Homeಮುಖಪುಟಬೇಡಿಕೆ ಕುಸಿತ - ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ - ಐ.ವಿ.ಗೌಲ್

ಬೇಡಿಕೆ ಕುಸಿತ – ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ – ಐ.ವಿ.ಗೌಲ್

- Advertisement -
- Advertisement -

ಮೊನ್ನೆ ಬಂದ ಮೂರು ಸಿನಿಮಾಗಳು ತಲಾ 120 ಕೋಟಿ ರೂಪಾಯಿ ಗಳಿಸಿವೆ. ಹೀಗಾಗಿ ನಮ್ಮ ದೇಶದ ಆರ್ಥಿಕ ಪರಿಸ್ಥಿತಿಗೆ ಯಾವುದೇ ತೊಂದರೆ ಆಗಿಲ್ಲ.

ಯುವ ಜನರಿಗೆ ಹೊಸ ವಿನ್ಯಾಸದ ಬಟ್ಟೆಗಳು ಬೇಕಾಗಿವೆ ಆದ್ದರಿಂದ ಅವರು ಹೊಸ ಬಟ್ಟೆ ಖರೀದಿಸುತ್ತಿಲ್ಲ.
ಮಧ್ಯ ವಯಸ್ಕರು ಓಲಾ, ಊಬರ್‌ಗಳಲ್ಲಿ ಓಡಾಡುತ್ತಿರುವುದರಿಂದ ಕಾರು, ಬೈಕು, ಟ್ರಕ್ಕು, ಟ್ರ್ಯಾಕ್ಟರು ಮಾರಾಟವಾಗುತ್ತಿಲ್ಲ

ಜಿಎಸ್‍ಟಿ ಸರಿಯಿಲ್ಲ. ಅದರಲ್ಲಿ ಕೆಲವು ಸಮಸ್ಯೆಗಳಿವೆ. ಅದರಿಂದ ತೆರಿಗೆ ಸಂಗ್ರಹ ಸರಿಯಾಗಬಹುದೆಂದು ಅಂದುಕೊಂಡಿದ್ದೆವು. ಆಗಲಿಲ್ಲ, ಸಾರಿ. ಆದರೆ ಏನು ಮಾಡುವುದು, ಅದು ದೇಶದ ಕಾನೂನು. ಪಾಲಿಸಲೇ ಬೇಕು.

ಇಂತಹ ಮುತ್ತಿನ ಹಾರದಂತಹ ಮಾತುಗಳು ನಮ್ಮ ಕಿವಿ ತುಂಬಿ ನಮಗೆ ಕರ್ಣಾನಂದವಾಗುತ್ತಿದೆ.
ಇವನ್ನು ಯಾರು ಯಾರಿಗೆ ಹೇಳಿದರು ಎನ್ನುವ ಪ್ರಶ್ನೆಗಳಿಗೆ ಪಾಸಿಂಗ್ ಮಾರ್ಕೂ ಬರುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತು.

ಒಟ್ಟಿನಲ್ಲಿ ಈಗ ಇಡೀ ದೇಶದ ತುಂಬ ಆರ್ಥಿಕ ಪರಿಸ್ಥಿತಿಯ ಸುದ್ದಿ. ಅರ್ಥದ ಸುದ್ದಿ ಹಾಗೂ ಅದರ ಅರ್ಥದ ಸುದ್ದಿ.
ಬರೀ ಅರ್ಥಾರ್ಥದ ಮಾತು.
ಯಾಕೆ?
ಹಿಗ್ಸ – ಬಾಸಾನ್ ಎಂಬ ಪರಮಾಣು ಭಾಗವನ್ನು, ದೇವ ಕಣ ಎಂದು ಕನ್ನಡ ಪತ್ರಿಕೆಗಳ ಭಾಷಾಂತರಕಾರರಿಂದ ಕರೆಯಲ್ಪಟ್ಟ ಅಣುವಿನ ತುಂಡಿನ ಬಗ್ಗೆ ಸಂಶೋಧಿಸಿದ ವಿಜ್ಞಾನಿ ಹಿಗ್ಸ ಅವರನ್ನು ಬ್ರಿಟಿಷ್ ಟಿವಿ ಚಾನಲ್ ಒಂದು ಮಾತಾಡಿಸಿತು.

ಈ ದೇವಕಣದ ಬಗ್ಗೆ ನೀವು ಸರಳ ಭಾಷೆಯಲ್ಲಿ 30 ಸೆಕೆಂಡುಗಳಲ್ಲಿ ಎಲ್ಲರೂ ತಿಳಿಯುವಂತೆ ಹೇಳಬಲ್ಲಿರಾ ಎಂದು ಸಂದರ್ಶಕ ಕೇಳಿದ.

