Homeಅಂಕಣಗಳುಒಳಮೀಸಲಾತಿ ತೀರ್ಪು : ಕಬಾಬ್‌ನಲ್ಲೊಂದು ಮುಳ್ಳು

ಒಳಮೀಸಲಾತಿ ತೀರ್ಪು : ಕಬಾಬ್‌ನಲ್ಲೊಂದು ಮುಳ್ಳು

"ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ನಿಜ. ಇದು ಸಂತೋಷದ ವಿಚಾರವೇ ಆಗಿದೆ. ಆದರೆ, ಸುಖಾ ಸುಮ್ಮನೆ ಮತ್ತೆ 'ಕ್ರೀಮಿಲೇಯರ್' ಎಂಬ ವಾಮನನನ್ನು ಎಳೆದು ತರಲಾಗಿದೆ"

- Advertisement -
- Advertisement -

1975 ರಲ್ಲಿ ಪಂಜಾಬ್ ಸರ್ಕಾರವು ಅಲ್ಲಿನ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದಿದ್ದ ಮಜಬಿ ಸಿಖ್ ಸಮುದಾಯಕ್ಕೆ ಒಳಮೀಸಲಾತಿ ಘೋಷಿಸಿ ಆದೇಶಿಸಿದಾಗ ಆರಂಭವಾದ ಒಳಮೀಸಲಾತಿ ಪರ ವಿರೋಧದ ಚರ್ಚೆಯು ಪರಸ್ಪರ ಹೋರಾಟವಾಗಿ ಮಾರ್ಪಟ್ಟು 5 ದಶಕಗಳ ಕಾಲ ಮುಂದುವರೆಯಿತು. ಈ ನಡುವೆ ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮಾದಿಗ ದಂಡೋರ ನೇತೃತ್ವದ ಒಳಮೀಸಲಾತಿ ಪರ ಹೋರಾಟವು ಇಡೀ ದೇಶದ ರಾಜಕಾರಣದಲ್ಲಿ ಮೈಲುಗಲ್ಲಾಗಿ ನಿಂತಿದೆ. ಎರಡೂ ರಾಜ್ಯದ ಸರ್ಕಾರಗಳನ್ನು ಏಳಿಸುವ ಹಾಗೂ ಬೀಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ಈ ಸಂಘಟನೆ ವಹಿಸಿದೆ. ಹಾಗಾಗಿ , ಸುಪ್ರೀಂಕೋರ್ಟ್ ನೀಡಿರುವ ಒಳಮೀಸಲಾತಿ ಪರ ತೀರ್ಪನ್ನು ಮಾದಿಗ ದಂಡೋರದಂತೆ ದೇಶದಾದ್ಯಂತ ಒಳಮೀಸಲಾತಿ ಪರ ಹೋರಾಟದ ಕಿಚ್ಚು ಹಚ್ಚಿದ ಹೋರಾಟಗಾರರಿಗೆ ಅರ್ಪಿಸಬೇಕಿದೆ.

ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿಯ ವಿರುದ್ಧ ತೀರ್ಪಿತ್ತಿತ್ತು. ಪಂಜಾಬಿನ ಧವಿಂದರ್ ಪ್ರಕರಣದಲ್ಲಿ ಜಸ್ಟೀಸ್ ಅರುಣ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ಪರ ತೀರ್ಪು ನೀಡಿತ್ತು. ಹೀಗಾಗಿ ಒಳಮೀಸಲಾತಿಯ ಪ್ರಶ್ನೆಯು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠದ ಮುಂದೆ ಬಂದಿತ್ತು. ಈ ಪೀಠದ ಮುಂದೆ ಬಹುಮುಖ್ಯವಾದ ಎರಡು ಪ್ರಶ್ನೆಗಳಿದ್ದವು.

1. ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ನೀಡುವ ಅಧಿಕಾರವಿದೆಯೇ?

2. ಸಂವಿಧಾನಕ್ಕನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಉಪವರ್ಗೀಕರಣ (ಒಳಮೀಸಲಾತಿ) ಮಾಡಬಹುದೇ?

