Homeಮುಖಪುಟಬಾಂಗ್ಲಾದೇಶ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಪಲಾಯನ : ಮಧ್ಯಂತರ ಸರ್ಕಾರ...

ಬಾಂಗ್ಲಾದೇಶ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಪಲಾಯನ : ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ

- Advertisement -
- Advertisement -

ಜನಾಕ್ರೋಶಕ್ಕೆ ಮಣಿದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದು, ಮಧ್ಯಂತರ ಸರ್ಕಾರ ರಚನೆಗೆ ಸೇನೆ ಮುಂದಾಗಿದೆ ಎಂದು ವರದಿಯಾಗಿದೆ.

ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30 ರ ಸುಮಾರಿಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂಗಾಬಬಾನ್‌ನಿಂದ ಹೊರಟಿದ್ದಾರೆ. ಅವರ ಕಿರಿಯ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ‘ಸುರಕ್ಷಿತ ಸ್ಥಳ’ಕ್ಕೆ ತೆರಳಿದ್ದಾರೆ ಎಂದು ಬಾಂಗ್ಲಾದೇಶ ಮಾಧ್ಯಮಗಳು ವರದಿ ಮಾಡಿವೆ. ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಸೇನಾ ಮುಖ್ಯಸ್ಥ ವಕಾರುಝ್ಝಮಾನ್ ಹೇಳಿದ್ದಾರೆ.

ಹಸೀನಾ ಅವರು ಭಾರತದತ್ತ ಆಗಮಿಸಿದ್ದಾರೆ ಎಂದೂ ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಖಚಿತ ಮಾಹಿತಿಯಿಲ್ಲ. ಆದರೆ, ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಆರಂಭವಾಗಿದೆ.

ಭಾನುವಾರ ಆರಂಭಗೊಂಡ ಸರ್ಕಾರದ ವಿರುದ್ದದ ‘ಅಸಹಕಾರ ಚಳವಳಿ’ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿತ್ತು. ಪ್ರತಿಭಟನಾಕಾರರು ಮತ್ತು ಆಡಳಿತ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಬಾಂಗ್ಲಾದೇಶದಾದ್ಯಂತ ಅನಿರ್ದಿಷ್ಟಾವಧಿಗೆ ನಿಷೇಧಾಜ್ಞೆ ಹೇರಲಾಗಿದೆ.

ತಿಂಗಳ ಹಿಂದೆ ಆರಂಭಗೊಂಡ ಪ್ರತಿಭಟನೆಯಿಂದ ಬಾಂಗ್ಲಾದಲ್ಲಿ ಇದುವರೆಗೆ 300ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಕೆಲ ದಿನಗಳ ಕಾಲ ತನ್ನಗಾಗಿದ್ದ ಪ್ರತಿಭಟನೆ ಭಾನುವಾರ ಮತ್ತೆ ಭುಗಿಲೆದ್ದಿದ್ದು, ಹಸೀನಾ ಸರ್ಕಾರವನ್ನು ಕೆಡವುವಲ್ಲಿ ಸಫಲವಾಗಿದೆ.

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ 1971ರಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದ ಯೋಧರ ಕುಟುಂಬಸ್ಥರಿಗೆ ಸರ್ಕಾರಿ ನೇಮಕಾತಿಗಳಲ್ಲಿ ಶೇ. 30 ಮೀಸಲಾತಿಯಿದೆ. ಈ ಮೀಸಲಾತಿ ವ್ಯವಸ್ಥೆ ತಾರತಮ್ಯದಿಂದ ಕೂಡಿದೆ. ಸ್ವಾತಂತ್ರ್ಯ ಚಳುವಳಿಯ ನೇತೃತ್ವ ವಹಿಸಿದ್ದ ಅವಾಮಿ ಲೀಗ್ ಪಕ್ಷದ ಮುಖ್ಯಸ್ಥೆ ಶೇಖ್ ಹಸೀನಾರ ಬೆಂಬಲಿಗರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ, ಈ ಮೀಸಲಾತಿ ವ್ಯವಸ್ಥೆ ಕೊನೆಗೊಳಿಸಿ ಮೆರಿಟ್ ಆಧಾರಿತ ನೇಮಕಾತಿ ಜಾರಿಗೊಳಿಸಬೇಕು ಎಂಬುವುದು ಪ್ರತಿಭಟನಾಕಾರರ ಆಗ್ರಹವಾಗಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...