Homeಕರ್ನಾಟಕಅತ್ಯಾಚಾರ ಸಂತ್ರಸ್ತೆಯನ್ನು ಮಹಿಳಾ ವೈದ್ಯರೇ ಪರೀಕ್ಷಿಸುವಂತೆ ಕಾನೂನಿಗೆ ತಿದ್ದುಪಡಿ ತನ್ನಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಅತ್ಯಾಚಾರ ಸಂತ್ರಸ್ತೆಯನ್ನು ಮಹಿಳಾ ವೈದ್ಯರೇ ಪರೀಕ್ಷಿಸುವಂತೆ ಕಾನೂನಿಗೆ ತಿದ್ದುಪಡಿ ತನ್ನಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಯಸ್ಕ ಸಂತ್ರಸ್ತೆಯರ ಖಾಸಗಿತನದ ಹಕ್ಕನ್ನು ರಕ್ಷಿಸುವ ಸಲುವಾಗಿ ಅವರ ಆರೋಗ್ಯ ತಪಾಸಣೆಯನ್ನು ಮಹಿಳಾ ವೈದ್ಯರೇ ನಡೆಸಲು ಅವಕಾಶ ಕಲ್ಪಿಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಗೆ (ಬಿಎನ್‌ಎಸ್‌ಎಸ್‌) ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬಿಹಾರ ಮೂಲದ ಅಜಯ್‌ ಕುಮಾರ್‌ ಬೆಹೆರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ವೇಳೆ ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ ಕೇಂದ್ರ ಸರ್ಕಾರಕ್ಕೆ ಕೆಲ ಸೂಚನೆಗಳನ್ನು ನೀಡಿದೆ.

ಬಿಎನ್‌ಎಸ್‌ಎಸ್‌ನ ಸೆಕ್ಷನ್‌ 184ಕ್ಕೆ ಸೂಕ್ತ ತಿದ್ದುಪಡಿ ಮಾಡುವವರೆಗೆ ಅತ್ಯಾಚಾರ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ನೋಂದಾಯಿತ ಮಹಿಳಾ ವೈದ್ಯಾಧಿಕಾರಿ ಮಾಡುವುದನ್ನು ಖಾತರಿಪರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಬಿಎನ್‌ಎಸ್‌ಎಸ್‌ ಸೆಕ್ಷನ್‌ 184 ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಯಸ್ಕ ಮಹಿಳೆಯರ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದ್ದು, ಈಗ ಹಿಂಪಡೆಯಲಾಗಿರುವ ಸಿಆರ್‌ಪಿಸಿಯ 164ಎ ಅನ್ನು ಅಕ್ಷರಶಃ ನಕಲು ಮಾಡಲಾಗಿದೆ ಎಂದು ಪೀಠ ಹೇಳಿದೆ. ಹೊಸ ಮತ್ತು ಹಳೆಯ ಎರಡೂ ಸೆಕ್ಷನ್‌ಗಳಲ್ಲಿ ಸಂತ್ರಸ್ತೆಯ ಪರೀಕ್ಷೆಯನ್ನು ಮಹಿಳೆ ಅಥವಾ ಪುರುಷ ವೈದ್ಯಾಧಿಕಾರಿ ಮಾಡಬೇಕು ಎಂದು ಹೇಳಲಾಗಿದೆ ಎಂದು ನ್ಯಾಯಾಲಯ ವಿವರಿಸಿದೆ.

ಬಿಎನ್‌ಎಸ್‌ಎಸ್‌ ಮತ್ತು ಸಿಆರ್‌ಪಿಸಿಯ ಎರಡೂ ಸೆಕ್ಷನ್‌ಗಳು ಪೋಕ್ಸೊ ಕಾಯ್ದೆಯೆ ನಿಬಂಧನೆಗಳಿಗೆ ತದ್ವಿರುದ್ದವಾಗಿದೆ. ಪೋಕ್ಸೊ ಕಾಯ್ದೆಯಲ್ಲಿ ಅಪ್ರಾಪ್ತ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ಮಹಿಳಾ ವೈದ್ಯಾಧಿಕಾರಿ ಮಾತ್ರ ಮಾಡಬೇಕು ಎಂದು ಹೇಳಲಾಗಿದೆ. ಆದರೆ, ಸಿಆರ್‌ಪಿಸಿ ಮತ್ತು ಬಿಎನ್‌ಎಸ್‌ಎಸ್‌ ಸೆಕ್ಷನ್‌ಗಳಾದ 53 ಮತ್ತು 51ರಲ್ಲಿ ಮಹಿಳಾ ಸಂತ್ರಸ್ತೆಯನ್ನು ಮಹಿಳಾ ಅಧಿಕಾರಿ ಅಥವಾ ಕನಿಷ್ಠ ಮಹಿಳಾ ವೈದ್ಯಾಧಿಕಾರಿಯ ಉಸ್ತುವಾರಿಯಲ್ಲಿ ಮಾತ್ರ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಮಹಿಳಾ ವೈದ್ಯ ಸಿಬ್ಬಂದಿ ಅಥವಾ ಅವರ ಉಸ್ತುವಾರಿಯಲ್ಲಿ ಪರೀಕ್ಷೆಗೆ ಒಳಪಪಡಿಸಬಾರದು. ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರು ಪುರುಷ ವೈದ್ಯಾಧಿಕಾರಿಗಳಿಂದ ದೈಹಿಕ ಪರೀಕ್ಷೆಗೆ ಒಳಗಾಗುವ ಮೂಲಕ ಏಕೆ ಮುಜುಗರ ಅನುಭವಿಸಬೇಕು? ಎಂದು ನ್ಯಾಯಾಲಯ ಕೇಳಿದೆ.

ಆರೋಪಿಯ ಹಕ್ಕುಗಳನ್ನು ಕಾನೂನು ರಕ್ಷಿಸುತಿದ್ದು, ಸಂತ್ರಸ್ತರ ಹಕ್ಕು ರಕ್ಷಿಸುವಲ್ಲಿ ವಿಫಲವಾಗಿದೆ. ಇದರಿಂದ ಸಾಮಾನ್ಯ ಜನರ ಮನಸ್ಸಿನಲ್ಲಿ ಆರೋಪಿಗಳ ಹಕ್ಕಿನ ಬಗ್ಗೆ ವ್ಯವಸ್ಥೆ ಹೆಚ್ಚು ಉತ್ಸುಕವಾಗಿದ್ದು, ಸಂತ್ರಸ್ತರ ಬಗ್ಗೆ ಅದೇ ನಿಲುವು ಹೊಂದಿಲ್ಲ ಎಂಬ ಭಾವನೆ ಉಂಟು ಮಾಡಬಹುದು ಎಂದು ನ್ಯಾಯಾಲಯ ಬೇಸರಿಸಿದೆ.

ಈ ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು. ಬಿಎನ್‌ಎಸ್‌ಎಸ್‌ನ ಸೆಕ್ಷನ್‌ 184ಕ್ಕೆ ತಿದ್ದುಪಡಿ ತರಬೇಕು ಎಂದು ಪೀಠ ನಿರ್ದೇಶಿಸಿದೆ.

ಇದನ್ನೂ ಓದಿ : ಅಲೋಪತಿ, ಕೊರೋನಿಲ್ ಕುರಿತ ಹೇಳಿಕೆ ತೆಗೆಯಿರಿ: ರಾಮ್‌ದೇವ್‌, ಬಾಲಕೃಷ್ಣಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...