ಈ ಎರಡು ಪ್ರಶ್ನೆಗಳಿಗೆ ಸಂಬಂಧಿಸಿದಂತೆ ದಿನಾಂಕ 01.08.2024ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠವು ತೀರ್ಪು ನೀಡಿದೆ. 6:1ರ ಬಹುಮತದೊಂದಿಗೆ ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ಒಳಮೀಸಲಾತಿ ಸಾಧ್ಯವಿಲ್ಲ ಎಂಬ ತೀರ್ಪನ್ನು ರದ್ದುಗೊಳಿಸಿದೆ. ಈ ಮೂಲಕ ಸಾಂವಿಧಾನಿಕವಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ ನೀಡಬಹುದು. ಹೀಗೆ ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ದಲಿತ ಪರ ತೀರ್ಪು ನೀಡಿದೆ. ಈ ಮೂಲಕ ಒಳಮೀಸಲಾತಿ ಜಾರಿಗಾಗಿ ಉಷಾ ಮೆಹ್ರಾ ಸಮಿತಿಯ ಶಿಫಾರಸಿನಂತೆ ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರದ ಮುಂದೆ ಹೋರಾಟ ಮಾಡುವ ಅವಶ್ಯಕತೆ ಇಲ್ಲದಂತೆ ಮಾಡಿದೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ರಾಜ್ಯ ಸರ್ಕಾರಗಳೇ ಪರಿಶಿಷ್ಟರಿಗೆ ಒಳಮೀಸಲಾತಿ ಜಾರಿ ಮಾಡಬಹುದಾಗಿದೆ.

ಒಳಮೀಸಲಾತಿ ಜಾರಿ ಹೇಗೆ?

ಸುಪ್ರೀಂ ಕೋರ್ಟ್ ತೀರ್ಪಿನಂತೆ 7 ಜನ ನ್ಯಾಯಾಧೀಶರಲ್ಲಿ ಏಕೈಕ ಮಹಿಳಾ ನ್ಯಾಯಾಧೀಶೆಯಾಗಿರುವ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿಯವರನ್ನು ಹೊರತುಪಡಿಸಿದರೆ, ಉಳಿದಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ, ಜಿ.ಎ.ಗವಾಯ್, ವಿಕ್ರಮ್ ನಾಥ್ ಜೆ, ಪಂಕಜ್ ಮಿತ್ತಲ್, ಸತೀಶ್ ಚಂದ್ರ ಶರ್ಮಾ ಇವರುಗಳು ರಾಜ್ಯಗಳಿಗೆ ಒಳಮೀಸಲಾತಿಯನ್ನು ನೀಡುವ ಅಧಿಕಾರವಿದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಆದರೆ, ಒಳಮೀಸಲಾತಿ ನೀಡಲು ನಿರ್ದಿಷ್ಟ ಸಮುದಾಯದ ಪ್ರಾತಿನಿಧ್ಯದ ಕೊರತೆಯನ್ನು ದೃಢಪಡಿಸಿಕೊಳ್ಳಲು ಅಂಕಿ ಅಂಶ ಸಂಗ್ರಹಿಸಲು ತಿಳಿಸುತ್ತಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಮನೋಜ್ ಮಿಶ್ರಾರವರು ಪ್ರಾತಿನಿಧ್ಯದ ಹಿಂದುಳಿದಿರುವಿಕೆಯನ್ನು ತಿಳಿದುಕೊಳ್ಳಲು ರಾಜ್ಯವು ‘ರಾಜ್ಯ ಸರ್ಕಾರದ ಉದ್ಯೋಗ’ಗಳ ಅಂಕಿ ಅಂಶವನ್ನು ಸಂಗ್ರಹಿಸಬೇಕೆಂದು ನಿರ್ದಿಷ್ಟವಾಗಿಯೇ ತಿಳಿಸಿದ್ದಾರೆ. ಉದಾಹರಣೆಗೆ, ಕರ್ನಾಟಕ ಸರ್ಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದ್ದು, ಜಸ್ಟೀಸ್ ಸದಾಶಿವ ಆಯೋಗದ ಮಾದರಿಯಲ್ಲಿಯೇ ಅಥವಾ ಅದಕ್ಕಿಂತಲೂ ಸಮರ್ಥವಾದ ಆಯೋಗವನ್ನು ರಚಿಸಿ ಅಂಕಿ ಅಂಶಗಳನ್ನು ಕ್ರೋಡೀಕರಿಸಿ ಒಳಮೀಸಲಾತಿ ಜಾರಿಗೊಳಿಸಬೇಕಿದೆ.

