Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ನೋಟಿಸ್ ನೀಡಿದ ಕಾಂಗ್ರೆಸ್

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ನೋಟಿಸ್ ನೀಡಿದ ಕಾಂಗ್ರೆಸ್

ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ಇತರ ಪ್ರತಿಪಕ್ಷಗಳು

- Advertisement -
- Advertisement -

ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರಾದ ಕೆ.ಸಿ ವೇಣುಗೋಪಾಲ್ ಮತ್ತು ಹಿಬಿ ಈಡನ್ ಅವರು ನೋಟಿಸ್ ನೀಡಿದ್ದಾರೆ.

ಇಂದು ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಕುರಿತು ಚರ್ಚಿಸಲಾಗಿದ್ದು, ಮಸೂದೆಯನ್ನು ಒಮ್ಮತದಿಂದ ವಿರೋಧಿಸಲು ಕಾಂಗ್ರೆಸ್ ಸಂಸದರು ನಿರ್ಧರಿಸಿದ್ದಾರೆ.

ಇತರ ವಿರೋಧ ಪಕ್ಷಗಳು ಕೂಡ ಪ್ರಸ್ತಾವಿತ ತಿದ್ದುಪಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಮಸೂದೆಯನ್ನು ಸಂಸತ್ತಿನ ಸ್ಥಾಯಿ ಸಮಿತಿಗೆ ಪರಿಶೀಲನೆಗೆ ಕಳುಹಿಸಬೇಕೆಂದು ಒತ್ತಾಯಿಸಿವೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಬಿಜೆಪಿಯು ರಿಯಲ್ ಎಸ್ಟೇಟ್ ಕಂಪನಿಯಂತೆ ಕೆಲಸ ಮಾಡುತ್ತಿದೆ. ಹಾಗಾಗಿ ಅದನ್ನು “ಭಾರತೀಯ ಜಮೀನ್ ಪಾರ್ಟಿ” ಎಂದು ಮರುನಾಮಕರಣ ಮಾಡಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅಖಿಲೇಶ್ ಯಾದವ್ “ವಕ್ಫ್ ಆಸ್ತಿ ಒಂದು ನೆಪ ಮಾತ್ರವಾಗಿದ್ದು, ಇದು ರಕ್ಷಣಾ ಭೂಮಿ, ರೈಲ್ವೆ ಭೂಮಿ ಮತ್ತು ನಝುಲ್ ಭೂಮಿಯಂತೆ ಬಿಜೆಪಿ ಸದಸ್ಯರಿಗೆ ಅನುಕೂಲ ಮಾಡಿಕೊಡುವ ಯೋಜನೆಯ ಭಾಗವಾಗಿದೆ” ಎಂದಿದ್ದಾರೆ.

“ವಕ್ಫ್ ಬೋರ್ಡ್ ಜಮೀನುಗಳನ್ನು ಮಾರಾಟ ಮಾಡುವುದಿಲ್ಲ ಎಂದು ಲಿಖಿತವಾಗಿ ಖಾತರಿ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಮಸೂದೆಯು ವಕ್ಫ್ ಆಸ್ತಿಯನ್ನು ಅತಿಕ್ರಮಿಸುವ ಸರ್ಕಾರದ ಪ್ರಯತ್ನವಾಗಿದೆ. ಸಂಸತ್ತಿನಲ್ಲಿ ಮಸೂದೆ ಮಂಡಿಸಲಿ, ಸಮಾಜವಾದಿ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಲಿದೆ” ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, “ಮಸೂದೆಯ ಕುರಿತು ಎಲ್ಲಾ ಪಕ್ಷಗಳೊಂದಿಗೆ ಸಮಾಲೋಚಿಸಬೇಕು ಮತ್ತು ಅಗತ್ಯವಿದ್ದರೆ ತಿದ್ದುಪಡಿಗಳನ್ನು ಮಾಡಬೇಕು” ಎಂದಿದ್ದಾರೆ.

“ಈ ಮಸೂದೆಯನ್ನು ಹೇಗೆ ತರಲಾಗುತ್ತಿದೆ, ಅದನ್ನು ಅವರ ಮೈತ್ರಿ (ಎನ್‌ಡಿಎ) ಯಲ್ಲಿ ಚರ್ಚಿಸಲಾಗಿದೆಯೇ? ಜೆಡಿಯು ಮತ್ತು ಟಿಡಿಪಿ ಈ ವಕ್ಫ್ ಮಸೂದೆಯನ್ನು ನೋಡಿ ಒಪ್ಪಿಗೆ ನೀಡಿವೆಯೇ? ಒಂದು ಇದು ಮಾಡಿರದಿದ್ದರೆ, ಎಲ್ಲಾ ಮಧ್ಯಸ್ಥಗಾರರು, ಸಂಸದರ ಜೊತೆ ಚರ್ಚಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲು ಸರ್ಕಾರ ಬಯಸಿದೆ ಮತ್ತು ಅದನ್ನು ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೂಡ ಮುಕ್ತವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

“ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ” ಎಂದು ವಕ್ಫ್ ಕಾಯ್ದೆಗೆ ಮರು ನಾಮಕರಣಗೊಳಿಸಿ, ಕೇಂದ್ರ ಪೋರ್ಟಲ್ ಮೂಲಕ ವಕ್ಫ್ ಆಸ್ತಿಗಳ ನೋಂದಣಿ ವಿಧಾನವನ್ನು ಸುಗಮಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಜೊತೆಗೆ ಕೇಂದ್ರೀಯ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳ ರಚನೆಯ ವಿಷಯಗಳು ಮಸೂದೆಯಲ್ಲಿ ಒಳಗೊಂಡಿದ್ದು, ಇದು ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಪ್ರಾತಿನಿಧ್ಯ ಕೊಡುವ ಉದ್ದೇಶ ಹೊಂದಿದೆ.

ಪ್ರಸ್ತಾವಿತ ವಿಧೇಯಕ ಜಾರಿಯಾದರೆ ವಕ್ಫ್ ಆಸ್ತಿಯೇ ಅಥವಾ ಸರ್ಕಾರಿ ಭೂಮಿಯೇ? ಎಂಬುದನ್ನು ತೀರ್ಮಾನಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಸಿಗಲಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...