Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಂಬೈನಲ್ಲಿ ಬಾರ್ಬರ್ (ಕ್ಷೌರಿಕ) ಜಿಹಾದ್ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ನಿಲುಮೆ ಎಂಬ ಫೇಸ್‌ಬುಕ್ ಗ್ರೂಪ್ ಒಂದರಲ್ಲಿ ಉಮಾ ಶಂಕರ್ ಎಂಬಾತ ಫೋಟೋ ಹಂಚಿಕೊಂಡು ಹೀಗೆ ಬರೆದಿದ್ದಾರೆ..”ಮುಂಬೈನಲ್ಲಿ ಬಾರ್ಬರ್ ಜಿಹಾದ್… ಮಸೀದಿಗಳಲ್ಲಿ ಹಿಂದೂಗಳ ಗಡ್ಡ/ಕೂದಲು ಕತ್ತರಿಸುವಾಗ ಏಡ್ಸ್ ಬ್ಲೇಡ್‌ಗಳಿಂದ ಲಘುವಾಗಿ ಕತ್ತರಿಸುವ ಕೌಶಲ್ಯವನ್ನು ಕಲಿಸಲಾಗುತ್ತದೆ ಮತ್ತು ಈ ಕೆಲಸಕ್ಕೆ ಅವರು ಅಲ್ಲಿಂದ ಹಣವನ್ನು ಪಡೆಯುತ್ತಾರೆ ಎಂದು ಈ ಹುಡುಗರು ಪೊಲೀಸರಿಗೆ ತಿಳಿಸಿದರು.”

“ಇದು ಹೊಸಾ ಜಿಹಾದ್, ಈ ಮೂಲಕ ಹಿಂದೂಗಳನ್ನು ಏಡ್ಸ್ ರೋಗಿಗಳನ್ನಾಗಿ ಮಾಡಿ ಕೊಲ್ಲಲಾಗುತ್ತಿದೆ.
ಶಸ್ತ್ರಾಸ್ತ್ರಗಳಿಲ್ಲದ ಹೋರಾಟಗಾರರನ್ನು ಈ ಆಂತರಿಕ ಯುದ್ಧಕ್ಕೆ ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಹಿಂದೂಜರು ಶೇವಿಂಗ್ ಮತ್ತು ಕಟಿಂಗ್ ಅನ್ನು ಹಿಂದೂ ಕ್ಷೌರಿಕರಿಂದ ಮಾತ್ರ ಮಾಡಿಸಿಕೊಳ್ಳಿ, ಮಹಿಳೆಯರು ಕೂಡ ಹಿಂದೂಜರಿರುವ ಪಾರ್ಲರ್ಗೆ ಹೋಗಿ(.ನಾಗರಾಜ್ ಖೋಡೆ ನವರ ಪೇಜ್ ಇಂದ )”

ಇದೇ ರೀತಿಯ ಪೋಸ್ಟ್‌ಗಳನ್ನು ಅನೇಕ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಜುಲೈ 18,2013 ರಂದು ‘ಇಂಡಿಯಾ ಟಿವಿ‘ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದರಲ್ಲಿ ಇದೇ ವೈರಲ್ ಫೋಟೋ ಕಂಡು ಬಂದಿದೆ.

ವರದಿಯಲ್ಲಿ ಕ್ರೆಡಿಟ್ ಕಾರ್ಡ್ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಮುಂಬೈ ಪೋಲೀಸರು ಭೋಜ್ಪುರಿ ನಟ ಇರ್ಫಾನ್ ಖಾನ್ ಮತ್ತು ಆತನ ಸ್ನೇಹಿತ ಸಂಜಯ್ ಯಾದವ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. “ಕ್ರೆಡಿಟ್ ಕಾರ್ಡ್‌ಗಳು, ಚೆಕ್ ಪುಸ್ತಕಗಳು ಮತ್ತು ಬಿಲ್ ಪುಸ್ತಕಗಳನ್ನು ಕದ್ದು, ನಂತರ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಮುಂಬೈ ಪೊಲೀಸರು ಬಿಹಾರದ ಛಾಪ್ರಾ ಜಿಲ್ಲೆಯಿಂದ ಬಂಧಿಸಿದ್ದಾರೆ” ಎಂದು ವರದಿ ವಿವರಿಸಿದೆ.

ಜುಲೈ 18, 2013ರಂದು ಎಬಿಪಿ ನ್ಯೂಸ್ ಮತ್ತು ಟಿವಿ9 ಗುಜರಾತ್ ಕೂಡ ಇದೇ ಪ್ರಕರಣದ ಕುರಿತು ವರದಿ ಮಾಡಿತ್ತು. ಎರಡೂ ವರದಿಗಳಲ್ಲೂ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಹೇಳಲಾಗಿತ್ತು.

ಮಾಧ್ಯಮ ವರದಿಗಳ ಪ್ರಕಾರ, ವೈರಲ್ ಫೋಟೋ 2013ರಲ್ಲಿ ನಡೆದ ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಿದ್ದಾಗಿದೆ. ಅಲ್ಲದೆ, ಬಾರ್ಬರ್ ಜಿಹಾದ್, ಹಿಂದೂಗಳಿಗೆ ಏಡ್ಸ್ ಹರಡುವುದಕ್ಕೆ ಸಂಬಂಧಿಸಿದಲ್ಲ. ಸಾಮಾಜಿಕ ಜಾಲತಾಣದ ಸುಳ್ಳು ಪೋಸ್ಟ್‌ಗಳು ಮುಸ್ಲಿಮರ ವಿರುದ್ದ ಕೋಮು ವೈಷಮ್ಯ ಹರಡುವ ಉದ್ದೇಶಕ್ಕೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...