Homeಫ್ಯಾಕ್ಟ್‌ಚೆಕ್FACT CHECK : ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ಹಲ್ವಾ ಸಮಾರಂಭದಲ್ಲಿ ದಲಿತ ಅಧಿಕಾರಿಗಳು ಇರಲಿಲ್ಲ...

FACT CHECK : ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ಹಲ್ವಾ ಸಮಾರಂಭದಲ್ಲಿ ದಲಿತ ಅಧಿಕಾರಿಗಳು ಇರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಜುಲೈ 23, 2024ರಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮ್ ಬಜೆಟ್ ಮಂಡನೆ ಮಾಡಿದ್ದರು. ಈ ಬಜೆಟ್ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಚರ್ಚೆಗೆ ಒಳಗಾಗಿತ್ತು.

ಬಜೆಟ್ ಕುರಿತು ಜುಲೈ 29ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿ ” ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ” ಎಂದಿದ್ದರು.

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಕಂಡಿದ್ದರು.

ರಾಹುಲ್ ಗಾಂಧಿಯ ಹೇಳಿಕೆಗೆ ಪ್ರತಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದ ಅನೇಕ ಬಳಕೆದಾರರು ” ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದಲ್ಲಿ ಎಷ್ಟು ದಲಿತರಿದ್ದರು? ಎಂದು ಪ್ರಶ್ನಿಸಿದ್ದರು. ಅಂದರೆ, ಯುಪಿಎ ಸರ್ಕಾರದ ಅವಧಿಯಲ್ಲೂ ಹಲ್ವಾ ಸಮಾರಂಭದಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಯಾವೊಬ್ಬ ಅಧಿಕಾರಿಯೂ ಭಾಗಿಯಾಗಿರಲಿಲ್ಲ ಎಂದು ಪ್ರತಿಪಾದಿಸಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಮಾಡಿರುವ ಆರೋಪವೇ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ, ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿ ಬಜೆಟ್‌ ಕಲಾಪದಲ್ಲಿ ಭಾಗವಹಿಸುವ ಮುನ್ನ ನಡೆದ ಸಂಪ್ರದಾಯಿಕ ಹಲ್ವಾ ಸಮಾರಂಭದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಅಧಿಕಾರಿಗಳು ಭಾಗವಹಿಸಿರಲಿಲ್ಲ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅದು ಫೆಬ್ರವರಿ 2014ರಲ್ಲಿ ಮಧ್ಯಂತರ ಬಜೆಟ್ ಸಮಯದಲ್ಲಿ ತೆಗೆದ ಫೋಟೋ ಎಂದು ಗೊತ್ತಾಗಿದೆ.

ಫೋಟೋದ ಶೀರ್ಷಿಕೆಯು ಫೆಬ್ರವರಿ 07, 2014 ರಂದು ನವದೆಹಲಿಯಲ್ಲಿ “ಕೇಂದ್ರ ಹಣಕಾಸು ಸಚಿವ, ಪಿ. ಚಿದಂಬರಂ ಅವರು ಮಧ್ಯಂತರ ಬಜೆಟ್ ಮುದ್ರಣ ಪ್ರಕ್ರಿಯೆಯ ಪ್ರಾರಂಭವನ್ನು ಗುರುತಿಸುವ ಹಲ್ವಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಹಣಕಾಸು ಖಾತೆಯ ರಾಜ್ಯ ಮಂತ್ರಿಗಳಾದ ಜೇಸುದಾಸು ಶೀಲಂ ಮತ್ತು ನಮೋ ನಾರಾಯಣ್ ಮೀನಾ ಅವರು ಕೂಡ ಚಿದಂಬರಂ ಜೊತೆಗಿದ್ದರು ಎಂದು ಪಿಐಬಿ ಸ್ಪಷ್ಟಪಡಿಸಿದೆ.

ರಾಜ್ಯ ಸಚಿವರ ಹಿನ್ನೆಲೆ ನೋಡಿದಾಗ ಜೇಸುದಾಸು ಶೀಲಂ ಪರಿಶಿಷ್ಟ ಜಾತಿಗೆ ಮತ್ತು ನಮೋ ನರೇನ್ ಮೀನಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಹಾಗಾಗಿ, ಪಿ.ಚಿದಂಬರಂ ಅವರು ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಬಜೆಟ್‌ ಮುದ್ರಣಕ್ಕೂ ಮುನ್ನ ನಡೆದ ಹಲ್ವಾ ಸಮಾರಂಭದ ವೇಳೆ ತೆಗೆದ ಫೋಟೋದಲ್ಲಿ ದಲಿತ ಮತ್ತು ಬುಡಕಟ್ಟು ವ್ಯಕ್ತಿಗಳು ಇರುವುದು ದೃಢಪಟ್ಟಿದೆ. ಆದ್ದರಿಂದ ಸಾಮಾಜಿಕ ಮಾಧ್ಯಮಗಳ ಪ್ರತಿಪಾದನೆಗಳು ಸುಳ್ಳು.

ಇದನ್ನೂ ಓದಿ : FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...