Homeಮುಖಪುಟಪಶ್ಚಿಮ ಘಟ್ಟದ 56,826 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

ಪಶ್ಚಿಮ ಘಟ್ಟದ 56,826 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

- Advertisement -
- Advertisement -

ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿದೆ. ಜುಲೈ 6, 2022ರಂದು 5ನೇ ಅಧಿಸೂಚನೆ ಹೊರಡಿಸಲಾಗಿತ್ತು. ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯನ್ನು ಗುರುತಿಸುವ ವಿಚಾರದಲ್ಲಿ ಕೇಂದ್ರ ಮತ್ತು ಆರು ರಾಜ್ಯಗಳು ಇದುವರೆಗೆ ಒಮ್ಮತಕ್ಕೆ ಬಂದಿಲ್ಲ.

ಗುಜರಾತ್‌ನ 449 ಚದರ ಕಿ.ಮೀ, ಮಹಾರಾಷ್ಟ್ರದ 17,340, ಗೋವಾದ 1,461, ಕರ್ನಾಟಕದ 20,668 ತಮಿಳುನಾಡಿನ 6,914 ಮತ್ತು ಕೇರಳದ 9,994 ಚದರ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಕರಡು ಪ್ರತಿಗೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸಲು ಕೇಂದ್ರವು 60 ದಿನಗಳ ಗಡುವನ್ನು ನೀಡಿದೆ.

ಪಶ್ಚಿಮ ಘಟ್ಟಗಳ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಮೊದಲ ಬಾರಿಗೆ ಮಾರ್ಚ್ 2014 ರಲ್ಲಿ ಹೊರಡಿಸಲಾಗಿತ್ತು. ಇದು 2012ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ತಜ್ಞರ ಸಮಿತಿಯ ಸಲಹೆಗಳನ್ನು ಆಧರಿಸಿದೆ.

ಬಾಹ್ಯಾಕಾಶ ವಿಜ್ಞಾನಿ ಕೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಹಿರಿಯ ಪರಿಸರ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದ ತಜ್ಞರ ಸಮಿತಿಯು ಸಿದ್ಧಪಡಿಸಿದ್ದ ವರದಿಯ ಸಲಹೆಗಳನ್ನು ಪರಿಶೀಲಿಸಿತ್ತು.

ಆರು ರಾಜ್ಯ ಸರ್ಕಾರಗಳ ಸಲಹೆಗಳನ್ನು ಮರು ಪರಿಶೀಲಿಸಲು, ವಿಪತ್ತು ಪೀಡಿತ ಪ್ರಾಚೀನ ಪರಿಸರ ವ್ಯವಸ್ಥೆಯ ಸಂರಕ್ಷಣೆ ಅಂಶಗಳನ್ನು ಮತ್ತು ಪ್ರದೇಶದ ಹಕ್ಕುಗಳು, ಸವಲತ್ತುಗಳು, ಅಗತ್ಯಗಳು ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2022ರಲ್ಲಿ ಕೇಂದ್ರವು ಮತ್ತೊಂದು ಸಮಿತಿಯನ್ನು ರಚಿಸಿತ್ತು. ಅದರ ಸಲಹೆಗಳನ್ನು ಕೂಡ ಕರಡು ಪ್ರತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ವಯನಾಡ್ ಭೂಕುಸಿತ ದುರಂತ ಸಂಭವಿಸಿದ ಬಳಿಕ ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ’ (WGEEP)ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಜಾರಿಗೆ ಆಗ್ರಹ ಕೇಳಿ ಬಂದಿದೆ.

ಇದನ್ನೂ ಓದಿ : ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...