Homeಫ್ಯಾಕ್ಟ್‌ಚೆಕ್FACT CHECK : ಬೃಂದಾವನ ಉದ್ಯಾನವನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬುವುದು ಸುಳ್ಳು

FACT CHECK : ಬೃಂದಾವನ ಉದ್ಯಾನವನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬುವುದು ಸುಳ್ಳು

- Advertisement -
- Advertisement -

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ದ ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌ ಡ್ಯಾಂ) ಬಳಿ ಇರುವ ಬೃಂದಾವನ ಉದ್ಯಾನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೃಂದಾವನ ಉದ್ಯಾನವನದ ಹಳೆಯ ಫೋಟೋವೊಂದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಳಕೆದಾರರೊಬ್ಬರು ” ಆಘಾತಕಾರಿ ಸುದ್ದಿ!! ಮೈಸೂರಿನ ಹೊರವಲಯದಲ್ಲಿರುವ ಐತಿಹಾಸಿಕ ಯುನೆಸ್ಕೋ ಪಾರಂಪರಿಕ ತಾಣ ಬೃಂದಾವನ ಉದ್ಯಾನವು ಶಾಶ್ವತವಾಗಿ ನಾಶವಾಗಲಿದೆ. ಸಿದ್ದು ಸರ್ಕಾರ ಈ ದುರಂತಕ್ಕೆ ಕೋಟ್ಯಾಂತರ ರೂಪಾಯಿ ಮಂಜೂರು ಮಾಡಿದೆ. ಇದನ್ನು ಆದಷ್ಟು ಬೇಗ ತಡೆಯಬಹುದು ಎಂಬ ಭರವಸೆಯಿದೆ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಬೃಂದಾವನ ಉದ್ಯಾನವನವನ್ನು ನಾಶ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂಬ ಸಾಮಾಜಿಕ ಜಾಲತಾಣದ ಪ್ರತಿಪಾದನೆ ಸುಳ್ಳು. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಬೃಂದಾವನ ಉದ್ಯಾನವನವನ್ನು ನಾಶ ಮಾಡಲುತ್ತಿಲ್ಲ. ಬದಲಾಗಿ, ಖಾಸಗಿ ಸಹಭಾಗಿತ್ವದಲ್ಲಿ ಉದ್ಯಾನವನವನ್ನು ನವೀಕರಿಸುವ 2,663 ಕೋಟಿ ರೂಪಾಯಿ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಜುಲೈ 26,2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ” ಕೆಆರ್‌ಎಸ್‌ ಅಣೆಕಟ್ಟೆಯನ್ನು ಇನ್ನಷ್ಟು ವಿದ್ಯುತ್ ದೀಪಗಳೊಂದಿಗೆ ಅಲಂಕರಿಸುವುದು, ಜಲಕ್ರೀಡೆಯ ಸೌಲಭ್ಯ ಸ್ಥಾಪಿಸುವುದು, ಕೆಆರ್‌ಎಸ್‌ ಸುತ್ತಮುತ್ತ ಹೋಟೆಲ್‌ಗಳನ್ನು ನಿರ್ಮಿಸುವುದು ಸೇರಿದಂತೆ ಒಟ್ಟಾರೆಯಾಗಿ ಬೃಂದಾವನ ಉದ್ಯಾನವನ್ನು ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ 2,663 ಕೋಟಿ ರೂ.ಮೊತ್ತದ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಫ್ಯಾಂಟಸಿ ಪಾರ್ಕ್‌ನಲ್ಲಿ ಏನೆಲ್ಲಾ ಇರಲಿದೆ?

ಕೆಆರ್‌ಎಸ್‌ ಸರ್ಕಲ್‌ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆಂಫಿಥಿಯೇಟರ್, ಕಾವೇರಿ ಪ್ರತಿಮೆ, ಸ್ವಾಗತ ಕಮಾನುಗಳು, ಮೀನಾ ಬಜಾರ್, ಜಂಗಲ್ ಟ್ರ‍್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ, ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್, ಜೈಹೋ ಫೌಂಟನ್ ಇರಲಿದೆ.

ಕೆಆರ್‌ಎಸ್‌ ಅಣೆಕಟ್ಟು ಬಳಿಯ ಬೃಂದಾವನ ಉದ್ಯಾನವನ ಪ್ರಸ್ತುತ ಬಹಳ ಅಚ್ಚುಕಟ್ಟಾಗಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಸರ್ಕಾರದ ಬೊಕ್ಕಸಕ್ಕೆ ಉತ್ತಮ ಆದಾಯ ತಂದು ಕೊಡುವ ರಾಜ್ಯದ ಅತ್ಯುತ್ತಮ ಪ್ರವಾಸಿ ತಾಣಗಳಲ್ಲಿ ಬೃಂದಾವನ ಉದ್ಯಾನವನ ಕೂಡ ಒಂದು. ಕಳೆದ ವರ್ಷವಷ್ಟೇ ಉದ್ಯಾನವನದ ಕಾರಂಜಿಯನ್ನ ನವೀಕರಿಸಲಾಗಿದೆ. ಹೀಗಿರುವಾಗ ಸರ್ಕಾರ ಅದನ್ನು ನಾಶಪಡಿಸಲಿದೆ ಎನ್ನುವುದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

ಇದನ್ನೂ ಓದಿ : FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...