Homeಸಾಮಾಜಿಕವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

ವಿಜ್ಞಾನ ನಾಚುವಂತಹ ಪೂಜಾ, ಜ್ಯೋತಿಷ್ಯ ಆವಿಷ್ಕಾರಗಳು!

- Advertisement -
- Advertisement -

ಪ್ಪತ್ತನೆಯ ಶತಮಾನದ ಅದಿಭಾಗದಿಂದ ಹಿಡಿದು ಇತ್ತೀಚಿನವರೆಗೆ ವಿಶ್ವದಲ್ಲಿ ಸಾವಿರಾರು ಆವಿಷ್ಕಾರಗಳಾಗಿವೆ. ಇಂದು ಮಧ್ಯವಯಸ್ಸಿನಲ್ಲಿರುವವರು ಅದೃಷ್ಟಶಾಲಿಗಳೆಂದು ಹೇಳಬಹುದು!
ಚಿಮಣಿ ದೀಪಗಳಿದ್ದ ಮನೆಗಳಿಗೆ ವಿದ್ಯುತ್ ದೀಪಗಳು ಬಂದಿವೆ. ಟೆಂಟು ಬಂದರೆ ಮಾತ್ರ ನೋಡಲು ಸಾಧ್ಯವಾಗುತ್ತಿದ್ಧ ಸಿನಿಮಾ ಮನೆಯಲ್ಲೇ ಕುಳಿತು ನೋಡಬಹುದು. ಸಿನಿಮಾ, ಧಾರಾವಾಹಿಗಳೇ ಜೀವನ ಎಂದು ತಿಳಿದುಕೊಂಡವರೂ ನಮ್ಮ ನಡುವೆ ಇದ್ದಾರೆ.
ಸಂಪರ್ಕದ ಕೊಂಡಿಯಾಗಿದ್ದ ಅಂಚೆ ಇಂದು ಇತಿಹಾಸವಾಗುತ್ತಿದೆ. ಯಾರಾದರೂ ಸತ್ತರೆ ದೂರದ ಊರುಗಳಲ್ಲಿ ಇರುವ ಬಂಧುಗಳಿಗೆ “ಮದರ್ ಸೀರಿಯಸ್. ಸ್ಟಾರ್ಟ್ ಇಮ್ಮಿಡಿಯೆಟ್ಲಿ” ಎಂದು ‘ವಯರ್’ ಕಳಿಸುತ್ತಿದ್ದ- ಅಂದರೆ ಟೆಲಿಗ್ರಾಂ ಕಳಿಸುತ್ತಿದ್ದ ಕಾಲದಿಂದ ವಯರ್ ಇಲ್ಲದೇ ಹೆಣದ ಫೋಟೊ ತೆಗೆದು ಲೈವಾಗಿ ಸಂಬಂಧಿಕರಿಗೆ ತಿಳಿಸುವ ಯುಗವನ್ನು ಮುಟ್ಟಿದ್ದೇವೆ! ಕಂಪ್ಯೂಟರ್ ಬಂದಿದೆ! ಕ್ಯಾಷ್‍ಲೆಸ್ ಆಗಿದ್ದೇವೆ! ವಿಜ್ಞಾನದ ಆವಿಷ್ಕಾರಗಳ ಫಲವನ್ನು ಉಣ್ಣುತ್ತಾ ಬಂದಿದ್ದೇವೆ. ಮೂಷಿಕ, ಗರುಡ, ಸಿಂಹ, ನಂದಿ ವಾಹನರಾಗಿದ್ದ ನಾವು- ಬೈಕ್, ಸ್ಕೂಟರ್, ಕಾರು, ಬಸ್ಸು, ರೈಲು ವಿಮಾನ ವಾಹನರಾಗಿದ್ದೇವೆ! ಚಪ್ಪಡೆ ಭೂಮಿಯನ್ನು ದುಂಡಗೆ ಮಾಡಿದ್ದೇವೆ! ಸಾಮೂಹಿಕ ವಿನಾಶದ ಅಸ್ತ್ರಗಳನ್ನು ದಾಸ್ತಾನು ಇಟ್ಟಿದ್ದೇವೆ! … ವಿಷಗಳನ್ನು, ವಿಷಯಗಳನ್ನು ಉತ್ಪಾದಿಸುತ್ತಿದ್ದೇವೆ!
ಬರೆಯುತ್ತಾ ಹೋದರೆ ಸಾವಿರಾರಿವೆ! ನಮ್ಮ ಸುತ್ತಲೂ ಬೇಕೆಂದೋ ಬೇಡವೆಂದೋ ರಾಶಿಬಿದ್ದಿರುವ ಸಲಕರಣೆಗಳು ತಂತ್ರಜ್ಞಾನಗಳನ್ನು ಒಮ್ಮೆ ನೋಡಿದರೆ, ಇದನ್ನು ಕಂಡುಹಿಡಿದವರ ನೆನಪಾದರೂ ನಮಗಿದೆಯೆ?
ಅದರೆ, ನಮಗೆ ಕೋಟ್ಯಾಂತರ ದೇವರು, ದೈವಗಳ, ಅಂತರ, ಬೆಂತರ, ಕುಲೆ, ಪಿಶಾಚಿಗಳ ನೆನಪಿದೆ! ಯಾಕೆಂದರೆ ನಮಗೆ ಭಯವಿದೆ! ಅದನ್ನೇ ನಾವು ನಂಬಿಕೆ ಎಂದು ಕರೆಯುತ್ತೇವೆ!
