Homeಫ್ಯಾಕ್ಟ್‌ಚೆಕ್FACT CHECK : ಬೃಂದಾವನ ಉದ್ಯಾನವನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬುವುದು ಸುಳ್ಳು

FACT CHECK : ಬೃಂದಾವನ ಉದ್ಯಾನವನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬುವುದು ಸುಳ್ಳು

- Advertisement -
- Advertisement -

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ದ ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌ ಡ್ಯಾಂ) ಬಳಿ ಇರುವ ಬೃಂದಾವನ ಉದ್ಯಾನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೃಂದಾವನ ಉದ್ಯಾನವನದ ಹಳೆಯ ಫೋಟೋವೊಂದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಳಕೆದಾರರೊಬ್ಬರು ” ಆಘಾತಕಾರಿ ಸುದ್ದಿ!! ಮೈಸೂರಿನ ಹೊರವಲಯದಲ್ಲಿರುವ ಐತಿಹಾಸಿಕ ಯುನೆಸ್ಕೋ ಪಾರಂಪರಿಕ ತಾಣ ಬೃಂದಾವನ ಉದ್ಯಾನವು ಶಾಶ್ವತವಾಗಿ ನಾಶವಾಗಲಿದೆ. ಸಿದ್ದು ಸರ್ಕಾರ ಈ ದುರಂತಕ್ಕೆ ಕೋಟ್ಯಾಂತರ ರೂಪಾಯಿ ಮಂಜೂರು ಮಾಡಿದೆ. ಇದನ್ನು ಆದಷ್ಟು ಬೇಗ ತಡೆಯಬಹುದು ಎಂಬ ಭರವಸೆಯಿದೆ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಬೃಂದಾವನ ಉದ್ಯಾನವನವನ್ನು ನಾಶ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂಬ ಸಾಮಾಜಿಕ ಜಾಲತಾಣದ ಪ್ರತಿಪಾದನೆ ಸುಳ್ಳು. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಬೃಂದಾವನ ಉದ್ಯಾನವನವನ್ನು ನಾಶ ಮಾಡಲುತ್ತಿಲ್ಲ. ಬದಲಾಗಿ, ಖಾಸಗಿ ಸಹಭಾಗಿತ್ವದಲ್ಲಿ ಉದ್ಯಾನವನವನ್ನು ನವೀಕರಿಸುವ 2,663 ಕೋಟಿ ರೂಪಾಯಿ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಜುಲೈ 26,2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ” ಕೆಆರ್‌ಎಸ್‌ ಅಣೆಕಟ್ಟೆಯನ್ನು ಇನ್ನಷ್ಟು ವಿದ್ಯುತ್ ದೀಪಗಳೊಂದಿಗೆ ಅಲಂಕರಿಸುವುದು, ಜಲಕ್ರೀಡೆಯ ಸೌಲಭ್ಯ ಸ್ಥಾಪಿಸುವುದು, ಕೆಆರ್‌ಎಸ್‌ ಸುತ್ತಮುತ್ತ ಹೋಟೆಲ್‌ಗಳನ್ನು ನಿರ್ಮಿಸುವುದು ಸೇರಿದಂತೆ ಒಟ್ಟಾರೆಯಾಗಿ ಬೃಂದಾವನ ಉದ್ಯಾನವನ್ನು ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ 2,663 ಕೋಟಿ ರೂ.ಮೊತ್ತದ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಫ್ಯಾಂಟಸಿ ಪಾರ್ಕ್‌ನಲ್ಲಿ ಏನೆಲ್ಲಾ ಇರಲಿದೆ?

ಕೆಆರ್‌ಎಸ್‌ ಸರ್ಕಲ್‌ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆಂಫಿಥಿಯೇಟರ್, ಕಾವೇರಿ ಪ್ರತಿಮೆ, ಸ್ವಾಗತ ಕಮಾನುಗಳು, ಮೀನಾ ಬಜಾರ್, ಜಂಗಲ್ ಟ್ರ‍್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ, ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್, ಜೈಹೋ ಫೌಂಟನ್ ಇರಲಿದೆ.

ಕೆಆರ್‌ಎಸ್‌ ಅಣೆಕಟ್ಟು ಬಳಿಯ ಬೃಂದಾವನ ಉದ್ಯಾನವನ ಪ್ರಸ್ತುತ ಬಹಳ ಅಚ್ಚುಕಟ್ಟಾಗಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಸರ್ಕಾರದ ಬೊಕ್ಕಸಕ್ಕೆ ಉತ್ತಮ ಆದಾಯ ತಂದು ಕೊಡುವ ರಾಜ್ಯದ ಅತ್ಯುತ್ತಮ ಪ್ರವಾಸಿ ತಾಣಗಳಲ್ಲಿ ಬೃಂದಾವನ ಉದ್ಯಾನವನ ಕೂಡ ಒಂದು. ಕಳೆದ ವರ್ಷವಷ್ಟೇ ಉದ್ಯಾನವನದ ಕಾರಂಜಿಯನ್ನ ನವೀಕರಿಸಲಾಗಿದೆ. ಹೀಗಿರುವಾಗ ಸರ್ಕಾರ ಅದನ್ನು ನಾಶಪಡಿಸಲಿದೆ ಎನ್ನುವುದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

ಇದನ್ನೂ ಓದಿ : FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...