Homeಮುಖಪುಟಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

ಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

- Advertisement -
- Advertisement -

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯದಲ್ಲಿ 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿರುವುದು ಪತ್ತೆಯಾಗಿದೆ. “ಆಕೆಯ ಯುಎಸ್ ಪಾಸ್‌ಪೋರ್ಟ್‌ನ ಫೋಟೋಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಹಿಯೊಬ್ಬರು ಆಕೆಯ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆಯನ್ನು ಸಾವಂತವಾಡಿ (ರಾಜ್ಯದ ಕೊಂಕಣ ಪ್ರದೇಶದಲ್ಲಿ) ಮತ್ತು ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರಿಗೆ ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಆಕೆ ಅಪಾಯದಿಂದ ಪಾರಾಗಿದ್ದಾಳೆ; ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ ಎಂಬುದಕ್ಕೆ ನಾವು ಆಕೆಯ ಬಳಿ ಇದ್ದ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳಿಂದ ಕಂಡುಕೊಂಡಿದ್ದೇವೆ” ಎಂದು ಹೇಳಿದರು.

“ನಾವು ಆಕೆಯ ತಮಿಳುನಾಡು ವಿಳಾಸ ಆಧಾರ್ ಕಾರ್ಡ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ನಕಲು ಪ್ರತಿಯನ್ನು ಕಂಡುಕೊಂಡಿದ್ದೇವೆ. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದೆ. ಆಕೆಯ ವೀಸಾ ಅವಧಿ ಮುಗಿದಿದೆ. ಆಕೆಯ ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳಲು ನಾವು ಈ ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಮ್ಮ ಪೊಲೀಸರು ವಿದೇಶಿಯರ ಪ್ರಾದೇಶಿಕ ನೋಂದಣಿ ಕಛೇರಿಯೊಂದಿಗೆ ಸಂಪರ್ಕದಲ್ಲಿದೆ” ಎಂದು ಅವರು ಹೇಳಿದರು.

ಪೊಲೀಸರು ಪಡೆದ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ; ಒಂದೆರಡು ದಿನಗಳಿಂದ ಏನನ್ನೂ ತಿನ್ನದ ಕಾರಣ ಮಹಿಳೆ ದುರ್ಬಲಳಾಗಿದ್ದಾಳೆ ಹಾಗೂ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಎಷ್ಟು ದಿನ ಆಕೆಯನ್ನು ಕಟ್ಟಿಹಾಕಲಾಕಿತ್ತೋ ಗೊತ್ತಿಲ್ಲ. ಆಕೆಯ ಪತಿ ತಮಿಳುನಾಡಿನಿಂದ ಬಂದಿದ್ದು, ಆಕೆಯನ್ನು ಅಲ್ಲಿ ಕಟ್ಟಿಹಾಕಿ ಪರಾರಿಯಾಗಿರಬಹುದು” ಎಂದು ಪೊಲೀಸರು ಹೇಳಿದ್ದಾರೆ.

ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮಿಳುನಾಡು, ಗೋವಾ ಮತ್ತು ಇತರ ಕೆಲವು ಸ್ಥಳಗಳಿಗೆ ತೆರಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ; ಹೇಮಂತ್ ಸೊರೇನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...