`ಇಲ್ಲ. ಸಾಧ್ಯವಿಲ್ಲ` ಎಂದು ಅವರು ಹೇಳಿದರು. ಇಬ್ಬರೂ ನಕ್ಕರು.
ಈಗ ಭಾರತದ ಆರ್ಥಿಕ ವ್ಯವಸ್ಥೆಯನ್ನು ಕಾಡುತ್ತಿರುವ ಸಮಸ್ಯೆಯನ್ನು ಸರಳವಾಗಿ, ಎಲ್ಲರಿಗೂ ತಿಳಿಯುಂತೆ, ಕೆಲವೇ ಶಬ್ದಗಳಲ್ಲಿ ತಿಳಿಸಲು ಸಾಧ್ಯವೇ ಎನ್ನುವ ಪ್ರಶ್ನೆಗೆ ಆರ್ಥಿಕ ತಜ್ಞರು ಇಲ್ಲ, ಸಾಧ್ಯವೇ ಇಲ್ಲ ಅಂತ ಹೇಳಬಹುದೇನೋ. ಪ್ರಶ್ನೆ ಕೇಳಿದವರು, ಉತ್ತರ ಕೊಟ್ಟವರು, ಇಬ್ಬರೂ ನಗಲಾರದೇ ಮಾತು ಮುಗಿಸಬಹುದೇನೋ.

ನಮ್ಮ ವಾರ್ಷಿಕ ಬೆಳವಣಿಗೆಯ ದರ ಕಡಿಮೆ ಆಗಿರುವುದಕ್ಕೂ, ನಿರುದ್ಯೋಗ ಬೆಳೆಯುತ್ತಿರುವುದಕ್ಕೂ, ಸಾಲ ಹೆಚ್ಚಾಗಿ, ಉತ್ಪನ್ನ ಕಡಿಮೆಯಾಗಿ ಷೇರು ಮಾರುಕಟ್ಟೆ ನಷ್ಟ ಅನುಭವಿಸುತ್ತಿರುವುದಕ್ಕೂ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲು ನಮ್ಮ ರಫ್ತು ಭಾಗೀದಾರಿಕೆ ಕಡಿಮೆ ಆಗುತ್ತಿರುವುದಕ್ಕೂ ಅನೇಕ ಕಾರಣಗಳಿರಬಹುದು.
ತಿಳಿದವರು ಅದನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುತ್ತಿರಬಹುದು. ತಮ್ಮ ವಾದವನ್ನು ಬೆಂಬಲಿಸಲು ಅವರು ತಮ್ಮದೇ ಆದ ಸಿದ್ಧಾಂತಗಳನ್ನು ನೆಚ್ಚಿಕೊಂಡಿರಬಹುದು.

ಅಂತಹ ಅನೇಕ ವಾದಗಳಲ್ಲಿ ಒಂದು `ಡಿಮಾಂಡ್ ಸ್ಲಂಪ್` ಅಥವಾ `ಬೇಡಿಕೆ ಕುಸಿತದ` ಸಿದ್ಧಾಂತ.
ಅದು ಸರಿಯೋ ತಪ್ಪೋ ಎನ್ನುವ ಮಾತಿಗೆ ಹೋಗದೇ ಇಲ್ಲಿ ನೋಡೋಣ.

ಇದರ ಸರಳಾರ್ಥವೆಂದರೆ ಜನರ ದುಡ್ಡು ಮಾರುಕಟ್ಟೆಯಲ್ಲಿ ಖರ್ಚಾಗುತ್ತಿಲ್ಲ. ಜನ ಖರೀದಿ ಮಾಡುತ್ತಿಲ್ಲ. ಇರಲಾರದವರಿಗೆ ದುಡ್ಡು ಹುಟ್ಟುತ್ತಿಲ್ಲ, ಇದ್ದವರಿಗೆ ಮುಂದೇನಾಗಬಹುದೋ ಎಂಬ ಆತಂಕದಿಂದ ಸುಮ್ಮನಿದ್ದಾರೆ. ಒಂದರಿಂದ ಶುರುವಾದ ಸೋಂಕು ಇನ್ನೊಂದಕ್ಕೆ ಹರಡುವಂತೆ, ಒಂದು ಕ್ಷೇತ್ರದ ಹಿಂಜರಿತ ಇನ್ನೊಂದು ಕ್ಷೇತ್ರಕ್ಕೆ ಹರಡಿ ಇಡೀ ದೇಶವನ್ನು ಆವರಿಸಿಕೊಂಡಿದೆ ಎನ್ನುವರಿದ್ದಾರೆ.
ಅವರ ಪ್ರಕಾರ ಇದರ ಮೂಲ ಕಾರಣಗಳು ಇವು.

