Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

- Advertisement -
- Advertisement -

ಕನ್ವರ್ ಯಾತ್ರಿಗಳು ಸಾಗುವ ಮಾರ್ಗದಲ್ಲಿ ಬರುವ ಎಲ್ಲಾ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಇತ್ತೀಚೆಗೆ ಆದೇಶಿಸಿತ್ತು. ಈ ಆದೇಶ ಭಾರೀ ವಿರೋಧಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಹೊರಡಿಸಲಾಗಿದೆ ಎಂಬ ಎರಡೂ ರಾಜ್ಯ ಸರ್ಕಾರಗಳ ಆದೇಶ ಪ್ರಶ್ನಿಸಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಜುಲೈ 22ರಂದು ಸರ್ಕಾರಗಳ ಆದೇಶವನ್ನು ತಡೆ ಹಿಡಿದಿತ್ತು.

ಎಪಿಸಿಆರ್ ಅರ್ಜಿಗೆ ಸಂಬಂಧಿಸಿ ಮಧ್ಯಂತರ ಆದೇಶ ನೀಡುವ ವೇಳೆ ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರು ಮೌಖಿಕವಾಗಿ ತನ್ನ ಅನುಭವೊಂದನ್ನು ಬಿಚ್ಚಿಟ್ಟಿದ್ದರು. ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ, ಅದಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಕಾನೂನು ಸಂಬಂಧಿತ ಸುದ್ದಿಗಳ ವೆಬ್‌ಸೈಟ್‌ಗಳಾದ ಲೈವ್ ಲಾ ಮತ್ತು ಬಾರ್ & ಬೆಂಚ್ ನ್ಯಾಯಮೂರ್ತಿಗಳ ಹೇಳಿಕೆಯನ್ನು ವರದಿ ಮಾಡಿತ್ತು. ಅದರಲ್ಲಿ “ಕೇರಳದ ಒಂದು ನಗರದಲ್ಲಿ ಹಿಂದೂಗಳು ನಡೆಸುವ ವೆಜ್ ಹೋಟೆಲ್ ಒಂದಿದೆ, ಮುಸ್ಲಿಮರ ನಡೆಸುವ ವೆಜ್ ಹೋಟೆಲ್ ಒಂದಿದೆ. ಆ ರಾಜ್ಯದ ನ್ಯಾಯಾಧೀಶನಾಗಿದ್ದಾಗ ನಾನು, ಮುಸಲ್ಮಾನರು ನಡೆಸುತ್ತಿದ್ದ ಹೋಟೆಲ್‌ಗೆ ಹೋಗುತ್ತಿದ್ದೆ. ಅಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಕಾಯ್ದುಕೊಳ್ಳುತ್ತಿದ್ದರು” ಎಂದು ನ್ಯಾಯಮೂರ್ತಿ ಹೇಳಿದ್ದರು.

ಈ ಹೇಳಿಕೆಯನ್ನು ತಿರುಚಿದ ಕೆಲ ಬಲಂಥೀಯ ಎಕ್ಸ್‌ ಬಳಕೆದಾರರು ” ಹಾಗಾದರೆ, ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್‌ಗಳು ಮಾತ್ರ ಉತ್ತಮ ಸ್ವಚ್ಚತೆ ಹೊಂದಿದೆ. ಹಿಂದೂಗಳು ಸ್ವಚ್ಚ ಇಲ್ಲ ಎಂದರ್ಥವೇ?” ಎಂದು ಬರೆದುಕೊಂಡಿದ್ದರು.

ಸದಾ ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಮಿ.ಸಿನ್ಹಾ (@MrSinha_) ಎಂಬ ಎಕ್ಸ್‌ ಬಳಕೆದಾರ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು “ಹಾಗಾದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪ್ರಕಾರ, ಹಿಂದೂಗಳು ತಮ್ಮ ರೆಸ್ಟೋರೆಂಟ್‌ಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು (ಬಹುಶಃ ನೈರ್ಮಲ್ಯ) ಕಾಪಾಡುತ್ತಿಲ್ಲ.. ಮುಸ್ಲಿಮರು ಕಾಪಾಡುತ್ತಿದ್ದಾರಾ?”

