Homeಫ್ಯಾಕ್ಟ್‌ಚೆಕ್FACT CHECK : ನ್ಯಾಯಾಲಯದ ಮುಸ್ಲಿಂ ಸಿಬ್ಬಂದಿ ಕುಡಿಯುವ ನೀರಿಗೆ ಉಗುಳಿದ್ದಾರೆ ಎಂಬುವುದು ಸುಳ್ಳು

FACT CHECK : ನ್ಯಾಯಾಲಯದ ಮುಸ್ಲಿಂ ಸಿಬ್ಬಂದಿ ಕುಡಿಯುವ ನೀರಿಗೆ ಉಗುಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಉತ್ತರ ಪ್ರದೇಶದ ಅಲೀಗಢದಲ್ಲಿ ನ್ಯಾಯಾಧೀಶರ ಕೊಠಡಿಯಲ್ಲಿ ಮುಸ್ಲಿಂ ಉದ್ಯೋಗಿಯೊಬ್ಬರು ಕುಡಿಯುವ ನೀರಿಗೆ ಉಗುಳುತ್ತಿದ್ದಾರೆ. ಹಿಂದುಗಳೇ ಈ ವಿಡಿಯೋವನ್ನು ನೋಡಿ..ಈಗಲಾದರೂ ಎಚ್ಚೆತ್ತುಕೊಳ್ಳಿ” ಎಂದು ಬರೆದುಕೊಂಡು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು “ಇದು ಮುಸಲ್ಮಾನರ ಜಿಹಾದ್‌ನ ಒಂದು ಭಾಗ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ಸಾಮಾಜಿಕ ಜಾಲತಾಣದ ಬಳಕೆದಾರರು “ಅಲೀಗಢ ನ್ಯಾಯಾಲಯದಿಂದ ಉಗುಳುವ ಜಿಹಾದ್‌ನ ಹೊಚ್ಚ ಹೊಸ ವಿಡಿಯೋ ಬಿಡುಗಡೆಯಾಗಿದೆ. ನ್ಯಾಯಾಲಯದ ನ್ಯಾಯಾಧೀಶರು ಸಹ ಸ್ಪಿಟ್ ಜಿಹಾದ್‌ಗೆ ಬಲಿಯಾದರು” ಎಂಬ ಶೀರ್ಷಿಕೆಯನ್ನು ನೀಡಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಈ ವಿಡಿಯೋ 2018ಕ್ಕೂ ಹಿಂದಿನದ್ದು ಎಂಬುವುದು ನಮಗೆ ತಿಳಿದು ಬಂದಿದೆ. ಈ ಕುರಿತು 29 ಮೇ 2018 ರಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, ವಿಕಾಸ್ ಗುಪ್ತಾ ಎಂಬ ನಾಲ್ಕನೇ ದರ್ಜೆಯ ಉದ್ಯೋಗಿ, ಉತ್ತರ ಪ್ರದೇಶದ ಅಲಿಗಢದಲ್ಲಿ ತನ್ನ ಜೊಲ್ಲು ನೀರಿನಲ್ಲಿ ಬೆರೆಸಿ ಮಹಿಳಾ ನ್ಯಾಯಾಧೀಶರಿಗೆ ನೀಡುತ್ತಿರುವುದು ಕಂಡುಬಂದಿದೆ. ವಿಡಿಯೋ ಬಹಿರಂಗವಾದ ನಂತರ, ಗುಪ್ತಾ ಅವರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ ಮತ್ತು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪಿ.ಕೆ ಸಿಂಗ್ ಘಟನೆಯನ್ನು ದೃಢಪಡಿಸಿದ್ದರ ವರದಿಗಳು ಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಪತ್ರಿಕಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ನೀರಿನ ಲೋಟಕ್ಕೆ ಉಗುಳಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಲ್ಲ ಮತ್ತು ಆತ ಹಿಂದೂ ಎಂಬುವುದು ಸಾಬೀತಾಗಿದೆ. ಈ ಕುರಿತು ಎಬಿಪಿ ಸೇರಿದಂತೆ ಹಲವು ಸುದ್ದಿ ಮಾಧ್ಯಮಗಳು ಕೂಡ ವರದಿ ಮಾಡಿರುವುದು ಕಂಡು ಬಂದಿದೆ.

ವೈರಲ್ ವಿಡಿಯೋ ಕುರಿತು ಜುಲೈ 26, 2024ರಂದು ಅಲೀಗಢ ಪೊಲೀಸರು ಕೂಡ ಎಕ್ಸ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದು, “ದಯವಿಟ್ಟು ಸತ್ಯಾಂಶಗಳನ್ನು ಪರಿಶೀಲಿಸದೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಪೋಸ್ಟ್ ಮಾಡಬೇಡಿ. ಮೇಲ್ಕಂಡ ಪ್ರಕರಣವು 2018 ನೇ ಸಾಲಿನದ್ದಾಗಿದ್ದು, ಆ ಸಮಯದಲ್ಲಿ ಸಂಬಂಧಪಟ್ಟ ಇಲಾಖೆಯು ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಂಡಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಕುಡಿಯುವ ನೀರಿಗೆ ಉಗುಳಿದ ವ್ಯಕ್ತಿ ಮುಸ್ಲಿಂ ಅಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ತಪ್ಪು ಯಾರು ಮಾಡಿದರೂ ತಪ್ಪೇ. ಅದರಲ್ಲಿ ಜಾತಿ, ಧರ್ಮದ ವ್ಯತ್ಯಾಸ ಇಲ್ಲ. ಈ ಪ್ರಕರಣಕ್ಕೆ ತಪ್ಪು ಮಾಹಿತಿಯೊಂದಿಗೆ ಕೋಮು ಬಣ್ಣ ಬಳಿದಿರುವ ಕಾರಣ ನಾವು ಸತ್ಯಾಸತ್ಯತೆ ತಿಳಿಸುವ ಕಾರ್ಯ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...