ಮೊದಲನೇಯದಾಗಿ ದುಡಿಯುವ ಜನರ ಕೈಗೆ ಕೆಲಸ ಕೊಟ್ಟು ಸಂಪತ್ತು ಸೃಷ್ಟಿಸುವುದನ್ನು ಬಿಟ್ಟು ಬಂಡವಾಳ ಮೂಲಗಳು ನೌಕರರ ಸಂಖ್ಯೆಯನ್ನು ಕಮ್ಮಿ ಮಾಡಿ ಹೂಡಿಕೆದಾರರ ಹಿತಾಸಕ್ತಿಯನ್ನು ಸಂರಕ್ಷಿಸುವ ಏಕೈಕ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಸೃಷ್ಟಿಸಿದ್ದು.

ವಿಶ್ವವನ್ನೇ ಒಂದು ಮಾರುಕಟ್ಟೆ ಮಾಡುವ ಉದ್ದೇಶದಿಂದ ಸೃಜಿಸಲಾದ ವಿಶ್ವ ಬ್ಯಾಂಕು, ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರದೇಶವಾರು ಮಾರುಕಟ್ಟೆ ಒಪ್ಪಂದಗಳು, ಇವೆಲ್ಲ ಸೇರಿ ಯಾವುದೇ ದೇಶಕ್ಕೆ ಆರ್ಥಿಕ ಸ್ವಾತಂತ್ರ್ಯ ಇಲ್ಲದೇ ಹೋದದ್ದು. ಈ ಗುಂಪುಗಳ ಕೆಲವು ಸದಸ್ಯರಾಷ್ಟ್ರಗಳ ಬಲಹೀನತೆಗಳು ಎಲ್ಲ ಸದಸ್ಯರನ್ನೂ, ಸದಸ್ಯರಲ್ಲದವರನ್ನೂ ಕಾಡಲು ಆರಂಭಿಸಿದ್ದು.

ಬ್ಯಾಂಕಿಂಗ್, ವಿಮೆ, ಗೃಹೋಪಯೋಗಿ ವಸ್ತುಗಳ ಉತ್ಪಾದನೆ ಇತ್ಯಾದಿ ಕೆಲ ಕ್ಷೇತ್ರಗಳ ಸಂಸ್ಥೆಗಳ ಅತಿ ಮೌಲ್ಯೀಕರಣ ಓವರ್ ವ್ಯಾಲುಏಷನ್. ಇವುಗಳಿಗೆ ತಾವು ಅರಗಿಸಿಕೊಳ್ಳಲು ಸಾಧ್ಯವಿರುವುದಕ್ಕಿಂತ ಹೆಚ್ಚಿನ ಬಂಡವಾಳ ಹರಿದು ಬಂದು, ನಿರೀಕ್ಷಿತ ಲಾಭ ಅಥವಾ ಉತ್ಪನ್ನ ಬರದೇ ಹೋದದ್ದು
ಕೊಳ್ಳುಬಾಕುತನ ಅತಿಯಾಗಿ ಜನ ಖರೀದಿಸಲು ಸಾಧ್ಯವಿದ್ದಕ್ಕಿಂತ ಹೆಚ್ಚು ಉತ್ಪಾದನೆ ಆಗಿ ಸಾಮಾನುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗದೇ ಉಳಿದಿರುವುದು
ಇತ್ಯಾದಿ

