Homeಕರ್ನಾಟಕ"ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ": ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

“ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ”: ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

- Advertisement -
- Advertisement -

“ಮಾಧ್ಯಮದವರು ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಾರೆ. ಈ ಬಂಡೆ ಸಿದ್ದರಾಮಯ್ಯನವರ ಜೊತೆ ಸದಾ ಇದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ. ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ಗುಡುಗಿದರು.

“ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.

“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ. ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

“ರಾಜ್ಯದ ಜನರು, ಸಂವಿಧಾನದ ರಕ್ಷಣೆಗೋಸ್ಕರ, ನಮ್ಮ ಸರ್ಕಾರವನ್ನು ಉರುಳಿಸುವ, ನಾವು ಜನರಿಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ನಡೆಯುತ್ತಿದೆ. ಅದರಿಂದ ರಕ್ಷಣೆಗೋಸ್ಕರ ಈ ಜನಾಂದೋಲನ ಆಯೋಜಿಸಿದ್ದೇವೆ” ಎಂದು ಹೇಳಿದರು.

“ಮಿಸ್ಟರ್ ಕುಮಾರಸ್ವಾಮಿ..ಮಿಸ್ಟರ್ ಆಶೋಕಾ..ಮಿಸ್ಟರ್ ವಿಜಯೇಂದ್ರ..ನೀವು ಆಪರೇಶನ್ ಮಾಡಿ ಅನೇಕ ಸರ್ಕಾರಗಳನ್ನು ತೆಗೆದು ಹಾಕಿದ್ದೀರಿ. ಕುಮಾರಸ್ವಾಮಿ ನಿಮ್ಮ ಮುಖಂಡತ್ವದಲ್ಲಿ 19 ಸೀಟ್ ಮಾತ್ರ ಗೆಲ್ಲಿತು. ಈ ಡಿ.ಕೆ ಶಿವಕುಮಾರ್ ಮುಖಂಡತ್ವದಲ್ಲಿ 136 ಸೀಟ್ ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದ್ರೂ ಕೂಡ ಕಾಂಗ್ರೆಸ್ ತೆಗೆದು ಹಾಕಲು ಆಗಿಲ್ಲ. ನಿಮ್ಮ 19 ಸೀಟು.. ಈ ಬಡಜನರ ಶಕ್ತಿ, ಈ ಕಾಂಗ್ರೆಸ್ ಶಕ್ತಿಯನ್ನು ಇನ್ನು ಎರಡು ಜನ್ಮ ತಾಳಿದ್ರು ಕೂಡ, ನೀನು ಬಿಜೆಪಿಯವರು ಸೇರಿಕೊಂಡು ಏನೇ ಕುತಂತ್ರ ಮಾಡಿದ್ರೂ ಕೂಡ ಏನು ಮಾಡಲು ಸಾಧ್ಯವಿಲ್ಲ. ನಿನಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಏ ವಿಜಯೇಂದ್ರ, ಅಶೋಕಾ ನಿಮಗೆ ರಾಜೀನಾಮೆ ಬೇಕಾ? ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ : ಹೆಚ್‌.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿ : 10 ತಿಂಗಳಿನಿಂದ ಪ್ರತಿಕ್ರಿಯಿಸದ ರಾಜ್ಯಪಾಲರು; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...