Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...