Homeಕರ್ನಾಟಕವಿರೋಧ ಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲ: ಸ್ವಪಕ್ಷದ ವಿರುದ್ದವೇ ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

ವಿರೋಧ ಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲ: ಸ್ವಪಕ್ಷದ ವಿರುದ್ದವೇ ಅಸಮಾಧಾನ ಹೊರ ಹಾಕಿದ ಅರವಿಂದ ಲಿಂಬಾವಳಿ

- Advertisement -
- Advertisement -

ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ಆಡಳಿತ ಪಕ್ಷವನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕಿಡಿಕಾರಿದ್ದಾರೆ.

ವಿಧಾನನ ಮಂಡಲದ ಮುಂಗಾರು ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಎಕ್ಸ್‌ನಲ್ಲಿ ಸುದೀರ್ಘ ಬರಹ ಬರೆದು ಅಸಮಾಧ ಹೊರಹಾಕಿರುವ ಲಿಂಬಾವಳಿ ಆಡಳಿತ ಪಕ್ಷದ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು ಜನರ ಧ್ವನಿಯಾಗಬೇಕಿದ್ದ ಬಿಜೆಪಿ ವಿರೋಧ ಪಕ್ಷವಾಗಿ ಅದನ್ನು ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸದನದಲ್ಲಿ ಸರ್ಕಾರದ ಅವ್ಯವಹಾರ, ದುರಾಡಳಿತ, ವೈಫಲ್ಯಗಳನ್ನು ಎತ್ತಿ ಹಿಡಿಯಲು ಅವಕಾಶವಿದ್ದರೂ ನಮ್ಮ ನಾಯಕರು ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಲಿಂಬಾವಳಿ ಹೇಳಿದ್ದಾರೆ.

“ಐಟಿ-ಬಿಟಿ ರಾಜಧಾನಿ ಎಂದೇ ಕರೆಸಿಕೊಳ್ಳುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ಜನರು ಮನೆ ಕಳೆದುಕೊಂಡಿದ್ದಾರೆ. ನಮ್ಮ ಪಕ್ಷದ ನಾಯಕರಿಗೆ ಈ ಬಗ್ಗೆ ಬೆಳಕು ಚೆಲ್ಲಬೇಕು ಮತ್ತು ರಾಜ್ಯದ ಜನರ ಸಂಕಷ್ಟಗಳನ್ನು ಪ್ರತಿನಿಧಿಸಬೇಕು ಎಂದು ಅನಿಸದಿರುವುದು ವಿಷಾದನೀಯ! ಹಿಂದಿನ ವರ್ಷದ ಬರ ಪರಿಹಾರ ಕೂಡ ಬರದ ಮುನ್ನ ಎಷ್ಟೋ ರೈತರಿಗೆ ತಲುಪಿಲ್ಲ. ಆದರೆ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಿಲ್ಲ” ಎಂದಿದ್ದಾರೆ.

“ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಸಾಮರಸ್ಯ, ತಿಳುವಳಿಕೆ ಇಲ್ಲದಿರುವುದು ವಿಷಾದನೀಯ. ಇದು ಆಡಳಿತ ಪಕ್ಷಕ್ಕೆ ಸಂಪೂರ್ಣ ಲಾಭ ಪಡೆಯಲು ಸಹಕಾರಿಯಾಯಿತು. ಸದನದಲ್ಲಿ ಸಿಕ್ಕ ಅವಕಾಶ ಮತ್ತು ಸಮಯವನ್ನು ಸಮರ್ಪಕವಾಗಿ ಬಳಸಿಕೊಳ್ಳದೆ, ಇಡೀ ಅಧಿವೇಶನವನ್ನು ವ್ಯರ್ಥವಾಗಿ ಕಳೆದು, ಇನ್ನೂ ಒಂದು ದಿನ ಬಾಕಿ ಇರುವಾಗ ಸದನದ ಕಲಾಪ ಮೊಟಕುಗೊಳಿಸಿ ಆಡಳಿತ ಪಕ್ಷದ ಜೊತೆ ಕೈಜೋಡಿಸಿರುವ ನಮ್ಮ ಪಕ್ಷದ ನಾಯಕರ ಕ್ರಮ ಪ್ರಶ್ನಾರ್ಹವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ… ಯಾವುದೇ ವಿಚಾರವನ್ನು ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಿಲ್ಲ. ವಿರೋಧ ಪಕ್ಷದ ನಾಯಕರೂ ಈ ವಿಷಯಗಳನ್ನು ಸಮರ್ಥವಾಗಿ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ಇದರಿಂದಾಗಿ ಆಡಳಿತ ಪಕ್ಷದ ಜೊತೆ ವಿರೋಧ ಪಕ್ಷ ಶಾಮೀಲಾಗಿತ್ತೇನೋ ಎಂಬ ಕುತೂಹಲ ಜನರಲ್ಲಿ ಮೂಡಿದೆ! ಮೈಸೂರಿನಲ್ಲಿ ಮುಡಾ ವಿರುದ್ಧದ ಹೋರಾಟ ಕಣ್ಣೊರೆಸುವ ತಂತ್ರವಾಗಿ ಕಂಡುಬಂದಿದೆ” ಎಂದಿದ್ದಾರೆ.

“ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಅಧಿವೇಶನದಲ್ಲಿ ನಾಯಕರ ವರ್ತನೆಯನ್ನು ಗಮನಿಸಿದರೆ, ಈ ನಾಯಕರ ನೇತೃತ್ವದ ಬಿಜೆಪಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟಗಳಲ್ಲಿ ಹೇಗೆ ತೊಡಗಿಸಿಕೊಳ್ಳಬಹುದು ಎಂಬುದು ಎಲ್ಲಾ ಪ್ರಾಮಾಣಿಕ ಮತ್ತು ಶ್ರಮಿಸುವ ಕಾರ್ಯಕರ್ತರಿಗೆ ದೊಡ್ಡ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

“ಒಂದು ಕಾಲದಲ್ಲಿ ಅಧಿವೇಶನಗಳಲ್ಲಿ ಘರ್ಜನೆ ಮಾಡುತ್ತಿದ್ದು, ಅತ್ಯಂತ ಕಡಿಮೆ ಸ್ಥಾನಗಳಿದ್ದರೂ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದ ನಮ್ಮ ಪಕ್ಷದ ಈ ಸ್ಥಿತಿಯನ್ನು ಕಂಡು ನನಗೆ ತುಂಬಾ ಆತಂಕ ಮತ್ತು ನಿರಾಶೆಯಾಗಿದೆ” ಎಂದಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ಬಿಜೆಪಿ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಅರವಿಂದ್ ಲಿಂಬಾವಳಿ ಬದಲಾಗಿ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿ ಅವರಿಗೆ ಪಕ್ಷ ಟಿಕೆಟ್ ನೀಡಿತ್ತು. ಮಂಜುಳಾ ಅವರು 44,501 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಪುನೀತ್ ಕೆರೆಹಳ್ಳಿ ಬಂಧನ, ಠಾಣೆಯಲ್ಲಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...