“ಅಲ್ಲದೆ, ಅವರು ಮುಸ್ಲಿಮರ ರೆಸ್ಟೋರೆಂಟ್‌ಗಳಿಗೆ ಆದ್ಯತೆ ನೀಡುವುದರಿಂದ, ಎಲ್ಲಾ ಹಿಂದೂಗಳು ಅದೇ ರೀತಿ ಮಾಡಬೇಕೆಂದು ಬಯಸುತ್ತಿದ್ದಾರಾ? ಇದು ಎಲ್ಲಾ ಹಿಂದೂಗಳನ್ನು ಅನೈರ್ಮಲ್ಯ ಎಂದು ಘೋಷಿಸಿ ಅವರ ವಿರುದ್ಧ ಬಹಿಷ್ಕಾರದ ಕರೆ ಕೊಟ್ಟಂತೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ಅಜೀತ್ ಬಾರ್ತಿ (@ajeetbharti) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ಲೈವ್ ಲಾ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ವಾವ್ ಭಟ್ಟಿ ಜೀ! ಅವರ ವೈಯಕ್ತಿಕ ದೃಷ್ಟಿಕೋನಗಳು ಮುಸ್ಲಿಮರು ನಡೆಸುತ್ತಿರುವ ಪ್ರಪಂಚದ ಪ್ರತಿಯೊಂದು ರೆಸ್ಟೋರೆಂಟ್ ಅನ್ನು ಪ್ರತಿನಿಧಿಸುತ್ತವೆ. ಅಂತಹ ನ್ಯಾಯಾಧೀಶರು ಇದ್ದಾಗ ತೀರ್ಪು ಕೂಡ ಅಂತರಾಷ್ಟ್ರೀಯ ಗುಣಮಟ್ಟದಿಂದ ಕೂಡಿರುತ್ತದೆ. ನಾಲ್ಕು ವಿನಾಯಿತಿಗಳನ್ನು ತನ್ನಿ, ಅದನ್ನು ಪೀಠದಿಂದ ಹೇಳಿ, ಅಲ್ಲಿಗೆ ಮುಗೀತು” ಎಂದು ಬರೆದುಕೊಂಡಿದ್ದರು.

ಇವರಿಬ್ಬರೇ ಅಲ್ಲದೆ ಇನ್ನೂ ಅನೇಕರು ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ನ್ಯಾಯಮೂರ್ತಿಗಳು ಕೇರಳದ ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಒಂದರ ತಮ್ಮ ಅನುಭವವನ್ನು ಉದಾಹರಣೆಯಾಗಿ ಹೇಳಿದ್ದರು ಅಷ್ಟೆ. “ನಾನು ಹೋಗುತ್ತಿದ್ದ ಹೋಟೆಲ್ ಮಾಲೀಕ ದುಬೈನಿಂದ ಹಿಂದಿರುಗಿದವರು. ಆದ್ದರಿಂದ ಅಂತಾರಾಷ್ಟ್ರೀಯ ಗುಣಮಟ್ಟ ಮತ್ತು ಸ್ವಚ್ಚತೆಯನ್ನು ಅವರು ಕಾಪಾಡಿಕೊಂಡಿದ್ದರು” ಎಂದಿದ್ದರು. ಈ ಮೂಲಕ ಮುಸ್ಲಿಂ ಮಾಲೀಕತ್ವದ ಹೋಟೆಲ್, ರೆಸ್ಟೋರೆಂಟ್‌ಗಳ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ಪ್ರಯತ್ನ ಮಾಡಿದ್ದರು.