ಈ ತೀರ್ಪಿನಲ್ಲಿ ಒಂದು ಅನ್ಯಾಯವೂ ಇದೆ

ಈಗಾಗಲೇ ಹೇಳಿದಂತೆ 6:1ರ ಬಹುಮತದೊಂದಿಗೆ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ನಿಜ. ಇದು ಸಂತೋಷದ ವಿಚಾರವೇ ಆಗಿದೆ. ಆದರೆ, ಸುಖಾ ಸುಮ್ಮನೆ ಮತ್ತೆ ‘ಕ್ರೀಮಿಲೇಯರ್’ ಎಂಬ ವಾಮನನನ್ನು ಎಳೆದು ತರಲಾಗಿದೆ. ಈ ವಾಮನ ‘ಕ್ರೀಮಿಲೇಯರ್’ ಅನ್ನು ಮೊದಲು ಪ್ರಸ್ತಾಪಿಸಿರುವ ನ್ಯಾಯಾಧೀಶರು ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಜಿ.ಎ ಗವಾಯ್ ಅವರೇ ಆಗಿದ್ದಾರೆ! ಇವರು ಒಳಮೀಸಲಾತಿಗೆ ಒಪ್ಪಿಗೆ ನೀಡುತ್ತಾ, “ಪರಿಶಿಷ್ಟ ಜಾತಿಗಳು ಹಾಗೂ ಪರಿಶಿಷ್ಟ ಪಂಗಡಗಳಿಗೂ ಕ್ರೀಮಿಲೇಯರ್ ತತ್ವವನ್ನು ಅಳವಡಿಸಬೇಕು. ಹೀಗೆ ಅಳವಡಿಸುವಾಗ ಹಿಂದುಳಿದ ವರ್ಗಗಳ ಅನುಸರಿಸಿರುವ ಕ್ರೀಮಿಲೇಯರ್ ಮಾನದಂಡಗಳ ಬದಲಾಗಿ ಇತರೆ ಮಾನದಂಡಗಳನ್ನು ಅಳವಡಿಸಿಕೊಳ್ಳಬಹುದು” ಎಂದಿದ್ದಾರೆ. ಈ ಮೂಲಕ ಕಬಾಬಿನಲ್ಲಿ ಮುಳ್ಳಿಡುವ ಕೆಲಸವನ್ನು ಇವರೇ ಮಾಡಿದ್ದಾರೆ. ಮುಂದೆ ತೀರ್ಪು ಬರೆದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಜೆ, ಪಂಕಜ್ ಮಿತ್ತಲ್, ಸತೀಶ್ ಚಂದ್ರ ಶರ್ಮಾರವರು ಗವಾಯ್ ಅವರ ತೀರ್ಪನ್ನು ಉಲ್ಲೇಖ ಮಾಡುತ್ತಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೂ ‘ಕ್ರೀಮಿಲೇಯರ್’ ತತ್ವವನ್ನು ಅಳವಡಿಸಬೇಕೆಂದು ತೀರ್ಪಿತ್ತಿದ್ದಾರೆ. ಅಲ್ಲಿಗೆ ಪರಿಗಣನೆಯಲ್ಲಿ ಇಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಂತೂ ತಮ್ಮ ತೀರ್ಪಿನಲ್ಲಿ ಚಾತುರ್ವರ್ಣ ಪದ್ಧತಿಯನ್ನು ಸಮರ್ಥಿಸಿಕೊಳ್ಳಲು ಭಗವದ್ಗೀತೆ, ಸ್ಕಂಧ ಪುರಾಣವನ್ನೂ ಎಳೆದು ತಂದಿದ್ದಾರೆ. ಜಾತಿ ಸೃಷ್ಠಿಗೆ ಚಾತುರ್ವರ್ಣ ಪದ್ಧತಿ ಕಾರಣವಲ್ಲ, ಈ ಪದ್ಧತಿಯು ಗುಣಗಳ ಆಧಾರದ ಮೇಲಿತ್ತು, ಜನ್ಮದ ಆಧಾರವಲ್ಲ ಎಂಬ ಹಳತು ಹಿಂದುತ್ವ ಉಪದೇಶವನ್ನೂ ಮಾಡಿದ್ದಾರೆ. ಗಾಂಧೀಜಿಯವರ ಹರಿಜನ ಪದವನ್ನು ಸಮರ್ಥಿಸಿಕೊಂಡಿರುವ ನ್ಯಾಯಮೂರ್ತಿ ಮಿತ್ತಲ್ ಅಪ್ಪಿತಪ್ಪಿಯೂ ಅಂಬೇಡ್ಕರರನ್ನು ಉಲ್ಲೇಖಿಸುವುದಿಲ್ಲ.

