Homeಮುಖಪುಟಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

ಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

- Advertisement -
- Advertisement -

ಕನ್ವರ್ ಯಾತ್ರೆ ಮಾರ್ಗದಲ್ಲಿನ ಹೋಟೆಲ್ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ನೀಡಿದ್ದ ನಿರ್ದೇಶನದ ಮಧ್ಯಂತರ ತಡೆಯನ್ನು ಸುಪ್ರೀಂ ಕೋರ್ಟ್ ಇಂದು ವಿಸ್ತರಿಸಿದೆ. “ಯಾರನ್ನೂ ಬಲವಂತವಾಗಿ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಾಮಫಲಕ ಪ್ರದರ್ಶನ ನಿರ್ದೇಶನವು, ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಉಪಾಹಾರ ಗೃಹಗಳು ತಮ್ಮ ಸೈನ್‌ಬೋರ್ಡ್‌ನಲ್ಲಿ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ.

ಈ ಆದೇಶವು ಮುಸ್ಲಿಮರು ಮತ್ತು ತಳ ಸಮುದಾಯಕ್ಕೆ ಸೇರಿದವರ ವಿರುದ್ಧ ತಾರತಮ್ಯದಿಂದ ಕೂಡಿದೆ ಎಂದು ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ಸೇರಿದಂತೆ, ಎನ್‌ಡಿಎ ಮಿತ್ರಪಕ್ಷಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಜುಲೈ 22 ರಂದು ಸುಪ್ರೀಂ ಕೋರ್ಟ್ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿರ್ದೇಶನವನ್ನು ಸಮರ್ಥಿಸಿಕೊಂಡಿತು. ಯಾತ್ರೆಯ ಅವಧಿಯಲ್ಲಿ ಅವರು ಸೇವಿಸುವ ಆಹಾರದ ಬಗ್ಗೆ ಗ್ರಾಹಕರು/ಕನ್ವಾರಿಯಾ ಅವರ ಪಾರದರ್ಶಕತೆ ಮತ್ತು ತಿಳುವಳಿಕೆಯುಳ್ಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರ ನಂಬಿಕೆಗಳಿಗೆ ಘಾಸಿ ಆಗಬಾರದು ಎಂಬುದು ನಿರ್ದೇಶನ ಹಿಂದಿನ ಉದ್ದೇಶ” ಎಂದು ಹೇಳಿತ್ತು.

ಸರ್ಕಾರವು “ಆಹಾರ ಮತ್ತು ಸುರಕ್ಷತಾ ಮಾನದಂಡಗಳ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ (ನಿಯಮಗಳು), 2011” ಪ್ರಸ್ತಾಪಿಸಿ ಗಮನ ಸೆಳೆಯುವ ಮೂಲಕ ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿತು. ಎಲ್ಲ ಸಣ್ಣ ಆಹಾರ ವ್ಯವಹಾರಗಳ ನೋಂದಣಿ ಅಗತ್ಯವಿದೆ ಮತ್ತು ಮಾಲೀಕರ ಫೋಟೋ ಐಡಿ, ನೋಂದಣಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿ ಎಂದು ಹೇಳಿದೆ.

ತನ್ನ ಅಫಿಡವಿಟ್‌ನಲ್ಲಿ, ಯುಪಿ ಸರ್ಕಾರವು ತನ್ನ ನಿರ್ದೇಶನವನ್ನು ವಿರೋಧಿಸುವ ಅರ್ಜಿಗಳನ್ನು ಪ್ರಶ್ನಿಸಿದೆ.

“ಕನ್ವಾರಿಯಾಗಳು ಕಟ್ಟುನಿಟ್ಟಾದ ಸಸ್ಯಾಹಾರಿ, ಸಾತ್ವಿಕ ಆಹಾರವನ್ನು ಅನುಸರಿಸುತ್ತಾರೆ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಇತರ ಎಲ್ಲ ತಾಮಸಿಕ ಆಹಾರಗಳನ್ನು ತ್ಯಜಿಸುತ್ತಾರೆ; ಸಾತ್ವಿಕ್ ಆಹಾರ ಎಂದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದೆ ಆಹಾರವನ್ನು ತಯಾರಿಸುವುದು ಎಂದರ್ಥವಲ್ಲ. ಆದರೆ, ಉಪವಾಸ ಸಮಾರಂಭಗಳನ್ನು ಕೈಗೊಳ್ಳುವಾಗ ಇತರ ಹಬ್ಬಗಳಲ್ಲಿ ಫಲಹಾರದಂತೆಯೇ ಆಹಾರವನ್ನು ತಯಾರಿಸುವ ವಿಧಾನವೂ ಆಗಿದೆ” ಎಂದು ಯುಪಿ ಸರ್ಕಾರ ಹೇಳಿದೆ.

ಇದನ್ನೂ ಓದಿ; ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರಿಂದ ವಿಳಂಬ; ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂನಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...