Homeಮುಖಪುಟದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

- Advertisement -
- Advertisement -

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಯ ಪ್ರವಾಹದಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಹಳೆಯ ರಾಜಿಂದರ್ ನಗರದಲ್ಲಿ ಕನಿಷ್ಠ 13 “ಅಕ್ರಮ” ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿದೆ.

ಶನಿವಾರ ಸಂಜೆ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಇದ್ದಕ್ಕಿದ್ದಂತೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ ನಂತರ ಸ್ಥಳೀಯ ಆಡಳಿತದ ಕ್ರಮವು ಭಾನುವಾರ ತಡರಾತ್ರಿಯವರೆಗೆ ಮುಂದುವರೆಯಿತು.

ಸೀಲ್ ಮಾಡಲಾದ ಕೋಚಿಂಗ್ ಸೆಂಟರ್‌ಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಅಕಾಡೆಮಗಳು ಸೇರಿವೆ.

“ಈ ಕೋಚಿಂಗ್ ಸೆಂಟರ್‌ಗಳು ನಿಯಮಗಳನ್ನು ಉಲ್ಲಂಘಿಸಿ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ; ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ನೋಟಿಸ್‌ಗಳನ್ನು ಅಂಟಿಸಲಾಗಿದೆ” ಎಂದು ಎಂಸಿಡಿ ಮೇಯರ್ ಶೈಲಿ ಒಬೆರಾಯ್ ಆದೇಶದಲ್ಲಿ ತಿಳಿಸಿದ್ದಾರೆ.

ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಅನ್ನು ಈಗಾಗಲೇ ಪೊಲೀಸರು ಸೀಲ್ ಮಾಡಿದ್ದಾರೆ. ಅದರ ಮಾಲೀಕರು ಮತ್ತು ಕೇಂದ್ರದ ಸಂಯೋಜಕರನ್ನು ಬಂಧಿಸಿ ಅಪರಾಧಿ ನರಹತ್ಯೆಯ ಆರೋಪ ಹೊರಿಸಿದ್ದಾರೆ.

ದೆಹಲಿ ಕೋಚಿಂಗ್ ಸೆಂಟರ್ ಸಾವುಗಳು

ಮೃತ ತಾನಿಯಾ ಸೋನಿ, ಶ್ರೇಯಾ ಯಾದವ್ ಇಬ್ಬರೂ 25 ವರ್ಷ ವಯಸ್ಸಿನವರು ಮತ್ತು ನೆವಿನ್ ಡೆಲ್ವಿನ್ 28 ವಯಸ್ಸಿನವರು. ಇನ್ನೂ ಹಲವಾರು ವಿದ್ಯಾರ್ಥಿಗಳು ಜಲಾವೃತಗೊಂಡ ನೆಲಮಾಳಿಗೆಯಲ್ಲಿ ಸಿಲುಕಿಕೊಂಡಿದ್ದರು ಮತ್ತು ಏಳು ಗಂಟೆಗಳ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

ತೆಲಂಗಾಣದಿಂದ ಬಂದಿರುವ ತಾನ್ಯಾ ಅವರು ಬಿಹಾರದ ಔರಂಗಾಬಾದ್‌ನವರು ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಎಂದು ವರದಿಗಳು ತಿಳಿಸಿವೆ. ದೆಹಲಿ ವಿಶ್ವವಿದ್ಯಾನಿಲಯದ ಮಹಾರಾಜ ಅಗ್ರಸೇನ್ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ತಂಗಿದ್ದ ಅವರು ಒಂದೂವರೆ ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು.

ಶ್ರೇಯಾ ಯಾದವ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರು. ಅವರು ಮೊದಲು ಪಶ್ಚಿಮ ದೆಹಲಿಯ ಶಾದಿಪುರ ಪ್ರದೇಶದ ಪಿಜಿ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಕೃಷಿಯಲ್ಲಿ ಬಿಎಸ್ಸಿ ಮಾಡಿದ್ದಳು.

ಕೇರಳದ ಎರ್ನಾಕುಲಂನ ನೆವಿನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಕಲೆ ಮತ್ತು ಸೌಂದರ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆಯುತ್ತಿದ್ದರು. ಎಂಟು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದ ಅವರು ವಸಂತ್ ಕುಂಜ್ ಪ್ರದೇಶದ ವಿಶ್ವವಿದ್ಯಾಲಯದ ಬಳಿ ಬಾಡಿಗೆಗೆ ವಾಸವಾಗಿದ್ದರು.

ಇದುವರೆಗಿನ ತನಿಖೆಗಳು ಕೋಚಿಂಗ್ ಸೆಂಟರ್‌ನ ಮಾಲೀಕರು ಮತ್ತು ನಾಗರಿಕ ಅಧಿಕಾರಿಗಳ ಕಡೆಯಿಂದ ಅನೇಕ ಲೋಪಗಳನ್ನು ಸೂಚಿಸಿವೆ. ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಕೇಂದ್ರವು 2021 ರ ಆಗಸ್ಟ್‌ನಲ್ಲಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ನೆಲಮಾಳಿಗೆಯು ಪಾರ್ಕಿಂಗ್ ಬಳಕೆ ಮತ್ತು ಸಂಗ್ರಹಣೆಗಾಗಿ ಎಂದು ಒತ್ತಿಹೇಳುತ್ತದೆ.

ಇದನ್ನೂ ಓದಿ; ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: ಮೃತ ನೆವಿನ್ ಡಾಲ್ವಿನ್ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...