Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ...

FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ, ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬಳಿಕ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂದು ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

“ಹಿಂದೂ ಮಹಿಳೆಯರ ಮೇಲೆ ಮುಸ್ಲಿಮರು ಅತ್ಯಾಚಾರ ಎಸಗಿದ್ದಾರೆ. ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಿದ್ದಾರೆ. ಹಿಂದೂ ವೃದ್ದರೊಬ್ಬರನ್ನು ಕೊಂದು ನೇತು ಹಾಕಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿದ್ದಾರೆ ಇತ್ಯಾದಿ ವಿಡಿಯೋ, ಫೋಟೋಗಳು ಕಳೆದೆರಡು ದಿನಗಳಿಂದ ವ್ಯಾಪಕವಾಗಿ ವೈರಲ್ ಆಗಿವೆ.

ಇದೀಗ ಹೊಸದಾಗಿ ಯುವತಿಯೊಬ್ಬಳ ಕೈಕಾಲುಗಳನ್ನು ಕಟ್ಟಿ, ಆಕೆಯ ಬಾಯಿಗೆ ಗಮ್‌ಟೇಪ್ ಹಾಕಿರುವ ವಿಡಿಯೋ ಕಾಣಿಸಿಕೊಂಡಿದೆ.

ಬಲಪಂಥೀಯ ಸುದ್ದಿ ಸಂಸ್ಥೆ “ದಿ ಜೈಪುರ್ ಡೈಲಾಗ್ಸ್” ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ! ಅವರನ್ನು ಅತ್ಯಾಚಾರವೆಸಗಲಾಗಿದೆ ಮತ್ತು ಕೊಲ್ಲಲಾಗಿದೆ. ಹಿಂದೂಗಳನ್ನು ಗುರಿಯಾಗಿಸಿ ಬಾಂಗ್ಲಾದೇಶದಲ್ಲಿ ಹತ್ಯಾಕಾಂಡ ನಡೆಯುತ್ತಿದೆ” ಎಂದು ಬರೆದುಕೊಂಡಿದೆ.

ಉತ್ತರ ಕರ್ನಾಟಕ ಲೆಜೆಂಡ್ಸ್‘ ಎಂಬ ಇನ್‌ಸ್ಟಾಗ್ರಾಂ ಪೇಜ್‌ ಒಂದರಲ್ಲೂ ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದಲ್ಲಿ ಶಾಂತಿ ದೂತರಿಂದ ಹಿಂದೂ ಮಹಿಳೆಯರ ಮೇಲೆ ದಾಳಿ ಮತ್ತು ಹಿಂದೂ ದೇವಾಲಯಗಳನ್ನು ಸುಟ್ಟು ಹಾಕಿದ್ದಾರೆ. All Eyes on Rafa ಎಂದು ಹಾಕಿದವರು ಯಾರೂ ಬಾಂಗ್ಲಾದ ಹಿಂದೂಗಳ ಮೇಲಿನ ದಾಳಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ? “ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಾಂಗ್ಲಾದೇಶದ ಜಗನ್ನಾಥ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪ್ರತಿಭಟನೆಯೊಂದರ ದೃಶ್ಯ ಎಂದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ ಜುಲೈ 26ರಂದು ‘Jnu Short Stories’ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ “ವಿಡಿಯೋದಲ್ಲಿರುವುದು ಜಗನ್ನಾಥ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿಯಾಗಿದ್ದು, ಆಕೆ ಆವಂತಿಕ ಎಂಬ ಮತ್ತೋರ್ವ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ವಿಶಿಷ್ಟವಾಗಿ ಪ್ರತಿಭಟಿಸಿದ ದೃಶ್ಯ ಇದಾಗಿದೆ. ಈಗ ದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆಯುತ್ತಿರುವುದರಿಂದ, ಈಕೆ ಛಾತ್ರಾ ಲೀಗ್ ನಾಯಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ”

“ಸುಳ್ಳು ಸುದ್ದಿಯಿಂದ ಆಕೆಗೆ ಬಹಳಷ್ಟು ನೋವಾಗಿದೆ. ಇದು ಆಕೆಗೆ ಆಘಾತಕ್ಕೆ ಕಾರಣವಾಗಬಹುದು. ಈ ಪೋಸ್ಟ್ ಆವಂತಿಕಾಳ ಆತ್ಮಹತ್ಯೆ ಮತ್ತು ಅದರ ಸಂಬಂಧ ವಿದ್ಯಾರ್ಥಿನಿ ನಡೆಸಿದ ಪ್ರತಿಭಟನೆಯ ಬಗ್ಗೆ ಗಮನ ಸೆಳೆಯುತ್ತದೆ. ವದಂತಿಗಳನ್ನು ಹರಡುವುದನ್ನು ನಿಲ್ಲಿಸಲು ಜನರಲ್ಲಿ ಕೋರುತ್ತೇವೆ” ಎಂದು ವಿವರಿಸಲಾಗಿದೆ.

ಈ ಪೋಸ್ಟ್‌ ಆಧರಿಸಿ ನಾವು ಆವಂತಿಕಾ ಎಂಬ ವಿದ್ಯಾರ್ಥಿನಿಯ ಆತ್ಮಹತ್ಯೆ ಮತ್ತು ಪ್ರತಿಭಟನೆಯ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬೆಂಗಾಳಿ ಸುದ್ದಿ ವೆಬ್‌ಸೈಟ್ ಡೈಲಿ ಇತ್ತೆಫಾಕ್ ಮಾರ್ಚ್ 17ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಆ ವರದಿಯಲ್ಲಿ ” ವಿದ್ಯಾರ್ಥಿನಿ ಫೈರೂಝ್ ಸದಾಫ್ ಆವಂತಿಕಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಆಗ್ರಹಿಸಿ ಜಗನ್ನಾಥ ವಿವಿಯ ವಿದ್ಯಾರ್ಥಿಗಳು ಪಂಜಿನ ಮೆರವಣಿಗೆ ನಡೆಸಿದರು. ಮೊಂಬತ್ತಿ ಹೊತ್ತಿಸಿ, ಬೀದಿ ನಾಟಕ ಮಾಡಿ ಪ್ರತಿಭಟಿಸಿದರು” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಬಾಂಗ್ಲಾದೇಶದ ಜಗನ್ನಾಥ ವಿವಿಯ ವಿದ್ಯಾರ್ಥಿನಿಯ ಪ್ರತಿಭಟನೆಯದ್ದೇ ಹೊರತು, ಹಿಂದೂ ಮಹಿಳೆಯರ ಮೇಲಿನ ದಾಳಿಯದ್ದಲ್ಲ. ಜಗನ್ನಾಥ ವಿವಿಯ ಆವಂತಿಕ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯೊಬ್ಬಳು ಕೈ ಕಾಲಿಗೆ ಹಗ್ಗಕಟ್ಟಿ, ಬಾಯಿಗೆ ಗಮ್‌ಟೇಪ್ ಹಾಕಿ ವಿಶಿಷ್ಟವಾಗಿ ಪ್ರತಿಭಟಿಸಿದ್ದಾಳೆ. ಅದನ್ನು ಹಿಂದೂ ಮಹಿಳೆಯರ ಮೇಲೆ ದಾಳಿ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ, ಈ ವಿಡಿಯೋ ಬಾಂಗ್ಲಾದ ಇತ್ತೀಚಿನ ಸರ್ಕಾರದ ವಿರುದ್ದದ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...