Homeಮುಖಪುಟವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ 'ಗಾಡ್ಗೀಳ್ ಸಮಿತಿ ವರದಿ'

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ವರದಿಯು ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.

ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ'(WGEEP) ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಯನಾಡ್‌ ಭೂಕುಸಿತ ದುರಂತ ಸಂಭವಿಸಿರುವ ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು.

ಜುಲೈ 30ರಂದು ಭೀಕರ ಭೂಕುಸಿತ ಸಂಭವಿಸಿ ನರಕ ಸದೃಶ್ಯವಾಗಿ ಮಾರ್ಪಟ್ಟಿರುವ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಝ ಗ್ರಾಮಗಳು ವಯನಾಡ್‌ ಜಿಲ್ಲೆಯ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿ ವ್ಯಾಪ್ತಿಯಲ್ಲಿ ಬರುತ್ತವೆ. ಈ ಮೆಪ್ಪಾಡಿ ಗಾಡ್ಗೀಳ್ ಸಮಿತಿ ಗುರುತಿಸಿದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಒಂದಾಗಿದೆ.

ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾಧವ್ ಗಾಡ್ಗೀಳ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಉತ್ಸಾಹ ತೋರಿಲ್ಲ. ಬದಲಿಗೆ ಅದನ್ನು ದುರ್ಬಲಗೊಳಿಸುವ ಕ್ರಮಗಳಿಗೆ ಮುಂದಾಯಿತು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಲು ಪ್ರಸ್ತಾಪಿಸಿತ್ತು.

ಪರಿಸರ ಸೂಕ್ಷ್ಮ ಪ್ರದೇಶ-1(ESZ-I)ಮತ್ತು 2 (ESZ-II)ಎಂದು ವರ್ಗೀಕರಿಸಿ, ಈ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಲು ಸಮಿತಿಯು ಶಿಫಾರಸು ಮಾಡಿತ್ತು.

“ನಾವು ಪರಿಸರ ಸೂಕ್ಷ್ಮ ಪ್ರದೇಶ -Iರಲ್ಲಿ ಕಲ್ಲುಗಣಿಗಾರಿಕೆ ಮತ್ತು ಕೆಂಪು ವರ್ಗದ ಕೈಗಾರಿಕೆಗಳಿಗೆ ಅವಕಾಶ ನೀಡಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ, ಕಲ್ಲುಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿರಬೇಕು ಎಂದು ಸೂಚಿಸಿದ್ದೆವು. ಆದರೆ, ಸರ್ಕಾರ ಕ್ವಾರಿಗಳು ಮತ್ತು ಜನವಸತಿ ಪ್ರದೇಶದ ನಡುವಿನ ಅಂತರವನ್ನು ಕಡಿತಗೊಳಿಸಿ 50 ಮೀಟರ್‌ ಮಾಡಿತು” ಎಂದು ಎಂದು WGEEP ಸದಸ್ಯರಾಗಿದ್ದ ಪರಿಸರವಾದಿ ವಿಎಸ್ ವಿಜಯನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ನಂತರ ಗಾಡ್ಗೀಳ್ ವರದಿಯನ್ನು ತಿರಸ್ಕರಿಸಿತ್ತು. ಮತ್ತೊಂದು ವರದಿ ನೀಡಲು ಕಸ್ತೂರಿರಂಗನ್ ನೇತೃತ್ವದ ಹೊಸ ಸಮಿತಿಯನ್ನು ನೇಮಿಸಿತ್ತು. ಗಾಡ್ಗೀಳ್ ಸಮಿತಿಯು ಸಂಪೂರ್ಣ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಸೂಚಿಸಲು ಶಿಫಾರಸು ಮಾಡಿತ್ತು. ಆದರೆ, ಕಸ್ತೂರಿರಂಗನ್ ಸಮಿತಿಯು ಇಎಸ್ಎಗಳ ವ್ಯಾಪ್ತಿಯನ್ನು ಪಶ್ಚಿಮ ಘಟ್ಟಗಳ ಶೇ. 37ಕ್ಕೆಇಳಿಸಿತು.

