Homeಮುಖಪುಟನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ-ಹಜಾರಿಬಾಗ್‌ಗೆ ಸೀಮಿತವಾಗಿದೆ ಎಂದ ಸುಪ್ರೀಂ ಕೋರ್ಟ್

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ-ಹಜಾರಿಬಾಗ್‌ಗೆ ಸೀಮಿತವಾಗಿದೆ ಎಂದ ಸುಪ್ರೀಂ ಕೋರ್ಟ್

'ಸಂಪೂರ್ಣ ಪರೀಕ್ಷೆಯ ಮೇಲೆ ಪರಿಣಾಮ ಬೀರುವ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ'

- Advertisement -
- Advertisement -

ಸುಪ್ರೀಂ ಕೋರ್ಟ್‌ ತನ್ನ ಮಹತ್ವದ ತೀರ್ಪಿನಲ್ಲಿ, “ನೀಟ್-ಯುಜಿ 2024 ಪರೀಕ್ಷೆಯ ಪೇಪರ್ ಸೋರಿಕೆಯು ವ್ಯಾಪಕವಾದ ವಿಷಯವಲ್ಲ. ಆದರೆ ನಿರ್ದಿಷ್ಟ ಸ್ಥಳಗಳಾದ ಪಾಟ್ನಾ ಮತ್ತು ಹಜಾರಿಬಾಗ್‌ಗೆ ಸೀಮಿತವಾಗಿದೆ” ಎಂದು ಇಂದು ಸ್ಪಷ್ಟಪಡಿಸಿದೆ.

“ವಿವಾದವು ಸಂಪೂರ್ಣ ಪರೀಕ್ಷೆಯ ಮೇಲೆ ಪರಿಣಾಮ ಬೀರುವ ಯಾವುದೇ ವ್ಯವಸ್ಥಿತ ಉಲ್ಲಂಘನೆಯಿಲ್ಲದಿದ್ದರೂ, ಈ ಘಟನೆಯು ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯುತ ಸಂಸ್ಥೆಯಾದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಯೊಳಗಿನ ರಚನಾತ್ಮಕ ಪ್ರಕ್ರಿಯೆಗಳ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿದೆ” ಎಂದು ನ್ಯಾಯಾಲಯವು ಒತ್ತಿಹೇಳಿತು. ಪರೀಕ್ಷೆಯನ್ನು ಏಕೆ ರದ್ದುಗೊಳಿಸಲಿಲ್ಲ ಎಂಬುದಕ್ಕೆ ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಸ್ಪಷ್ಟನೆ ನೀಡಿದೆ.

ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಎನ್‌ಟಿಎಯ ಅಸ್ತಿತ್ವದಲ್ಲಿರುವ ಪ್ರಕ್ರಿಯೆಗಳಲ್ಲಿನ ವಿವಿಧ ನ್ಯೂನತೆಗಳನ್ನು ಎತ್ತಿ ತೋರಿಸಿದೆ. ತಕ್ಷಣದ ಸುಧಾರಣೆಗಳ ಅಗತ್ಯವನ್ನು ಸೂಚಿಸಿದೆ. “ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ನಾವು ಇದನ್ನು ಭರಿಸಲು ಸಾಧ್ಯವಿಲ್ಲ.. ಉದ್ಭವಿಸಿರುವ ಸಮಸ್ಯೆಗಳನ್ನು ಕೇಂದ್ರವು ಈ ವರ್ಷವೇ ಸರಿಪಡಿಸಬೇಕು ಮತ್ತು ಅದು ಪುನರಾವರ್ತನೆಯಾಗಬಾರದು ಎಂಧೂ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ.

ಜುಲೈ 23 ರಂದು ಪ್ರಕಟವಾದ ಆದೇಶದ ವಿವರವಾದ ಕಾರಣಗಳಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತನ್ನ ‘ಫ್ಲಿಪ್-ಫ್ಲಾಪ್’ ಅನ್ನು ನಿಲ್ಲಿಸಬೇಕು ಎಂದು ಹೇಳಿದೆ.