ಮಿತ್ತಲ್ ಗವಾಯಿಯವರನ್ನು ಉಲ್ಲೇಖಿಸುತ್ತಲೇ ಪೂರ್ವಾಗ್ರಹ ಪೀಡಿತರಾಗಿ ಅಭಿಪ್ರಾಯಿಸಿದ್ದಾರೆ. ಹಿಂದುಳಿದ ವರ್ಗಗಳವರು ಐಎಎಸ್‌, ಐಪಿಎಸ್‌ ಅಥವಾ ಇತರೆ ಯಾವುದೇ ಅಖಿಲ ಭಾರತ ಮಟ್ಟದ ಸೇವೆಯಲ್ಲಿದ್ದು, ತಮ್ಮ ಸ್ಥಾನವನ್ನು ಮೇಲ್ಮಟ್ಟಕ್ಕೆರಿಸಿಕೊಂಡಿದ್ದರೆ, ಅಂತಹವರ ಮಕ್ಕಳೂ ಸಹ ಮುಂದೆ ಮೀಸಲಾತಿ ಪಡೆಯುತ್ತಾರೆ. ಅಂತವರ ಮಕ್ಕಳನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಹೇಳಲು ಸಾಧ್ಯವೇ? ಎಂದಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರೆದಿರುವ ಪ.ಜಾ/ಪ.ಪಂ ದವರನ್ನು ಮೀಸಲಾತಿಯಿಂದ ಹೊರಗಿಡಬೇಕು. ಸೈಂಟ್ ಸ್ಟೀಫನ್ ಕಾಲೇಜು ಅಥವಾ ನಗರದ ಉತ್ತಮ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿ ಒಂದೇ ಅಲ್ಲ ಎನ್ನುವ ಇವರಿಗೆ, ವರ್ಗ ಮತ್ತು ಜಾತಿಯ ನಡುವಿನ ವ್ಯತ್ಯಾಸವೇ ತಿಳಿದಿಲ್ಲ. ಅಸ್ಪೃಶ್ಯರೆಂಬ ಕಾರಣಕ್ಕೆ ರಾಷ್ಟ್ರಪತಿಯವರನ್ನೇ ಅವಮಾನಿಸುವ ಸಮಾಜದಲ್ಲಿ ಸಾಮಾಜಿಕ ಸಮಾನತೆ ಇರಲು ಸಾಧ್ಯವೇ ಇಲ್ಲ ಎಂಬ ಸಣ್ಣ ಅಂಶವೂ ನ್ಯಾಯಾಧೀಶರ ಗಮನಕ್ಕೆ ಬರದಿರುವುದು ವಿಷಾದನೀಯ. ಇಂತಹ ಅಭಿಪ್ರಾಯಗಳನ್ನು ನೀಡುವ ಮಿತ್ತಲ್ ಅವರು ಮತ್ತೊಂದು ಹೆಬ್ಬಂಡೆಯನ್ನು ಪರಿಶಿಷ್ಟರ ಮೀಸಲಾತಿ ಮೇಲೆ ಹಾಕಿದ್ದಾರೆ. ಅದೆಂದರೆ ಮೀಸಲಾತಿಯು ಒಂದೇ ಪೀಳಿಗೆಗೆ ಸಾಕಂತೆ! ಇದಕ್ಕೆ ಪದೇ ಪದೇ ಗವಾಯಿಯವರ ಅಭಿಪ್ರಾಯಕ್ಕೆ ಮೊರೆ ಹೋಗಿದ್ದಾರೆ. ಈ ಅಭಿಪ್ರಾಯ ಎಷ್ಟು ಬಾಲಿಶವಾಗಿದೆ ಎಂದರೆ, ಪಿಯುಸಿಯಲ್ಲಿ ಮೀಸಲಾತಿ ಪಡೆದಿರುವ ಪೋಷಕರ ಮಗ/ಮಗಳು ಪದವಿ ಓದುವಾಗ ಮೀಸಲಾತಿ ಪಡೆಯುವಂತಿಲ್ಲ! ಒಮ್ಮೆ ಮೀಸಲಾತಿ ಪಡೆದ ಡಿ ಗ್ರೂಪ್ ನೌಕರ/ಳ ಮಗ/ಮಗಳು ಮುಂದೆ ಉನ್ನತ ಹುದ್ದೆ ಪಡೆಯಲು ಮೀಸಲಾತಿ ಪಡೆಯುವಂತಿಲ್ಲ! ಇಂತಹ ಅವೈಜ್ಞಾನಿಕ ಹಾಗೂ ಸಮಾಜ ವಿರೋಧಿ ಅಭಿಪ್ರಾಯವನ್ನು ಊಹಿಸಿಕೊಳ್ಳಲೂ ಕಷ್ಟವಾಗುತ್ತದೆ.

