Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...