Homeಕರ್ನಾಟಕಯಾದಗಿರಿ | ಪಿಎಸ್‌ಐ ಪರಶುರಾಮ್ ಹಠಾತ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಹಠಾತ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ ಪತ್ನಿ

- Advertisement -
- Advertisement -

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದ್ದು, ಆದರೆ ಅವರ ಪತ್ನಿ ಈ ಸಂಬಂಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಪರಶುರಾಮ ಅವರು ಸೈಬರ್ ಕ್ರೈಂ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟ್ರಸ್‌ನ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆದರೆ, ಈ ಪ್ರಕರಣವು ಈಗ ರಾಜ್ಯದ ಗಮನ ಸೆಳೆಯುತ್ತಿದ್ದು, ಹೊಸ ತಿರುವು ಪಡೆದುಕೊಂಡಿದೆ. “ನನ್ನ ಪತಿ, ಪಿಎಸ್‌ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇ ಗೌಡ ಕಾರಣ” ಎಂದು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರಿಗೆ ದೂರು ಸಲ್ಲಿಸಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

“ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಬೇಡಿಕೆ ಇಟ್ಟಿದ್ದರು. ಬಳಿಕ ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದ ಪರಶುರಾಮ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಅವರಿಗೆ ಹೃದಯಾಘಾತವಾಗಿದೆ. ಶಾಸಕರು ಮತ್ತು ಅವರ ಮಗ ವರ್ಗಾವಣೆಗೆ 30-40 ಲಕ್ಷ ರೂ. ಕೇಳಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಜಾತಿ ಮತ್ತು ಹಣಕ್ಕಾಗಿ ನಿಯತ್ತಿನ ಅಧಿಕಾರಿಯ ಸಾವಿಗೆ ಕಾರಣರಾಗಿದ್ದಾರೆ” ಎಂದು ಪತ್ನಿ ಶ್ವೇತಾ ಆರೋಪಿಸಿದ್ದಾರೆ.

“ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಪರಶುರಾಮ 30 ಲಕ್ಷ ರೂ. ನೀಡಿ ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅವರು ಒತ್ತಡಕ್ಕೆ ಒಳಗಾಗಿದ್ದರು. ಸಾಲದ ಸುಳಿಗೆ ಸಿಲುಕಿದ್ದರು. ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್‌ನಲ್ಲಿ ಮಾತನಾಡಿದ್ದರು” ಎಂದು ಕುಟುಂಬಸ್ಥರು ಹೇಳಿದ್ದಾರೆ.

ದಲಿತ ಸಂಘಟನೆಗಳಿಂದ ಪ್ರತಿಭಟನೆ

ತಪ್ಪಿತಸ್ಥ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇಗೌಡರನ್ನು ಕೂಡಲೇ ಬಂಧಿಸುವಂತೆ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಸ್ಥರು ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್‌ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಘಟನೆ ನಡೆದು 16 ಗಂಟೆಯಾದರೂ ಪ್ರಕರಣ ದಾಖಲಿಸಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದಿರುವ ಪ್ರತಿಭಟನಾಕಾರರು, ಖಾಸಗಿ ಆಸ್ಪತ್ರೆಯಿಂದ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸುವಾಗ ಆ್ಯಂಬುಲೆನ್ಸ್‌ ತಡೆದಿದ್ದಾರೆ.

ತನಿಖೆಗೆ ಸೂಚಿಸಿದ್ದೇನೆ : ಗೃಹ ಸಚಿವ ಪರಮೇಶ್ವರ್

ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, “ಈ ಬಗ್ಗೆ ನಾನು ತನಿಖೆಗೆ ಸೂಚನೆ ನೀಡಿದ್ದೇನೆ. ಪರಶುರಾಮ ಅವರು ಸಹಜವಾಗಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಗಳು ಬರುತ್ತಿವೆ. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾವುದೇ ಡೆತ್‌ನೋಟ್ ಕೂಡ ಪತ್ತೆಯಾಗಿಲ್ಲ. ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಕಾರಣ ಕೊಟ್ಟಿದ್ದಾರೆ. ಇವೆಲ್ಲದರ ಬಗ್ಗೆ ತನಿಖೆ ಮಾಡುವಂತೆ ನಾನು ಸೂಚನೆ ಕೊಟ್ಟಿದ್ದೇನೆ. ಏನು ವರದಿ ಬರುತ್ತದೆ ನೋಡೋಣ. ಪತ್ನಿಯ ಆರೋಪಗಳನ್ನೂ ಪರಿಗಣಿಸುತ್ತೇವೆ. ಆ ನಿಟ್ಟಿನಲ್ಲಿಯೂ ತನಿಖೆ ಮಾಡುವಂತೆ ಸೂಚಿಸಿದ್ದೇನೆ” ಎಂದಿದ್ದಾರೆ.

ಎಫ್‌ಐಆರ್ ದಾಖಲಿಸಿಲ್ಲ ಎಂಬ ಬಗ್ಗೆ ಕೇಳಿದ್ದಕ್ಕೆ “ಪೊಲೀಸರು ಎಫ್‌ಐಆರ್ ದಾಖಲಿಸುತ್ತಾರೆ. ಪ್ರಾಥಮಿಕವಾಗಿ ಒಂದಿಷ್ಟು ಸಾಕ್ಷ್ಯಗಳು, ಮಾಹಿತಿಗಳು ಸಂಗ್ರಹಿಸಬೇಕಾಗಿದೆ. ಅದನ್ನು ಮಾಡಿದ ಬಳಿಕ ಎಫ್‌ಐರ್‌ ದಾಖಲಿಸುತ್ತಾರೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಶಾಸಕರಿಗೆ ವರ್ಗಾವಣೆಗೆ 30 ಲಕ್ಷ ರೂಪಾಯಿ ಕೊಟ್ಟಿದ್ದಾರೆ ಎಂಬುವುದಾಗಿ ಅವರ ಪತ್ನಿ ಆರೋಪಿಸಿದ್ದಾರೆ ಎಂದು ಕೇಳಿದ್ದಕ್ಕೆ ” ಆರೋಪವಷ್ಟೇ ಮಾಡಿದ್ದಾರೆ. ಆರೋಪ ಮಾಡಿದಾಕ್ಷಣ ಅದೇ ಸರಿ, ಇಲ್ಲ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಆ ಬಗ್ಗೆ ತನಿಖೆ ಮಾಡಬೇಕಿದೆ. ಶಾಸಕರ ಹೆಸರಿದ್ದರೂ ಕೂಡ ಎಫ್‌ಐಅರ್‌ ದಾಖಲಿಸಲು ನಾನು ಸೂಚನೆ ಕೊಟ್ಟಿದ್ದೇನೆ, ಮಾಡ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಯನಾಡ್ ಭೂಕುಸಿತ : ಅಮಿತ್ ಶಾ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...