Homeಫ್ಯಾಕ್ಟ್‌ಚೆಕ್FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್...

FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್ ಫೋಟೊ ಹಂಚಿಕೆ

- Advertisement -
- Advertisement -

‘ಮಿಸ್ಟರ್ ಬೀನ್’ ಹಾಸ್ಯ ನಟ ರೋವನ್ ಅಟ್ಕಿನ್‌ಸನ್ ಅವರಿಗೆ ವಯಸ್ಸಾಗಿದ್ದು, ಹಾಸಿಗೆ ಹಿಡಿದ್ದಿದ್ದಾರೆ ಎಂದು ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ಅಟ್ಕಿನ್‌ಸನ್ ಅವರ ಮಿಸ್ಟರ್ ಬೀನ್ ಪಾತ್ರದ ಫೋಟೋ ಮತ್ತು ಅವರು ಹಾಸಿಗೆ ಹಿಡಿದಿದ್ದಾರೆ ಎನ್ನಲಾದ ಫೋಟೋಗಳನ್ನು ಕೊಲಾಜ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದಿದ್ದಾರೆ ಎಂಬ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 30 ಜನವರಿ 2020ರಂದು ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯಲ್ಲಿ ಅದೇ ರೀತಿಯ ಕೊಂಚ ವ್ಯತ್ಯಾಸದ ಫೋಟೋ ಕಂಡು ಬಂದಿದೆ. ನಾವು ಸುದ್ದಿ ಓದಿದಾಗ ಆ ಫೋಟೋ ಅಟ್ಕಿನ್‌ಸನ್ ಅವರದ್ದಲ್ಲ ಎಂದು ಗೊತ್ತಾಗಿದೆ.

ಮಿರರ್‌ನ ಸುದ್ದಿಯಲ್ಲಿ “75 ವರ್ಷ ವಯಸ್ಸಿನ ಬ್ಯಾರಿ ಬಾಲ್ಡರ್ಸ್ಟೋನ್ ಎಂಬ ವ್ಯಕ್ತಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮತ್ತು ಅವರ ಪತ್ನಿ ತಾವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅವರ ಆರೈಕೆಯ ಬಿಲ್ ಪಾವತಿಸಲು ಖರ್ಚು ಮಾಡಬೇಕಾಯಿತು” ಎಂದು ವಿವರಿಸಲಾಗಿತ್ತು.

ಮಿರರ್ ಪ್ರಕಟಿಸಿದ ಫೋಟೋ ಮತ್ತು ಅಟ್ಕಿನ್‌ಸನ್ ಅವರದ್ದು ಎಂದು ವೈರಲ್ ಆಗುತ್ತಿರುವ ಫೋಟೋವನ್ನು ನಾವು ಹೋಲಿಕೆ ಮಾಡಿ ನೋಡಿದಾಗ ಮುಖವೊಂದು ಬಿಟ್ಟು ಉಳಿದ ಎಲ್ಲದರಲ್ಲೂ ಸಾಮ್ಯತೆ ಕಂಡು ಬಂದಿದೆ. ಹಾಗಾಗಿ, ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋವನ್ನು ತಿರುಚಿ ಅಟ್ಕಿನ್‌ಸನ್ ಅವರದ್ದು ಎಂದು ಹಂಚಿಕೊಳ್ಳಲಾಗ್ತಿದೆ ಎಂಬುವುದು ನಮಗೆ ಗೊತ್ತಾಗಿದೆ.

ವೈರಲ್ ಫೋಟೋ ಬ್ಯಾರಿ ಬಾಲ್ಡರ್ಸ್ಟೋನ್ ಅವರದ್ದು ಎಂದು ಮತ್ತೊಂದು ವರದಿಯ ಮೂಲಕ ನಮಗೆ ಖಚಿತವಾಗಿದೆ. ಫೆಬ್ರವರಿ 5,2020ರಂದು ‘ಮ್ಯಾಂಚೆಸ್ಟರ್ ಈವಿನಿಂಗ್ ನ್ಯೂಸ್‘ ಎಂಬ ಮತ್ತೊಂದು ವೆಬ್‌ಸೈಟ್ ಕೂಡ ಅದೇ ಫೋಟೋ ಬಳಸಿಕೊಂಡು ಸುದ್ದಿ ಪ್ರಕಟಿಸಿತ್ತು.

ಕೃತಕ ಬುದ್ದಿಮತ್ತೆ (ಆರ್ಟಿಪಿಶಿಯಲ್ ಇಂಟಲಿಜೆನ್ಸ್ ) ಆಧರಿತ ಫೇಸ್ ಸ್ಟಾಂಪಿಗ್ ಸಾಧನ ಬಳಸಿ ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋಗೆ ಅಟ್ಕಿನ್‌ಸನ್ ಮುಖ ಅಂಟಿಸಿರುವುದನ್ನು ಖಚಿತಪಡಿಸಲು ನಾವು ಅದನ್ನು ಪ್ರಯತ್ನಿ ನೋಡಿದ್ದೇವೆ. ಈ ವೇಳೆ ನಮಗೆ ಸರಿಯಾದ ಫಲಿತಾಂಶ ಕಂಡು ಬಂದಿದೆ.

ಮಿಸ್ಟರ್ ಬೀನ್ ನಟ ಅಟ್ಕಿನ್‌ಸನ್ ಜುಲೈ 7,2024 ರಂದು ಫಾರ್ಮುಲಾ ಒನ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅವರ ಅನೇಕ ಫೋಟೋಗಳು ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು. ಇದರಿಂದ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಯಬಹುದು.

ಒಟ್ಟಿನಲ್ಲಿ, ಮಿಸ್ಟರ್ ಬೀನ್ ನಟ ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾದ ವೈರಲ್ ಫೋಟೋವನ್ನು ಡಿಜಿಟಲ್ ಆಗಿ ತಿರುಚಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಟ್ರಾಯ್ ಉಚಿತ ರೀಚಾರ್ಜ್ ಆಫರ್ ನೀಡಿದೆ ಎಂಬ ವೈರಲ್ ಸಂದೇಶ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...