Homeಮುಖಪುಟಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

"ತಿಲಕ ಧರಿಸಬೇಡಿ ಎಂದು ನೀವು ಹೇಳುತ್ತೀರಾ..?" ಎಂದು ಕಾಲೇಜಿನ ವಿರುದ್ಧ ಕಿಡಿಕಾರಿದ ಸುಪ್ರೀಂಕೋರ್ಟ್

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಕಾಲೇಜಿನ ನಿಯಮಗಳನ್ನು ಎತ್ತಿ ಹಿಡಿದಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠವು ಕಾಲೇಜು ವಿಧಿಸಿರುವ ಷರತ್ತುಗಳ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದೆ.

ವಿದ್ಯಾರ್ಥಿಗಳ ಧರ್ಮವನ್ನು ಬಹಿರಂಗಪಡಿಸಬಾರದು ಎಂಬ ಉದ್ದೇಶದಿಂದ ನಿಯಮ ವಿಧಿಸಲಾಗಿದೆ ಎಂಬ ಕಾಲೇಜಿನ ವಾದಕ್ಕೆ ಕಿಡಿಕಾರಿದ ನ್ಯಾಯಮೂರ್ತಿ ಖನ್ನಾ..”ಏನಿದು ನಿಯಮ? ಧರ್ಮ ಬಹಿರಂಗಪಡಿಸಬಾರದಾ? ಇಂತಹ ನಿಯಮಗಳನ್ನು ಹೇರಬೇಡಿ. ಅವರ (ವಿದ್ಯಾರ್ಥಿಗಳ) ಹೆಸರನ್ನೂ ನೀವು ಬಹಿರಂಗಪಡಿಸುವುದಿಲ್ವಾ? ಹಾಗಾದರೆ, ಅವರನ್ನು ಸಂಖ್ಯೆಗಳಿಂದ ಗುರುತಿಸುತ್ತೀರಾ?” ಎಂದು ಕೇಳಿದ್ದಾರೆ. “ಅವರು (ವಿದ್ಯಾರ್ಥಿಗಳು) ಒಟ್ಟಾಗಿ ಅಧ್ಯಯನ ಮಾಡಲಿ” ಎಂದಿದ್ದಾರೆ.

ಕಾಲೇಜು ಪರ ವಾದ ಮಂಡಿಸಿದ ಹಿರಿಯ ವಕೀಲೆ ಮಾಧವಿ ದಿವಾನ್ ” ಅದು ಖಾಸಗಿ ಸಂಸ್ಥೆ ಎಂದಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ “ಯಾವಾಗಿನಿಂದ ಆ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ? ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ವಕೀಲೆ ” 2008ರಿಂದ ಕಾಲೇಜು ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ. ಈ ವೇಳೆ ಮರುಪ್ರಶ್ನೆ ಕೇಳಿದ ನ್ಯಾಯಮೂರ್ತಿಗಳು “ಇಷ್ಟು ವರ್ಷಗಳಲ್ಲಿ ಯಾವುದೇ ನಿಯಮಗಳು ಇರಲಿಲ್ಲ. ಈಗ ಹಠಾತ್ ಆಗಿ ನಿಮಗೆ ಧರ್ಮ ನೆನಪಾಯಿತಾ? ಎಂದು ಕೇಳಿದ್ದು, ಬಹಳ ವರ್ಷಗಳ ನಂತರ ನೀವು ಅಂತಹ ಸೂಚನೆಗಳನ್ನು ನೀಡುತ್ತಿರುವುದು ದುರದೃಷ್ಟಕರ” ಎಂದಿದ್ದಾರೆ.

“ತಿಲಕ ಧರಿಸಬೇಡಿ” ಎಂದು ನೀವು ಹೇಳುತ್ತೀರಾ? ಎಂದು ನ್ಯಾಯಮೂರ್ತಿ ಖನ್ನಾ ಪ್ರಶ್ನಿಸಿದ್ದಾರೆ.

441 ಮುಸ್ಲಿಂ ವಿದ್ಯಾರ್ಥಿಗಳು ‘ಸಂತೋಷದಿಂದ ಕಾಲೇಜಿಗೆ ಹಾಜರಾಗುತ್ತಿದ್ದಾರೆ’ ಎಂದು ವಕೀಲೆ ದಿವಾನ್ ನ್ಯಾಯಾಲಯಕ್ಕೆ ತಿಳಿಸಿದ್ದು, ಕೆಲವು ಮುಸ್ಲಿಂ ವಿದ್ಯಾರ್ಥಿಗಳಿಂದ ಮಾತ್ರ ಆಕ್ಷೇಪಣೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಯಾವಾಗಲೂ ಹಿಜಾಬ್ ಧರಿಸುವುದಿಲ್ಲ” ಎಂದು ಹೇಳಿದ್ದಾರೆ.

” ಕಾಲೇಜಿನ ನಿಯಮ ಹುಡುಗಿ ಏನು ಧರಿಸಬೇಕೆಂದು ಸೂಚಿಸಿದಂತೆ ಆಗುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದ್ದು, ಮಹಿಳೆಯರಿಗೆ ಏನು ಧರಿಸಬೇಕೆಂದು ಹೇಳುವ ಮೂಲಕ ನೀವು ಹೇಗೆ ಸಬಲೀಕರಣ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

“ವಿದ್ಯಾರ್ಥಿಗಳ ಹಿನ್ನೆಲೆಯನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಕುಟುಂಬದ ಸದಸ್ಯರು ಹುಡುಗಿ ಏನನ್ನು ಧರಿಸಬೇಕು ಎಂದು ಹೇಳಬಹುದು ಮತ್ತು ಅವರು ಧರಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

“ವಿದ್ಯಾರ್ಥಿನಿಯರಿಗೆ ಕಾಲೇಜು ಬಿಟ್ಟು ಹೋಗುವಂತೆ ಹೇಳಬೇಡಿ. ನಿಮ್ಮ ನಿಯಮಗಳ ಆದೇಶವನ್ನು ತಡೆ ಹಿಡಿಯಿರಿ ಎಂದು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಹೈಕೋರ್ಟ್ ನೀಡಿದ್ದ ಆದೇಶದ ವಿವರಣೆ ಕೆಳಗಿದೆ 

ಲಿಂಕ್ ಒತ್ತಿ- ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...