ಇದೇ ಭಯವನ್ನು ಬಂಡವಾಳ ಮಾಡಿಕೊಂಡು ಸಾವಿರದ ಒಂದು, ಹನ್ನೊಂದು ಸಾವಿರದ ಒಂದು… ಹೀಗೆ ಜ್ಯೋತಿಷ್ಯ ಮತ್ತು ಪೂಜಾ ಕ್ಷೇತ್ರಗಳಲ್ಲಿ ಅವಿಷ್ಕಾರಗಳಾಗಿವೆ! ಹಿಂದೆ ಮನೆಯ ಒಂದು ಕೋಣೆಯೊಳಗಿನ ಅಥವಾ ಗೋಡೆಗಂಟಿದ ಹಲವಾರು ದೇವರುಗಳಿಗೆ ಊದುಬತ್ತಿ ಹಚ್ಚಿ, ಕೈಮುಗಿದು ಬೇಡಿಕೊಂಡರೆ ಸಾಕಿತ್ತು. ಹೆಚ್ಚು ಭಯವಾದರೆ ಮುಡಿಪು ಇಟ್ಟರೆ ಸಾಕಿತ್ತು! ಅದರೆ, ಈ ಕೋಮುವಾದಿ ವಿಷ ಧರ್ಮದಲ್ಲಿ ಇರಲಿಲ್ಲ! ಈಗ ಹೇಗೆ ಧರ್ಮವನ್ನು ಕೋಮುವಾದಿ ಬಿಸಿನೆಸ್ ಮಾಡುವಲ್ಲಿ ಎಷ್ಟೆಲ್ಲಾ ಅವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ನೀವೇ ನೋಡಬಹುದು.
ಮಗುವಿಗೆ ಹೆಸರು ಇಡುವುದರಿಂದ ಹಿಡಿದು, ಹುಟ್ಟಿದ ಜಾತಕ, ತಗಲಿಕೊಂಡಿರುವ ರೋಗಗಳು, ಪೂರ್ವಜಾತ ದೋಷಗಳು, ನಕ್ಷತ್ರಗಳು, ಅವುಗಳ ಫಲಗಳು, ಯಮಗಂಡ, ರಾಹುಗಂಡ, ಕೇತುಗಂಡ, ನಾಗದೋಷ, ಶನಿಪ್ರಭಾವ ಮತ್ತು ಶಾಪ, ಹಿರಿಯರ ಶಾಪ, ಅಶಾಂತಿ… ಮತ್ತದಕ್ಕೆ ಪರಿಹಾರಗಳು! ಎಲ್ಲವಕ್ಕೂ ಮಹಾ ಸಂಶೋಧನೆಗಳು ಅಗಿವೆ- ವಿಜ್ಞಾನವನ್ನು ನಾಚಿಸುವಷ್ಟು! ನೀವೇ ಯೋಚಿಸಿದರೆ ಲೆಕ್ಕ ಹಾಕಬಹುದು! ಆದರೂ ಮುಂದಕ್ಕೆ ಎಲ್ಲಾ ಸಂಶೋಧನೆಗಳನ್ನೂ ಸಂಶೋಧಕರನ್ನು ವಿವರವಾಗಿ ನೋಡಿ! ಸಂಶೋಧನೆಯ ವಿವರಗಳು ಅನಂತವಾಗಿವೆ!
ಇಂದು ಬೆಳಗಾಗುತ್ತ ಎದ್ದಾಗ ನಾವು ನೋಡುವುದೇನು?! ಟಿವಿ, ಇಂಟರ್ನೆಟ್! ವಿಜ್ಞಾನದ ಉತ್ಪತ್ತಿಗಳಲ್ಲಿ ರಾರಾಜಿಸುವುದೇನು ಬ್ರಹ್ಮಾಂಡ ಜ್ಯೋತಿಷ್ಯದ ಮಹಾನ್ ಆವಿಷ್ಕಾರಗಳು! ಆ ಮಹಾನ್ ಸಂಶೋಧನೆಗಳು!
ಮಗು ಹುಟ್ಟಿದಾಗ ಏನು ಮಾಡಬೇಕು? ಬಾಲ ಕರ್ಮಗಳೇನು? ಜಾತದೋಷಗಳೇನು? ಭವಿಷ್ಯ ಏನು? ಗಂಡಗಳೇನು? ದೋಷಗಳೇನು? ಪರಿಹಾರಗಳೇನು?
ಹಾವು ಸತ್ತರೆ ಏನು ಮಾಡಬೇಕು? ಎಷ್ಟು ಜನ ಬ್ರಾಹ್ಮಣರಿಗೆ ಊಟ ಹಾಕಬೇಕು? ಗೋದಾನ, ಭೂದಾನ, ಸುವರ್ಣ ದಾನ ಇತ್ಯಾದಿಗಳ ಪುಣ್ಯ ಫಲವೇನು? ಗೋವು, ಸುವರ್ಣ ಇಲ್ಲದಿದ್ದಲ್ಲಿ ಪರಿಹಾರವೇನು? ಇಂಟರ್‍ನೆಟ್‍ನಿಂದ ಹೇಗೆ ಪೂಜೆ ಮಾಡಿಸಬಹುದು? ಪ್ರಸಾದ ಪಡೆಯಬಹುದು? ಇವೆಲ್ಲವುಗಳ ಬಗ್ಗೆ ಸಾವಿರಾರು ಸಂಶೋಧನೆಗಳು ಲಭ್ಯವಿವೆ! ಪೇಟೆಂಟ್ ಮಾಡಿಕೊಂಡಿರುವ ವಿಜ್ಞಾನಿಗಳೂ ಲಭ್ಯವಿದ್ದಾರೆ! ಅವರನ್ನೆಲ್ಲಾ ಮುಂದಿನ ವಾರ ಭೇಟಿಯಾಗೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...