Homeಮುಖಪುಟಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಆಯ್ಕೆ ಅನೂರ್ಜಿತಗೊಳಿಸಿದ ಯುಪಿಎಸ್‌ಸಿ

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಆಯ್ಕೆ ಅನೂರ್ಜಿತಗೊಳಿಸಿದ ಯುಪಿಎಸ್‌ಸಿ

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ಮಹಾರಾಷ್ಟ್ರ ಕೇಡರ್‌ನ 2022ನೇ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರ ಆಯ್ಕೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಇಂದು (ಜು.31) ಅನೂರ್ಜಿತಗೊಳಿಸಿದೆ.

ಅಲ್ಲದೆ, ಪೂಜಾ ಅವರು ಜೀವನಪರ್ಯಂತ ಆಯೋಗ ನಡೆಸುವ ಯಾವುದೇ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಇಲ್ಲ ಎಂದು ನಿರ್ಬಂಧ ವಿಧಿಸಿದೆ.

ಅಂಗವೈಕಲ್ಯ ಹಾಗೂ ಒಬಿಸಿ ಕೋಟಾ ದುರುಪಯೋಗಪಡಿಸಿದ್ದಾರೆ ಎಂಬ ಪೂಜಾ ಖೇಡ್ಕರ್ ವಿರುದ್ದದ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಅನೂರ್ಜಿತಗೊಳಿಸಲಾಗಿದೆ ಎಂದು ಯುಪಿಎಸ್‌ಸಿ ಹೇಳಿರುವುದಾಗಿ ವರದಿಯಾಗಿದೆ.

ಮಹಾರಾಷ್ಟ್ರದ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೂಜಾ ಅವರ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆ, ಅವರನ್ನು ವರ್ಗಾವಣೆ ಮಾಡಲಾಗಿತ್ತು. ಯುಪಿಎಸ್‌ಸಿ ಪೂಜಾ ವಿರುದ್ದ ನಾಗರಿಕ ಸೇವಾ ಪರೀಕ್ಷೆ(ಸಿಎಸ್‌ಇ) 2022ರ ನಿಯಮಗಳ ಅಡಿ ತನಿಖೆ ಕೈಗೊಂಡಿತ್ತು.

ತಮ್ಮ ಮೇಲಿನ ಆರೋಪಗಳಿಗೆ ಜುಲೈ 25ರೊಳಗೆ ಉತ್ತರ ನೀಡುವಂತೆ ಪೂಜಾ ಅವರಿಗೆ ಯುಪಿಎಸ್‌ಸಿ ನೋಟಿಸ್ ನೀಡಿತ್ತು. ಆದರೆ, ಅವರು ಆಗಸ್ಟ್ 4ರವರೆಗೆ ಸಮಯ ವಿಸ್ತರಿಸುವಂತೆ ಕೋರಿದ್ದರು. ಅದಕ್ಕೆ ನಿರಾಕರಿಸಿದ್ದ ಯುಪಿಎಸ್‌ಸಿ ಜುಲೈ 30ರೊಳಗೆ ಉತ್ತರ ನೀಡುವಂತೆ ಆದೇಶಿಸಿತ್ತು. ನಿಗದಿತ ಅವಧಿಯಲ್ಲಿ ಪ್ರತಿಕ್ರಿಯೆ ನೀಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಪೂಜಾ ನಿಗದಿತ ಅವಧಿಯಲ್ಲಿ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ.

ಪೂಜಾ ಖೇಡ್ಕರ್ ವಿರುದ್ದ ಆರೋಪದ ತನಿಖೆ ವೇಳೆ ಲಭ್ಯವಿರುವ ಎಲ್ಲಾ ದಾಖಲೆಗಳನ್ನು ಯುಪಿಎಸ್‌ಸಿ ಪರಿಶೀಲಿಸಿದೆ. 2009 ಮತ್ತು 2023ರ ನಡುವೆ ಐಎಎಸ್ ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ತೇರ್ಗಡೆಯಾದ 15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ಡೇಟಾವನ್ನು ಪರಿಶೀಲಿಸಲಾಗಿದೆ. ಈ ವೇಳೆ ಪೂಜಾ ಸುಳ್ಳು ಹೇಳಿರುವುದು ರುಜುವಾತಾಗಿದೆ ಎಂದು ವರದಿಗಳು ತಿಳಿಸಿವೆ.

ಕಳೆದ ಜೂನ್‌ನಲ್ಲಿ ಪುಣೆಯ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಪತ್ರ ಬರೆದು ಪೂಜಾ ಖೇಡ್ಕರ್ ವಿರುದ್ದ ಆರೋಪಗಳನ್ನು ಮಾಡಿದಾಗ ಅವರ ಕುರಿತು ಚರ್ಚೆಗಳು ಪ್ರಾರಂಭವಾಗಿತ್ತು. ಪ್ರೊಬೇಷನರಿ ಅಧಿಕಾರಿ ಪೂಜಾ ಅವರು ಕಾರು, ಸಿಬ್ಬಂದಿ ಮತ್ತು ಕಚೇರಿಯಂತಹ ಸವಲತ್ತುಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತನ್ನ ಪತ್ರದಲ್ಲಿ ಆರೋಪಿಸಿದ್ದರು. ನಂತರ ಪೂಜಾ ಅವರನ್ನು ವಾಶಿಮ್‌ಗೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ : ಅನುರಾಗ್ ಠಾಕೂರ್ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಿ ಮೋದಿ : ಹಕ್ಕುಚ್ಯುತಿ ದೂರು ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Just dismissal from service and dibar from upsc examinations is not at all punishment. Recover all the salary and allowances from the date of appointment
    Apart criminal case to be filed and to be jailed wrong declaration.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...