Homeಮುಖಪುಟವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ 'ಗಾಡ್ಗೀಳ್ ಸಮಿತಿ ವರದಿ'

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ವರದಿಯು ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.

ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ'(WGEEP) ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಯನಾಡ್‌ ಭೂಕುಸಿತ ದುರಂತ ಸಂಭವಿಸಿರುವ ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು.

ಜುಲೈ 30ರಂದು ಭೀಕರ ಭೂಕುಸಿತ ಸಂಭವಿಸಿ ನರಕ ಸದೃಶ್ಯವಾಗಿ ಮಾರ್ಪಟ್ಟಿರುವ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಝ ಗ್ರಾಮಗಳು ವಯನಾಡ್‌ ಜಿಲ್ಲೆಯ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿ ವ್ಯಾಪ್ತಿಯಲ್ಲಿ ಬರುತ್ತವೆ. ಈ ಮೆಪ್ಪಾಡಿ ಗಾಡ್ಗೀಳ್ ಸಮಿತಿ ಗುರುತಿಸಿದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಒಂದಾಗಿದೆ.

ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾಧವ್ ಗಾಡ್ಗೀಳ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಉತ್ಸಾಹ ತೋರಿಲ್ಲ. ಬದಲಿಗೆ ಅದನ್ನು ದುರ್ಬಲಗೊಳಿಸುವ ಕ್ರಮಗಳಿಗೆ ಮುಂದಾಯಿತು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಲು ಪ್ರಸ್ತಾಪಿಸಿತ್ತು.

ಪರಿಸರ ಸೂಕ್ಷ್ಮ ಪ್ರದೇಶ-1(ESZ-I)ಮತ್ತು 2 (ESZ-II)ಎಂದು ವರ್ಗೀಕರಿಸಿ, ಈ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಲು ಸಮಿತಿಯು ಶಿಫಾರಸು ಮಾಡಿತ್ತು.

“ನಾವು ಪರಿಸರ ಸೂಕ್ಷ್ಮ ಪ್ರದೇಶ -Iರಲ್ಲಿ ಕಲ್ಲುಗಣಿಗಾರಿಕೆ ಮತ್ತು ಕೆಂಪು ವರ್ಗದ ಕೈಗಾರಿಕೆಗಳಿಗೆ ಅವಕಾಶ ನೀಡಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ, ಕಲ್ಲುಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿರಬೇಕು ಎಂದು ಸೂಚಿಸಿದ್ದೆವು. ಆದರೆ, ಸರ್ಕಾರ ಕ್ವಾರಿಗಳು ಮತ್ತು ಜನವಸತಿ ಪ್ರದೇಶದ ನಡುವಿನ ಅಂತರವನ್ನು ಕಡಿತಗೊಳಿಸಿ 50 ಮೀಟರ್‌ ಮಾಡಿತು” ಎಂದು ಎಂದು WGEEP ಸದಸ್ಯರಾಗಿದ್ದ ಪರಿಸರವಾದಿ ವಿಎಸ್ ವಿಜಯನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ನಂತರ ಗಾಡ್ಗೀಳ್ ವರದಿಯನ್ನು ತಿರಸ್ಕರಿಸಿತ್ತು. ಮತ್ತೊಂದು ವರದಿ ನೀಡಲು ಕಸ್ತೂರಿರಂಗನ್ ನೇತೃತ್ವದ ಹೊಸ ಸಮಿತಿಯನ್ನು ನೇಮಿಸಿತ್ತು. ಗಾಡ್ಗೀಳ್ ಸಮಿತಿಯು ಸಂಪೂರ್ಣ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಸೂಚಿಸಲು ಶಿಫಾರಸು ಮಾಡಿತ್ತು. ಆದರೆ, ಕಸ್ತೂರಿರಂಗನ್ ಸಮಿತಿಯು ಇಎಸ್ಎಗಳ ವ್ಯಾಪ್ತಿಯನ್ನು ಪಶ್ಚಿಮ ಘಟ್ಟಗಳ ಶೇ. 37ಕ್ಕೆಇಳಿಸಿತು.

