Homeಮುಖಪುಟಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

ಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

- Advertisement -
- Advertisement -

ಕನ್ವರ್ ಯಾತ್ರೆ ಮಾರ್ಗದಲ್ಲಿನ ಹೋಟೆಲ್ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ನೀಡಿದ್ದ ನಿರ್ದೇಶನದ ಮಧ್ಯಂತರ ತಡೆಯನ್ನು ಸುಪ್ರೀಂ ಕೋರ್ಟ್ ಇಂದು ವಿಸ್ತರಿಸಿದೆ. “ಯಾರನ್ನೂ ಬಲವಂತವಾಗಿ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಾಮಫಲಕ ಪ್ರದರ್ಶನ ನಿರ್ದೇಶನವು, ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಉಪಾಹಾರ ಗೃಹಗಳು ತಮ್ಮ ಸೈನ್‌ಬೋರ್ಡ್‌ನಲ್ಲಿ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ.

ಈ ಆದೇಶವು ಮುಸ್ಲಿಮರು ಮತ್ತು ತಳ ಸಮುದಾಯಕ್ಕೆ ಸೇರಿದವರ ವಿರುದ್ಧ ತಾರತಮ್ಯದಿಂದ ಕೂಡಿದೆ ಎಂದು ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ಸೇರಿದಂತೆ, ಎನ್‌ಡಿಎ ಮಿತ್ರಪಕ್ಷಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಜುಲೈ 22 ರಂದು ಸುಪ್ರೀಂ ಕೋರ್ಟ್ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿರ್ದೇಶನವನ್ನು ಸಮರ್ಥಿಸಿಕೊಂಡಿತು. ಯಾತ್ರೆಯ ಅವಧಿಯಲ್ಲಿ ಅವರು ಸೇವಿಸುವ ಆಹಾರದ ಬಗ್ಗೆ ಗ್ರಾಹಕರು/ಕನ್ವಾರಿಯಾ ಅವರ ಪಾರದರ್ಶಕತೆ ಮತ್ತು ತಿಳುವಳಿಕೆಯುಳ್ಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರ ನಂಬಿಕೆಗಳಿಗೆ ಘಾಸಿ ಆಗಬಾರದು ಎಂಬುದು ನಿರ್ದೇಶನ ಹಿಂದಿನ ಉದ್ದೇಶ” ಎಂದು ಹೇಳಿತ್ತು.

ಸರ್ಕಾರವು “ಆಹಾರ ಮತ್ತು ಸುರಕ್ಷತಾ ಮಾನದಂಡಗಳ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ (ನಿಯಮಗಳು), 2011” ಪ್ರಸ್ತಾಪಿಸಿ ಗಮನ ಸೆಳೆಯುವ ಮೂಲಕ ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿತು. ಎಲ್ಲ ಸಣ್ಣ ಆಹಾರ ವ್ಯವಹಾರಗಳ ನೋಂದಣಿ ಅಗತ್ಯವಿದೆ ಮತ್ತು ಮಾಲೀಕರ ಫೋಟೋ ಐಡಿ, ನೋಂದಣಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿ ಎಂದು ಹೇಳಿದೆ.

ತನ್ನ ಅಫಿಡವಿಟ್‌ನಲ್ಲಿ, ಯುಪಿ ಸರ್ಕಾರವು ತನ್ನ ನಿರ್ದೇಶನವನ್ನು ವಿರೋಧಿಸುವ ಅರ್ಜಿಗಳನ್ನು ಪ್ರಶ್ನಿಸಿದೆ.

“ಕನ್ವಾರಿಯಾಗಳು ಕಟ್ಟುನಿಟ್ಟಾದ ಸಸ್ಯಾಹಾರಿ, ಸಾತ್ವಿಕ ಆಹಾರವನ್ನು ಅನುಸರಿಸುತ್ತಾರೆ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಇತರ ಎಲ್ಲ ತಾಮಸಿಕ ಆಹಾರಗಳನ್ನು ತ್ಯಜಿಸುತ್ತಾರೆ; ಸಾತ್ವಿಕ್ ಆಹಾರ ಎಂದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದೆ ಆಹಾರವನ್ನು ತಯಾರಿಸುವುದು ಎಂದರ್ಥವಲ್ಲ. ಆದರೆ, ಉಪವಾಸ ಸಮಾರಂಭಗಳನ್ನು ಕೈಗೊಳ್ಳುವಾಗ ಇತರ ಹಬ್ಬಗಳಲ್ಲಿ ಫಲಹಾರದಂತೆಯೇ ಆಹಾರವನ್ನು ತಯಾರಿಸುವ ವಿಧಾನವೂ ಆಗಿದೆ” ಎಂದು ಯುಪಿ ಸರ್ಕಾರ ಹೇಳಿದೆ.

ಇದನ್ನೂ ಓದಿ; ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರಿಂದ ವಿಳಂಬ; ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂನಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...