Homeಮುಖಪುಟಛತ್ತೀಸ್‌ಗಢ: ಎಂಟು ಜನ ಶಸ್ತ್ರಧಾರಿಗಳ ವಿರುದ್ಧ ಹೋರಾಡಿ ತಂದೆಯನ್ನು ರಕ್ಷಿಸಿದ 17 ವರ್ಷದ ಬುಡಕಟ್ಟು ಬಾಲಕಿ

ಛತ್ತೀಸ್‌ಗಢ: ಎಂಟು ಜನ ಶಸ್ತ್ರಧಾರಿಗಳ ವಿರುದ್ಧ ಹೋರಾಡಿ ತಂದೆಯನ್ನು ರಕ್ಷಿಸಿದ 17 ವರ್ಷದ ಬುಡಕಟ್ಟು ಬಾಲಕಿ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ನಾರಾಯಣಪುರದ ಹಳ್ಳಿಯೊಂದರಲ್ಲಿ 17 ವರ್ಷದ ಬುಡಕಟ್ಟು ಜನಾಂಗದ ಹುಡುಗಿಯೊಬ್ಬಳು ತನ್ನ ಶೌರ್ಯ ಪ್ರದರ್ಶಿಸಿದ್ದು, ಎಂಟು ಜನ ಶಸ್ತ್ರಸಜ್ಜಿತ ಪುರುಷರ ಗುಂಪಿನೊಂದಿಗೆ ಹೋರಾಡಿ ತನ್ನ ತಂದೆಯನ್ನು ಪ್ರಾಣಪಾಯದಿಂದ ರಕ್ಷಿಸಿದ್ದಾಳೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಬಾಲಕಿಯ ತಂದೆ ಸೋಮಧರ್ ಕೊರ್ರಂ ಎಂಬಾತ ಕೊಲೆಯ ಯತ್ನದಿಂದ ಎದೆಯ ಮೇಲೆ ಗಾಯದಿಂದ ಪಾರಾಗಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಈ ಗ್ಯಾಂಗ್ ಸಂತ್ರಸ್ತನ ಹುಡುಕಾಟ ನಡೆಸಿತ್ತು, ಸೋಮವಾರ ಎಂಟು ಮಂದಿಯ ತಂಡ ಕೊರ್ರಂ ಮನೆಗೆ ನುಗ್ಗಿ ಕೊಡಲಿಯಿಂದ ಹಲ್ಲೆ ನಡೆಸಿದೆ. ಆತನಿಗೆ ಊಟ ಬಡಿಸಲು ಮುಂದಾದ ಆತನ ಮಗಳು ತನ್ನ ತಂದೆಯನ್ನು ಸುತ್ತುವರೆದಿರುವ ಗ್ಯಾಂಗ್ ನೋಡಿ ಬೆಚ್ಚಿಬಿದ್ದಳು.

“ಅವರಲ್ಲಿ ಎಂಟು ಮಂದಿ ಇದ್ದರು, ಬಾಗಿಲನ್ನು ಬಡಿದರು ಮತ್ತು ನನ್ನ ತಂದೆಯನ್ನು ನೋಡಲು ಒತ್ತಾಯಿಸಿದರು. ನಾನು ಕಿಟಕಿಯಿಂದ ಹೊರಗೆ ನೋಡಿದೆ ಮತ್ತು ಅವರು ಮುಸುಕು ಹಾಕಿಕೊಂಡು ಕೊಡಲಿಗಳನ್ನು ಹೊತ್ತೊಯ್ಯುತ್ತಿದ್ದರು. ಅವರಲ್ಲಿ ಇಬ್ಬರು ಬಂದೂಕುಗಳನ್ನು ಹೊಂದಿದ್ದರು” ಎಂದು ಹುಡುಗಿ ತಿಳಿಸಿದ್ದಾಳೆ.

ಅವಳು ಕೊಡಲಿ ಹಿಡಿದ ದಾಳಿಕೋರರಲ್ಲಿ ಒಬ್ಬನ ಮೇಲೆ ಧಾವಿಸಿ ಅವನಿಂದ ಆಯುಧವನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾದಳು. ಆಕೆಯ ನಡೆ ಗ್ಯಾಂಗ್ ಅನ್ನು ಅಸ್ಥಿರಗೊಳಿಸಿತು ಮತ್ತು ಆಕೆಯ ತಂದೆಯ ಮೇಲಿನ ದಾಳಿಯನ್ನು ವಿಳಂಬಗೊಳಿಸಿತು. ಇದರಿಂದ ಆಕೆಯ ನೆರೆಹೊರೆಯವರು ಮಧ್ಯಪ್ರವೇಶಿಸಿ ಆತನನ್ನು ರಕ್ಷಿಸಲು ಅಮೂಲ್ಯ ಸಮಯವನ್ನು ನೀಡಿತು. ನೆರೆಹೊರೆಯವರ ಮಧ್ಯಪ್ರವೇಶದ ನಂತರ ಗ್ಯಾಂಗ್ ಸ್ಥಳದಿಂದ ಪರಾರಿಯಾಗಿದೆ.

“ನಾನು ಅವರ ಕಡೆಗೆ ಓಡಲಾರಂಭಿಸಿದೆ. ಒಬ್ಬ ವ್ಯಕ್ತಿ ತನ್ನ ಕೊಡಲಿಯನ್ನು ಎತ್ತಿ ನನ್ನ ತಂದೆಯ ಎದೆಯ ಮೇಲೆ ಇಳಿಸುವುದನ್ನು ನಾನು ಗಾಬರಿಯಿಂದ ನೋಡಿದೆ. ನಾನು ಕೇವಲ ಒಂದು ಸೆಕೆಂಡ್ ತಡವಾಗಿದ್ದೆ. ಆದರೆ ನಾನು ಗಲಿಬಿಲಿಯಲ್ಲಿ ಧಾವಿಸಿ ಮತ್ತು ಕೊಡಲಿಗಳೊಂದಿಗೆ ಸೆಣಸಾಡಿದೆ. ನಾನು ಅವನಿಂದ ಕೊಡಲಿಯನ್ನು ಕಸಿದುಕೊಂಡೆ, ಅದನ್ನು ಎಸೆದಿದ್ದೇನೆ” ಎಂದು ಆಕೆ ತನ್ನ ಶೌರ್ಯದ ಸಾಹಸ ಮತ್ತು ಸಮಯ ಪ್ರಜ್ಞೆಯನ್ನು ವಿವರಿಸಿದ್ದಾರೆ.

ಕೊಲೆ ಯತ್ನದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ; ವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...