Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...