ನ್ಯಾಯಮೂರ್ತಿಗಳು ಎಲ್ಲೂ “ಮುಸ್ಲಿಮರ ರೆಸ್ಟೋರೆಂಟ್‌, ಹೋಟೆಲ್‌ಗಳು ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿರುತ್ತದೆ. ಹಿಂದೂಗಳು ಆ ರೀತಿ ಇರುವುದಿಲ್ಲ” ಎಂದು ಹೇಳಿಲ್ಲ. ಹಿಂದೂಗಳ ಹೋಟೆಲ್‌ಗಳನ್ನು ಬಹಿಷ್ಕರಿಸುವ ಹೇಳಿಕೆಯನ್ನೂ ಅವರು ನೀಡಿಲ್ಲ.

ಈ ಕುರಿತು ಜುಲೈ 22ರಂದು ವಾರ್ತಾಭಾರತಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯ ಸ್ಕ್ರೀನ್ ಶಾಟ್ ಕೆಳಗಿದೆ

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ಯಾತ್ರೆ ಮಾರ್ಗದ ಹೋಟೆಲ್ ಮತ್ತು ಅಂಗಡಿಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು ಎಂಬ ಆದೇಶ ನೀಡಿರುವುದರ ಹಿಂದೆ ಮುಸ್ಲಿಮರನ್ನು ಗುರಿಯಾಗಿಸುವ ಉದ್ದೇಶ ಇದೆ ಎಂಬ ಆರೋಪ ಕೇಳಿ ಬಂದಿತ್ತು.

ಹೆಸರು ಪ್ರದರ್ಶಿಸಿದರೆ ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿ ಹಿಂದೂಗಳೋ? ಮುಸ್ಲಿಮರೋ ಎಂದು ಗೊತ್ತಾಗುತ್ತದೆ. ಈ ಮೂಲಕ ಕನ್ವರ್ ಯಾತ್ರಿಗಳು ಹಿಂದೂ ಹೋಟೆಲ್‌ಗಳನ್ನು ಗುರುತಿಸಿ ಅಲ್ಲಿಗೆ ಹೋಗುತ್ತಾರೆ. ಮುಸ್ಲಿಮರನ್ನು ಬಹಿಷ್ಕರಿಸುತ್ತಾರೆ ಎಂಬ ಕೆಟ್ಟ ಉದ್ದೇಶ ಸರ್ಕಾರದ ಆದೇಶದ ಹಿಂದೆ ಎಂದು ಅನೇಕರು ದೂರಿದ್ದರು.

ಹಾಗಾಗಿ, ವಿಚಾರಣೆ ವೇಳೆ “ಮುಸ್ಲಿಮರ ಹೋಟೆಲ್‌ ಅಂಗಡಿಗಳಲ್ಲಿ ಸ್ವಚ್ಚತೆ, ಗುಣಮಟ್ಟ ಎಲ್ಲವೂ ಇದೆ. ನಾನೂ ಮುಸ್ಲಿಮರ ವೆಜ್ ಹೋಟೆಲ್‌ಗಳಿಗೆ ಹೋಗುತ್ತಿದ್ದೆ” ಎಂದು ನ್ಯಾಯಮೂರ್ತಿ ಭಟ್ಟಿ ಅವರು ಸಾಂಧರ್ಬಿಕವಾಗಿ ಹೇಳಿದ್ದರು. ಆದರೆ, ಅದನ್ನು ತಿರುಚಿ, “ಮುಸ್ಲಿಮರ ಹೋಟೆಲ್ ಮಾತ್ರ ಸ್ವಚ್ಚತೆ ಮತ್ತು ಗುಣಮಟ್ಟದಿಂದ ಕೂಡಿದೆ. ಹಿಂದೂಗಳ ಹೋಟೆಲ್ ಸ್ವಚ್ಚತೆಯಿಂದ ಕೂಡಿಲ್ಲ ಎಂಬರ್ಥದಲ್ಲಿ ನ್ಯಾಯಮೂರ್ತಿಗಳು ಹೇಳಿಕೆ ನೀಡಿದ್ದಾರೆ” ಎಂದು ತಪ್ಪು ದಾರಿಗೆಳೆಯುವ ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...