಮಂತವರು ರಾಜಕೀಯದ ಮಧ್ಯೆ, ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದಕ್ಕೆ ಸಿ.ಟಿ.ರವಿ ಪ್ರತಿ ಟ್ವೀಟ್ ಮಾಡಿ, ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ದೇಶಭಕ್ತನೊಬ್ಬ ಗಾಂಧೀಜಿಯವರ ಹತ್ಯೆಯ ಆರಫಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು, ಮುಗ್ಧರು ನಿಗೂಢವಾಗಿ ಸಾವನ್ನಪ್ಪಿದಾಗ ರಾಜ್ಯವನ್ನಾಳುತ್ತಿದ್ದವರು ಕುಡಿಯುತ್ತಿದ್ದರೋ..? ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಇತ್ತ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ, ‘ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ‌. ಗಾಂಧಿ ಹತ್ಯೆ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೇನೆ. ಹಿಂದೂಗಳಿಗೆ ಕೊಡಬೇಡಿ ಎಂದು ಹೇಳಿಲ್ಲ. ಗಾಂಧೀಜಿ ಕೂಡಾ ಹಿಂದೂ, ನಾನು ಕೂಡ ಹಿಂದೂ. ನಮ್ಮ ಸರ್ಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ವರದಿ ಜಾರಿಗೊಳಿಸಲು ಆಗಿರಲಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಸರ್ಕಾರಕ್ಕೆ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ. ಈ ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ’ ಎಂದು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ಸಾವರ್ಕರ್ ಗೆ ಭಾರತ ರತ್ನ ಕೊಡುತ್ತೇವೆ. ಎನ್ನುತ್ತಿರುವವರು ಮುಂದೆ ಗೋಡ್ಸೆಗೂ ಕೊಡುತ್ತೇವೆ ಎನ್ನಬಹುದು. ಕೊಡಲಿ ಬಿಡಿ. ಮನುವಾದಿಗಳಿಗೆ ಅಪಾರವಾದ ಬಹುಮತವನ್ನು ಕೊಟ್ಟಿರುವ ನಮಗೆ ಇಂತಹದ್ದನ್ನೆಲ್ಲ ನೊಡುವ ಸೌಭಾಗ್ಯ ದೊರಕಿದೆ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...