ಒಟ್ಟಾರೆ ಇದೊಂದು ಸಮಾಧಾನಕರ ತೀರ್ಪು. ಆದರೆ, ದಲಿತರು ಎಚ್ಚರವಾಗಿರಬೇಕು. ಅಪ್ಪಿತಪ್ಪಿಯೂ ‘ಕ್ರೀಮಿಲೇಯರ್’ ಹೇರಲು ಬಿಡಬಾರದು. 8 ಲಕ್ಷ ಆದಾಯವಿದ್ದರೂ ಮೇಲ್ಜಾತಿಗಳಿಗೆ ಇಡಬ್ಲ್ಯುಎಸ್‌ ಮೂಲಕ ಶೇ. 10 ಮೀಸಲಾತಿ ನೀಡಲು ಒಪ್ಪಿಕೊಂಡಿರುವ ಸುಪ್ರೀಂ ಕೋರ್ಟ್, ಬ್ರಾಹ್ಮಣರು, ಬನಿಯಾಗಳು ಎನ್ನುವ ಕಾರಣಕ್ಕೆ ಸಾಮಾಜಿಕ-ಆರ್ಥಿಕವಾಗಿ ಮುಂದುವರೆದಿರುವಿಕೆಯನ್ನು ಪರಿಗಣಿಸಲೇ ಇಲ್ಲ. ಹಾಗೆಯೇ ದಲಿತರ ವಿಚಾರದಲ್ಲಿ ಆರ್ಥಿಕ ಮುಂದುವರೆದಿರುವಿಕೆಯನ್ನು ಹಾಗೂ ಕೋಟ್ಯಾಧಿಪತಿ ದಲಿತರ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಗಣನೆಗೂ ತೆಗೆದುಕೊಳ್ಳುವುದಿಲ್ಲ. ಇದಾವ ನ್ಯಾಯ? ಬ್ಯಾಂಕ್ ಖಾತೆಯಲ್ಲಿ ಒಂದು ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಇಟ್ಟಿರುವ ದಲಿತ/ದಲಿತೆ, ಅದೇ ಒಂದು ಕೋಟಿ ಬ್ಯಾಂಕ್ ಬ್ಯಾಲೆನ್ಸ್ ಇಟ್ಟಿರುವ ಬ್ರಾಹ್ಮಣ, ಬನಿಯಾ, ಲಿಂಗಾಯತ, ಒಕ್ಕಲಿಗ, ಕುರುಬ ಅಥವಾ ವಿಶ್ವಕರ್ಮ ಮುಂತಾದವರಿಗೆ ಸಮಾನರೇ? ಇಂತಹ ಕನಿಷ್ಠ ತಿಳುವಳಿಕೆಯೂ ಆ ನಾಲ್ವರು ನ್ಯಾಯಾಧೀಶರಿಗೆ ಇಲ್ಲದಾಯಿತೆ? ಏಕೈಕ ದಲಿತ ನ್ಯಾಯಾಧೀಶರಿಗೂ ತಿಳಿಯದಾಯಿತೆ?

ಇದನ್ನೂ ಓದಿ : ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...