ನೀಟ್-ಯುಜಿ 2024ರ ಪತ್ರಿಕೆ ಸೋರಿಕೆ ಪ್ರಕರಣದ ಸಂದರ್ಭದಲ್ಲಿ ಎದ್ದ ಕಳವಳಗಳನ್ನು ಅನುಸರಿಸಿ, ಎನ್‌ಟಿಎ ಯ ಪರೀಕ್ಷಾ ಪ್ರಕ್ರಿಯೆಗಳನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಪೀಠವು ನಿರ್ದೇಶನಗಳ ಸರಣಿಯನ್ನು ಹೊರಡಿಸಿತು. ಎನ್‌ಟಿಎಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಲು ಸ್ಥಾಪಿಸಲಾದ ಮತ್ತು ಈಗ ಮಾಜಿ ಇಸ್ರೋ ಮುಖ್ಯಸ್ಥ ಕೆ ರಾಧಾಕೃಷ್ಣನ್ ನೇತೃತ್ವದ ಕೇಂದ್ರದಿಂದ ನೇಮಿಸಲ್ಪಟ್ಟ ಸಮಿತಿಯ ವ್ಯಾಪ್ತಿಯನ್ನು ನ್ಯಾಯಾಲಯವು ವಿಸ್ತರಿಸಿದೆ. ಈಗ ವಿಶಾಲವಾದ ಆದೇಶವನ್ನು ಹೊಂದಿರುವ ಈ ಸಮಿತಿಯು ಪ್ರಸ್ತುತ ಪರೀಕ್ಷಾ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ಸಂಪೂರ್ಣವಾಗಿ ನಿರ್ಣಯಿಸುವುದು, ಅಗತ್ಯ ಸುಧಾರಣೆಗಳನ್ನು ಶಿಫಾರಸು ಮಾಡುವ ಕಾರ್ಯವನ್ನು ಹೊಂದಿದೆ. ಸಮಿತಿಯು ತನ್ನ ವರದಿಯನ್ನು ಸಲ್ಲಿಸಲು ನ್ಯಾಯಾಲಯವು ಸೆಪ್ಟೆಂಬರ್ 30 ರ ಗಡುವನ್ನು ನಿಗದಿಪಡಿಸಿದೆ. ಗುರುತಿಸಲಾದ ಸಮಸ್ಯೆಗಳನ್ನು ಸರಿಪಡಿಸಲು ವಿವಿಧ ಕ್ರಮಗಳನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ.

ಪರೀಕ್ಷಾ ಪ್ರಕ್ರಿಯೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ತಾಂತ್ರಿಕ ಪ್ರಗತಿಯನ್ನು ಅಳವಡಿಸಿಕೊಳ್ಳುವುದನ್ನು ಪರಿಗಣಿಸುವಂತೆ ರಾಧಾಕೃಷ್ಣನ್ ಸಮಿತಿಗೆ ಪೀಠವು ನಿರ್ದೇಶನ ನೀಡಿದೆ. ಭವಿಷ್ಯದ ಉಲ್ಲಂಘನೆಗಳನ್ನು ತಡೆಗಟ್ಟಲು ಮತ್ತು ಎನ್‌ಟಿಎ ನಡೆಸುವ ಪರೀಕ್ಷೆಗಳ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಗತಗೊಳಿಸಬಹುದಾದ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸುವ ಸಾಧ್ಯತೆಯನ್ನು ಇದು ಒಳಗೊಂಡಿದೆ. ಉನ್ನತ ನ್ಯಾಯಾಲಯವು ಈ ಸುಧಾರಣೆಗಳ ತುರ್ತುಸ್ಥಿತಿಯನ್ನು ಒತ್ತಿಹೇಳಿತು, ನೀಟ್-ಯುಜಿ ಪರೀಕ್ಷೆಯ ಸಮಯದಲ್ಲಿ ಉದ್ಭವಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿತು.

ನೀಟ್ ಅನ್ನು ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಎಂಬಿಬಿಎಸ್ ಮತ್ತು ಇತರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆಯನ್ನು ತೆಗೆದುಕೊಂಡ 1,563 ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ರದ್ದುಗೊಳಿಸಿರುವುದಾಗಿ ಕೇಂದ್ರ ಮತ್ತು ಎನ್‌ಟಿಎ ಜೂನ್ 13 ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದವು. ಮೇ 5 ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 14 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಮೊದಲೇ ಪೂರ್ಣಗೊಂಡಿದೆ ಎಂಬ ಕಾರಣ ನೀಡಿ ಜೂನ್ 4 ರಂದು ಪ್ರಕಟಿಸಲಾಯಿತು.

ಇದನ್ನೂ ಓದಿ; ‘ಚಕ್ರವ್ಯೂಹ’ ಭಾಷಣದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆಯಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...