Homeಅಂತರಾಷ್ಟ್ರೀಯಬಾಂಗ್ಲಾದೇಶದ ಪ್ರತಿಭಟನೆ: ಢಾಕಾದಲ್ಲಿ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಧ್ವಂಸಗೊಳಿಸಿದ ಗುಂಪು

ಬಾಂಗ್ಲಾದೇಶದ ಪ್ರತಿಭಟನೆ: ಢಾಕಾದಲ್ಲಿ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಧ್ವಂಸಗೊಳಿಸಿದ ಗುಂಪು

- Advertisement -
- Advertisement -

ಬಾಂಗ್ಲಾದಲ್ಲಿನ ಅಶಾಂತಿ ಉಲ್ಬಣದಲ್ಲಿ, ನೂರಾರು ಪ್ರತಿಭಟನಾಕಾರರು ಸೋಮವಾರ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದರು, ದೇಶದ ರಾಜಧಾನಿ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಪ್ರತಿಭಟನಾಕಾರರು ಬಾಂಗ್ಲಾದೇಶದ ಗೌರವಾನ್ವಿತ ವ್ಯಕ್ತಿ, ಶೇಖ್ ಹಸೀನಾ ಅವರ ತಂದೆ ಮತ್ತು ರಾಷ್ಟ್ರದ ಸಂಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದರು. ಪ್ರತಿಮೆಯ ತಲೆಯ ಮೇಲೆ ಕೊಡಲಿಯಿಂದ ಜಖಂಗೊಳಿಸಲು ಪ್ರಯತ್ನ ನಡೆಸುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾಂಗ್ಲಾದೇಶದಲ್ಲಿ ಹದಗೆಟ್ಟ ರಾಜಕೀಯ ಪರಿಸ್ಥಿತಿಯನ್ನು ಉಲ್ಲೇಖಿಸಿ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಕೆಲವೇ ದಿನಗಳಲ್ಲಿ ಅಶಾಂತಿ ಭುಗಿಲೆದ್ದಿತು. ಆಕೆಯ ಹಠಾತ್ ನಿರ್ಗಮನವು ದೇಶವನ್ನು ಪ್ರಕ್ಷುಬ್ಧಗೊಳಿಸಿದೆ, ವ್ಯಾಪಕ ಪ್ರತಿಭಟನೆಗಳು ಮತ್ತು ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆಗಳು ನಡೆದಿವೆ.

ಸಹೋದರಿಯೊಂದಿಗೆ ದೇಶ ತೊರೆದ ಶೇಖ್ ಹಸೀನಾ

ಶೇಖ್ ಹಸೀನಾ ಮತ್ತು ಆಕೆಯ ಸಹೋದರಿ ಶೇಖ್ ರೆಹಾನಾ ಅವರು ಅಜ್ಞಾತ ಸ್ಥಳಕ್ಕಾಗಿ ಢಾಕಾದಿಂದ ಪಲಾಯನ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್, ಫ್ಲೈಟ್ ರಾಡಾರ್ ಬಾಂಗ್ಲಾದೇಶದ ವಾಯುಪಡೆಯ ವಿಮಾನ ಬಾಂಗ್ಲಾದೇಶದಿಂದ ಹೊರಟು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿದೆ ಎಂದು ವರದಿ ಮಾಡಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಈ ವಿಮಾನದಲ್ಲಿದ್ದರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಧನ್ಮಂಡಿಯಲ್ಲಿರುವ ಅವಾಮಿ ಲೀಗ್ ಅಧ್ಯಕ್ಷ ಶೇಖ್ ಹಸೀನಾ ಅವರ ಕಚೇರಿಗೂ ಚಳವಳಿಗಾರರು ಬೆಂಕಿ ಹಚ್ಚಿದರು. ಶೇಖ್ ಹಸೀನಾ ರಾಜೀನಾಮೆ ಸುದ್ದಿ ಕೇಳಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸುತ್ತಿದ್ದರು.

ಶಾಂತವಾಗಿರುವಂತೆ ಸೇನಾ ಮುಖ್ಯಸ್ಥರ ಮನವಿ

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಝಮಾನ್ ದೂರದರ್ಶನದ ಭಾಷಣದಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದಾರೆ ಎಂದು ದೃಢಪಡಿಸಿದರು. ರಾಷ್ಟ್ರೀಯ ಭಾಷಣದಲ್ಲಿ ಜಮಾನ್ ಪ್ರತಿಭಟನಾಕಾರರಿಗೆ ಶಾಂತವಾಗಿರಲು ಮತ್ತು ಮನೆಗೆ ಮರಳಲು ಮನವಿ ಮಾಡಿದರು. ಹಿಂಸಾಚಾರವನ್ನು ಕೊನೆಗೊಳಿಸುವಂತೆ ನಾಗರಿಕರನ್ನು ಒತ್ತಾಯಿಸಿದರು. ಕರ್ಫ್ಯೂ ಅಥವಾ ತುರ್ತು ಕ್ರಮಗಳ ಅಗತ್ಯವಿಲ್ಲ ಎಂದು ಹೇಳಿದರು.

“ಇದೀಗ ರಾಜಕೀಯ ಸ್ಥಿತ್ಯಂತರ ಕಾಲ ನಡೆಯುತ್ತಿದ್ದು, ಮಧ್ಯಂತರ ಸರ್ಕಾರ ರಚನೆಯಾಗಲಿದೆ” ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. “ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ, ನೀವು ನನ್ನ ಮೇಲೆ ನಂಬಿಕೆ ಇಡಿ, ಜೊತೆಯಾಗಿ ಕೆಲಸ ಮಾಡೋಣ. ದಯವಿಟ್ಟು ಸಹಾಯ ಮಾಡಿ, ಹೋರಾಟದಿಂದ ನಮಗೆ ಏನೂ ಸಿಗುವುದಿಲ್ಲ. ಸಂಘರ್ಷ ತಪ್ಪಿಸಿ, ನಾವೆಲ್ಲರೂ ಸೇರಿ ಸುಂದರ ದೇಶವನ್ನು ಕಟ್ಟಿದ್ದೇವೆ” ಎಂದರು.

ಅಶಾಂತಿಗೆ ಕಾರಣವೇನು?

ನಿರಾಶೆಗೊಂಡ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಕೋಟಾ ವ್ಯವಸ್ಥೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದವು. ಆದರೆ, ಈ ಹೋರಾಟಗಳು ಹಸೀನಾ ಮತ್ತು ಅವರ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ವಿರುದ್ಧದ ದಂಗೆಯಾಗಿ ಮಾರ್ಪಟ್ಟಿವೆ. ಇತ್ತೀಚಿನ ವಾರಗಳಲ್ಲಿ ಕನಿಷ್ಠ 11,000 ಜನರನ್ನು ಬಂಧಿಸಲಾಗಿದೆ. ಅಶಾಂತಿಯು ದೇಶಾದ್ಯಂತ ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದಕ್ಕೆ ಕಾರಣವಾಗಿದೆ.

ಇದನ್ನೂ ಓದಿ; ಬಾಂಗ್ಲಾದೇಶ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಪಲಾಯನ : ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...