Homeಫ್ಯಾಕ್ಟ್‌ಚೆಕ್FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

- Advertisement -
- Advertisement -

ಜುಲೈ 26, 2024ರಂದು ಬೆಂಗಳೂರಿನ ಮಾಂಸ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ರೈಲಿನ ಮೂಲಕ ತಂದ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂ ಸಂ​ಘಟನೆಯ ಪುನೀತ್​ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಝಾಕ್ ಮತ್ತು ಪುನೀತ್ ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವರನ್ನು ಬಂಧಿಸಿದ್ದರು.

ಇದೇ ವೇಳೆ ಬಿಬಿಎಂಪಿಯ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಮಾಂಸದ ಮಾದರಿಯನ್ನು ತೆಗೆದುಕೊಂಡು ಹೋಗಿದ್ದರು. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು‌ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

“ಬೆಂಗಳೂರು ನಗರಕ್ಕೆ ಬಂದ ಜೈಪುರ–ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ 4,500 ಕೆ.ಜಿಯಷ್ಟು ನಾಯಿಯ ಮಾಂಸ ತರಲಾಗಿದೆ. ಇದನ್ನು ಅಬ್ದುಲ್ ರಝಾಕ್ ಮಾಲೀಕತ್ವದ ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಿತ್ಯ ನೂರಾರು ಬಾಕ್ಸ್‌ನಲ್ಲಿ ಮಾಂಸ ತರಲಾಗುತ್ತಿದೆ” ಎಂದು ಪುನೀತ್‌ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು.

ಈ ಆರೋಪವನ್ನೆ ಆಧಾರವಾಗಿಟ್ಟುಕೊಂಡು ಬಲಪಂಥೀಯ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ “ಮುಸ್ಲಿಂ ವ್ಯಾಪಾರಿಗಳು ಹಿಂದೂಗಳಿಗೆ ನಾಯಿ ಮಾಂಸ ತಿನ್ನಿಸುವ ಮೂಲಕ ಮೋಸ ಮಾಡುತ್ತಿದ್ದಾರೆ” ಎಂಬ ಕೋಮು ದ್ವೇಷದ ನಿರೂಪಣೆಯೊಂದಿಗೆ ಕಾರ್ಯಕ್ರಮ ರೂಪಿಸುವುದಲ್ಲದೆ, ಮುಸ್ಲಿಮರೇ ಈ ಕೃತ್ಯದ ವಿರುದ್ದ ಧನಿ ಎತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

ಸುದ್ದಿಯಲ್ಲಿ ಟಿವಿ ವಿಕ್ರಮದ ನಿರೂಪಕಿ ಹೀಗೆ ಹೇಳುತ್ತಾರೆ, “ಇಲ್ಲಿಯವರೆಗೆ ರಾಜ್ಯದಲ್ಲಿ ಗೋವುಗಳು ಮಾತ್ರ ಸೇಫ್ ಅಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಾಯಿಗಳಿಗೂ ಸೇಫ್ ಇಲ್ಲ. ಬೀದಿ ನಾಯಿಗಳು ಖಾಲಿಯಾದ ಮೇಲೆ ಅಬ್ದುಲ್ ರಝಾಕ್ ಆಂಡ್ ಗ್ಯಾಂಗ್ ಮನೆಯಲ್ಲಿ ಸಾಕು ನಾಯಿಗಳನ್ನು ಕದ್ದು ನಾಯಿ ಮಾಂಸ ಮಾರಾಟ ಮಾಡಬಹುದು”.

ಹಾಗಿದ್ದರೆ ಟಿವಿ ವಿಕ್ರಮ ನಿರೂಪಕಿ ಆರೋಪಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಮಾಡಿದ ವೇಳೆ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ನಾಯಿ ಮಾಂಸ ಎಂಬುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪುನೀತ್ ಕೆರೆಹಳ್ಳಿ ಮತ್ತು ತಂಡ ಆರೋಪಿಸಿದಂತೆ ಅಬ್ದುಲ್ ರಝಾಕ್ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿರುವುದು ಮೇಕೆ ಮಾಂಸ. ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬುವುದು ಸುಳ್ಳು ಎಂದು ಗೊತ್ತಾಗಿದೆ. ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಮಾಂಸದ ವ್ಯಾಪಾರಿ ರಾಜಸ್ಥಾನದಿಂದ ಪ್ರತಿ ವಾರಕ್ಕೆ, 15 ದಿನಗಳಿಗೊಮ್ಮೆ ಅಥವಾ ಬೇಕಾದ ಸಂದರ್ಭದಲ್ಲಿ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅನಾವಶ್ಯಕವಾಗಿ ಏನೇನೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯದ ಗೃಹ ಸಚಿವರೇ ಹೇಳಿರುವಂತೆ ಪ್ರಯೋಗಾಲಯದಿಂದ ಬಂದಿರುವ ವರದಿಯಲ್ಲಿ ರಾಜಸ್ಥಾನದಿಂದ ಬಂದಿರುವುದು ನಾಯಿ ಮಾಂಸವಲ್ಲ ಮೇಕೆ ಮಾಂಸ ಎಂದು ದೃಢಪಟ್ಟಿದೆ. ಹಾಗಾದರೆ, ಟಿವಿ ವಿಕ್ರಮ ತಂಡ ಹೀಗೆ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿಂದಿನ ಉದ್ದೇಶವಾದರೂ ಏನು? ಇವರ ಮೇಲೆ ಯಾವುದೇ ಕ್ರಮವಿಲ್ಲವೇ ಎಂದು ಸಾರ್ಜವನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...