ಕೇರಳದಲ್ಲಿ ಮಾಜಿ ಸಿಎಂ ದಿವಂಗತ ಉಮ್ಮನ್ ಚಾಂಡಿ ನೇತೃತ್ವದ ರಾಜ್ಯ ಸರ್ಕಾರವು WGEEP ವರದಿಯನ್ನು ವಿರೋಧಿಸಿತ್ತು. ಸ್ವತಂತ್ರ ವರದಿ ನೀಡಲು ಉಮ್ಮನ್ ವಿ ಉಮ್ಮನ್ ನೇತೃತ್ವದ ರಾಜ್ಯಮಟ್ಟದ ಮತ್ತೊಂದು ಸಮಿತಿಗೆ ಜವಾಬ್ದಾರಿ ನೀಡಿತ್ತು. ಆ ಸಮಯದಲ್ಲಿ, ಗಾಡ್ಗೀಳ್ ವರದಿಯ ಅನುಷ್ಠಾನಕ್ಕೆ ಒಲವು ತೋರಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ ಕೂಡ ಒಬ್ಬರು.

“ವಾಸ್ತವವಾಗಿ, ಗಾಡ್ಗೀಳ್ ವರದಿಯು ಪಶ್ಚಿಮ ಘಟ್ಟಗಳ ಪರಿಸರ ಪ್ರಾಮುಖ್ಯತೆಯನ್ನು ಗುರುತಿಸಿತ್ತು. ಆದರೆ, ಕ್ಷುಲ್ಲಕ ರಾಜಕೀಯ ಕಾರಣಗಳಿಗಾಗಿ ಸರ್ಕಾರಗಳು ಅದನ್ನು ವಿರೋಧಿಸಿದ್ದವು. ಪರಿಸರ ದುರ್ಬಲ ಪ್ರದೇಶವನ್ನು ಕೇವಲ ಸರ್ಕಾರಿ ಆದೇಶದಿಂದ ದುರ್ಬಲವಲ್ಲ ಎಂದು ಕರೆಯಲು ಹೇಗೆ ಸಾಧ್ಯ? ಈಗಿನ ಕೇರಳದ ಎಡರಂಗ ಸರ್ಕಾರ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಅನಧಿಕೃತ ನಿರ್ಮಾಣಗಳನ್ನು ಕ್ರಮಬದ್ಧಗೊಳಿಸಿದ ನಂತರ, ಅಕ್ರಮ ಕಲ್ಲುಗಣಿಗಾರಿಕೆಯನ್ನು ಕೂಡ ಸಕ್ರಮಗೊಳಿಸುವ ಪ್ರಯತ್ನ ಮಾಡಿರುವುದು ವಿಷಾದಕರ” ಎಂದು ಪಿಟಿ ಥಾಮಸ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೇರಳದ ಪರಿಸರ ಸೂಕ್ಷ್ಮ ಪ್ರದೇಶಗಳು (ESZ-I,II)

ಗಾಡ್ಗೀಳ್ ನೇತೃತ್ವದ ಸಮಿತಿಯ ವರದಿಯ ಪ್ರಕಾರ, ವಯನಾಡ್‌ ಜಿಲ್ಲೆಯ ವೈತಿರಿ, ಮಾನಂತವಾಡಿ ಮತ್ತು ಸುಲ್ತಾನ್ ಬತ್ತೇರಿಗಳು ಪರಿಸರ ಸೂಕ್ಷ್ಮ ಪ್ರದೇಶ- Iರಲ್ಲಿ ಬರುತ್ತವೆ.

ಅದೇ ರೀತಿ ಮಲಪ್ಪುರಂನ ಪೆರಿಂದಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಪರಿಸರ ಸೂಕ್ಷ್ಮ ಪ್ರದೇಶ- IIರಲ್ಲಿ ಬರುವ ತಾಲೂಕುಗಳಲ್ಲಿ ಸೇರಿವೆ.

WGEEP ಸಮಿತಿ ಗುರುತಿಸಿದ ಕೇರಳದ ಪರಿಸರ ಸೂಕ್ಷ್ಮ ಸ್ಥಳಗಳು :

ಮಂಡಕೋಲ್, ಪಣತ್ತಡಿ, ಪೈದಲ್ಮಲ, ಬ್ರಹ್ಮಗಿರಿ- ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಯಾಡಿ, ನಿಲಂಬೂರ್ – ಮೇಪ್ಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಂಬಲಂ, ಸಿರುವಣಿ, ನೆಲ್ಲಿಯಂಪದಿ, ಪೀಚಿ – ವಝನಿ, ಅದಿರಪಲ್ಲಿ – ವಝಚಲ್, ಪೂಯಂಕುಟ್ಟಿ – ಮುನ್ನಾರ್, ಏಲಕ್ಕಿ ಬೆಟ್ಟಗಳು, ಪೆರಿಯಾರ್, ಕುಲತುಪುಝ, ಅಗಸ್ತ್ಯ ಮಾಲಾ, ಸಂರಕ್ಷಿತ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶಗಳು.

ಇದನ್ನೂ ಓದಿ : ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...