Homeಫ್ಯಾಕ್ಟ್‌ಚೆಕ್FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

- Advertisement -
- Advertisement -

ಜುಲೈ 26, 2024ರಂದು ಬೆಂಗಳೂರಿನ ಮಾಂಸ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ರೈಲಿನ ಮೂಲಕ ತಂದ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂ ಸಂ​ಘಟನೆಯ ಪುನೀತ್​ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಝಾಕ್ ಮತ್ತು ಪುನೀತ್ ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವರನ್ನು ಬಂಧಿಸಿದ್ದರು.

ಇದೇ ವೇಳೆ ಬಿಬಿಎಂಪಿಯ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಮಾಂಸದ ಮಾದರಿಯನ್ನು ತೆಗೆದುಕೊಂಡು ಹೋಗಿದ್ದರು. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು‌ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

“ಬೆಂಗಳೂರು ನಗರಕ್ಕೆ ಬಂದ ಜೈಪುರ–ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ 4,500 ಕೆ.ಜಿಯಷ್ಟು ನಾಯಿಯ ಮಾಂಸ ತರಲಾಗಿದೆ. ಇದನ್ನು ಅಬ್ದುಲ್ ರಝಾಕ್ ಮಾಲೀಕತ್ವದ ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಿತ್ಯ ನೂರಾರು ಬಾಕ್ಸ್‌ನಲ್ಲಿ ಮಾಂಸ ತರಲಾಗುತ್ತಿದೆ” ಎಂದು ಪುನೀತ್‌ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು.

ಈ ಆರೋಪವನ್ನೆ ಆಧಾರವಾಗಿಟ್ಟುಕೊಂಡು ಬಲಪಂಥೀಯ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ “ಮುಸ್ಲಿಂ ವ್ಯಾಪಾರಿಗಳು ಹಿಂದೂಗಳಿಗೆ ನಾಯಿ ಮಾಂಸ ತಿನ್ನಿಸುವ ಮೂಲಕ ಮೋಸ ಮಾಡುತ್ತಿದ್ದಾರೆ” ಎಂಬ ಕೋಮು ದ್ವೇಷದ ನಿರೂಪಣೆಯೊಂದಿಗೆ ಕಾರ್ಯಕ್ರಮ ರೂಪಿಸುವುದಲ್ಲದೆ, ಮುಸ್ಲಿಮರೇ ಈ ಕೃತ್ಯದ ವಿರುದ್ದ ಧನಿ ಎತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

ಸುದ್ದಿಯಲ್ಲಿ ಟಿವಿ ವಿಕ್ರಮದ ನಿರೂಪಕಿ ಹೀಗೆ ಹೇಳುತ್ತಾರೆ, “ಇಲ್ಲಿಯವರೆಗೆ ರಾಜ್ಯದಲ್ಲಿ ಗೋವುಗಳು ಮಾತ್ರ ಸೇಫ್ ಅಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಾಯಿಗಳಿಗೂ ಸೇಫ್ ಇಲ್ಲ. ಬೀದಿ ನಾಯಿಗಳು ಖಾಲಿಯಾದ ಮೇಲೆ ಅಬ್ದುಲ್ ರಝಾಕ್ ಆಂಡ್ ಗ್ಯಾಂಗ್ ಮನೆಯಲ್ಲಿ ಸಾಕು ನಾಯಿಗಳನ್ನು ಕದ್ದು ನಾಯಿ ಮಾಂಸ ಮಾರಾಟ ಮಾಡಬಹುದು”.

ಹಾಗಿದ್ದರೆ ಟಿವಿ ವಿಕ್ರಮ ನಿರೂಪಕಿ ಆರೋಪಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಮಾಡಿದ ವೇಳೆ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ನಾಯಿ ಮಾಂಸ ಎಂಬುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪುನೀತ್ ಕೆರೆಹಳ್ಳಿ ಮತ್ತು ತಂಡ ಆರೋಪಿಸಿದಂತೆ ಅಬ್ದುಲ್ ರಝಾಕ್ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿರುವುದು ಮೇಕೆ ಮಾಂಸ. ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬುವುದು ಸುಳ್ಳು ಎಂದು ಗೊತ್ತಾಗಿದೆ. ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಮಾಂಸದ ವ್ಯಾಪಾರಿ ರಾಜಸ್ಥಾನದಿಂದ ಪ್ರತಿ ವಾರಕ್ಕೆ, 15 ದಿನಗಳಿಗೊಮ್ಮೆ ಅಥವಾ ಬೇಕಾದ ಸಂದರ್ಭದಲ್ಲಿ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅನಾವಶ್ಯಕವಾಗಿ ಏನೇನೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯದ ಗೃಹ ಸಚಿವರೇ ಹೇಳಿರುವಂತೆ ಪ್ರಯೋಗಾಲಯದಿಂದ ಬಂದಿರುವ ವರದಿಯಲ್ಲಿ ರಾಜಸ್ಥಾನದಿಂದ ಬಂದಿರುವುದು ನಾಯಿ ಮಾಂಸವಲ್ಲ ಮೇಕೆ ಮಾಂಸ ಎಂದು ದೃಢಪಟ್ಟಿದೆ. ಹಾಗಾದರೆ, ಟಿವಿ ವಿಕ್ರಮ ತಂಡ ಹೀಗೆ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿಂದಿನ ಉದ್ದೇಶವಾದರೂ ಏನು? ಇವರ ಮೇಲೆ ಯಾವುದೇ ಕ್ರಮವಿಲ್ಲವೇ ಎಂದು ಸಾರ್ಜವನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...