ಕೇರಳದಲ್ಲಿ ಮಾಜಿ ಸಿಎಂ ದಿವಂಗತ ಉಮ್ಮನ್ ಚಾಂಡಿ ನೇತೃತ್ವದ ರಾಜ್ಯ ಸರ್ಕಾರವು WGEEP ವರದಿಯನ್ನು ವಿರೋಧಿಸಿತ್ತು. ಸ್ವತಂತ್ರ ವರದಿ ನೀಡಲು ಉಮ್ಮನ್ ವಿ ಉಮ್ಮನ್ ನೇತೃತ್ವದ ರಾಜ್ಯಮಟ್ಟದ ಮತ್ತೊಂದು ಸಮಿತಿಗೆ ಜವಾಬ್ದಾರಿ ನೀಡಿತ್ತು. ಆ ಸಮಯದಲ್ಲಿ, ಗಾಡ್ಗೀಳ್ ವರದಿಯ ಅನುಷ್ಠಾನಕ್ಕೆ ಒಲವು ತೋರಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ ಕೂಡ ಒಬ್ಬರು.

“ವಾಸ್ತವವಾಗಿ, ಗಾಡ್ಗೀಳ್ ವರದಿಯು ಪಶ್ಚಿಮ ಘಟ್ಟಗಳ ಪರಿಸರ ಪ್ರಾಮುಖ್ಯತೆಯನ್ನು ಗುರುತಿಸಿತ್ತು. ಆದರೆ, ಕ್ಷುಲ್ಲಕ ರಾಜಕೀಯ ಕಾರಣಗಳಿಗಾಗಿ ಸರ್ಕಾರಗಳು ಅದನ್ನು ವಿರೋಧಿಸಿದ್ದವು. ಪರಿಸರ ದುರ್ಬಲ ಪ್ರದೇಶವನ್ನು ಕೇವಲ ಸರ್ಕಾರಿ ಆದೇಶದಿಂದ ದುರ್ಬಲವಲ್ಲ ಎಂದು ಕರೆಯಲು ಹೇಗೆ ಸಾಧ್ಯ? ಈಗಿನ ಕೇರಳದ ಎಡರಂಗ ಸರ್ಕಾರ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಅನಧಿಕೃತ ನಿರ್ಮಾಣಗಳನ್ನು ಕ್ರಮಬದ್ಧಗೊಳಿಸಿದ ನಂತರ, ಅಕ್ರಮ ಕಲ್ಲುಗಣಿಗಾರಿಕೆಯನ್ನು ಕೂಡ ಸಕ್ರಮಗೊಳಿಸುವ ಪ್ರಯತ್ನ ಮಾಡಿರುವುದು ವಿಷಾದಕರ” ಎಂದು ಪಿಟಿ ಥಾಮಸ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೇರಳದ ಪರಿಸರ ಸೂಕ್ಷ್ಮ ಪ್ರದೇಶಗಳು (ESZ-I,II)

ಗಾಡ್ಗೀಳ್ ನೇತೃತ್ವದ ಸಮಿತಿಯ ವರದಿಯ ಪ್ರಕಾರ, ವಯನಾಡ್‌ ಜಿಲ್ಲೆಯ ವೈತಿರಿ, ಮಾನಂತವಾಡಿ ಮತ್ತು ಸುಲ್ತಾನ್ ಬತ್ತೇರಿಗಳು ಪರಿಸರ ಸೂಕ್ಷ್ಮ ಪ್ರದೇಶ- Iರಲ್ಲಿ ಬರುತ್ತವೆ.

ಅದೇ ರೀತಿ ಮಲಪ್ಪುರಂನ ಪೆರಿಂದಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಪರಿಸರ ಸೂಕ್ಷ್ಮ ಪ್ರದೇಶ- IIರಲ್ಲಿ ಬರುವ ತಾಲೂಕುಗಳಲ್ಲಿ ಸೇರಿವೆ.

WGEEP ಸಮಿತಿ ಗುರುತಿಸಿದ ಕೇರಳದ ಪರಿಸರ ಸೂಕ್ಷ್ಮ ಸ್ಥಳಗಳು :

ಮಂಡಕೋಲ್, ಪಣತ್ತಡಿ, ಪೈದಲ್ಮಲ, ಬ್ರಹ್ಮಗಿರಿ- ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಯಾಡಿ, ನಿಲಂಬೂರ್ – ಮೇಪ್ಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಂಬಲಂ, ಸಿರುವಣಿ, ನೆಲ್ಲಿಯಂಪದಿ, ಪೀಚಿ – ವಝನಿ, ಅದಿರಪಲ್ಲಿ – ವಝಚಲ್, ಪೂಯಂಕುಟ್ಟಿ – ಮುನ್ನಾರ್, ಏಲಕ್ಕಿ ಬೆಟ್ಟಗಳು, ಪೆರಿಯಾರ್, ಕುಲತುಪುಝ, ಅಗಸ್ತ್ಯ ಮಾಲಾ, ಸಂರಕ್ಷಿತ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶಗಳು.

ಇದನ್ನೂ ಓದಿ : ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...