ಇದರ ಉಪಾಯಗಳೇನು?
ಅರ್ಥಶಾಸ್ತ್ರಜ್ಞೆ ಜಯಂತಿ ಘೋಷ್, ಶ್ರೀನಿವಾಸ್ ರಾಘವನ್ ಮತ್ತು ಇತರರು ಮೊನ್ನೆ ಒಂದು ವಿಚಾರ ಸಂಕಿರಣದಲ್ಲಿ ಹೇಳಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾರ್ವಜನಿಕ ಕ್ಷೇತ್ರದಲ್ಲಿ ಖರ್ಚನ್ನು ಹೆಚ್ಚಿಸಿ, ಸರಕಾರಿ ಉದ್ದಿಮೆಗಳನ್ನು ಚುರುಕಾಗಿಸಿ, ಉದ್ಯೋಗ ಖಾತ್ರಿ ಯಂತಹ ಯೋಜನೆಗಳಿಂದ ಹಳ್ಳಿಗಳ ಜನರ ಕೈಯಲ್ಲಿ ಹೆಚ್ಚಿನ ಹಣ ಹರಿಯುವಂತೆ ಮಾಡುವುದು, ಒಂದು ಉಪಾಯ. ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಸೃಷ್ಟಿ ಮುಂತಾದ ಕ್ಷೇತ್ರಗಳಲ್ಲಿ ಸರಕಾರಿ ಖರ್ಚನ್ನು ಹೆಚ್ಚಿಸುವುದು ಇನ್ನೊಂದು ಉಪಾಯ
ಭಾರತೀಯ ಅರ್ಥವ್ಯವಸ್ಥೆ ತೇಜಿ ಇರುವ ಚುರುಕಾದ, ಲಾಭ ಗಳಿಸಿಕೊಳ್ಳಬಲ್ಲಂತಹ ವ್ಯವಸ್ಥೆ ಎಂದು ಹೂಡಿಕೆದಾರರಿರಗೆ ಮನವರಿಕೆ ಮಾಡಿಕೊಡುವಂತಹ ಆತ್ಮ ವಿಶ್ವಾಸ ಹೆಚ್ಚಿಸುವ ಕ್ರಮ ಕೈಗೊಳ್ಳುವುದು ಇತ್ಯಾದಿ.

ಈ ನೆಲದ ಅರ್ಥಶಾಸ್ತ್ರಜ್ಞ ಡಾ. ಡಿ. ಎಂ ನಂಜುಂಡಪ್ಪ ನವರ ಮಾತಿನಂತೆ ಭಾರತದ ಎಲ್ಲಾ ಸಮಸ್ಯೆಗಳಿಗೆ ಇರುವ ಉಪಾಯಗಳು ಸರಳ. ಜನರ ದುಡಿಮೆಗೆ ತಕ್ಕ ಪ್ರತಿಫಲ ದೊರಕಬೇಕು, ಅವರು ಹೆಚ್ಚಿನ ಹಣ ಉಳಿಸಬೇಕು, ಹಾಗೂ ವಸ್ತುಗಳು ಹಾಗೂ ಸೇವೆಗಳಿಗೆ ಬೇಡಿಕೆ ಕುಗ್ಗದಂತೆ ನೋಡುವುದು ಎಂಬ ಅವರ ಮಾತು ನಮ್ಮನ್ನು ಉಳಿಸೀತು.

ವಿಶ್ವ ಕಂಡ ಅತ್ಯಂತ ದೊಡ್ಡ ಆರ್ಥಿಕ ಹಿಂಜರಿತ ವೆನ್ನಲಾಗುವ ಗ್ರೇಟ್ ಡಿಪ್ರೆಷನ್ ಅಮೇರಿಕೆ ಯನ್ನು 1930ರ ದಶಕದಲ್ಲಿ ಕಾಡಿತು. ಜಗತ್ತಿನ ದೊಡ್ಡಣ್ಣ ಎನ್ನಿಸಿಕೊಂಡ ದೇಶ ಇತರರ ಕಣ್ಣಲ್ಲಿ ಸಣ್ಣವರಾಗಬೇಕಾಗಿ ಬಂತು.
ಅದನ್ನು ನಿಭಾಯಿಸಿ ಅಮೇರಿಕೆಯ ಆರ್ಥಿಕತೆಯನ್ನೂ ಹಾಗೂ ಅದರೊಟ್ಟಿಗೆ ವಿಶ್ವದ ಆರ್ಥಿಕತೆಯನ್ನು ಸಂಭಾಳಿಸಿದ ನಾಯಕ ಎಂದು ಅಮೇರಿಕೆಯ ಅಧ್ಯಕ್ಷ ಫ್ರ್ಯಾಂಕ್ಲಿನ್ ರೂಸವೆಲ್ಟ್ ನನ್ನು ಗುರುತಿಸಲಾಗುತ್ತದೆ.
ಅವನ ಒಂದು ಮಾತು ಇಲ್ಲಿ ನೆನಪಾಗುತ್ತದೆ.

ರೂಸವೆಲ್ಟ್ ಅವರು ತಮ್ಮ ಬೆಂಬಲಿಗರ ಸಭೆಯಲ್ಲಿ ಮಾತನಾಡುತ್ತಾ ಅಮೇರಿಕನ್ನರು ಖರೀದಿ ಮಾಡಬೇಕು. ಅವರ ಖರೀದಿ ಯೊಂದೇ ನಮ್ಮನ್ನು ಉಳಿಸಲು ಸಾಧ್ಯ ಎಂದರು. ಆಗ ಲಿಂಡಾ ಜೇಮ್ಸ್ ಎಂಬ ಪತ್ರಕರ್ತರೊಬ್ಬರು ಏನನ್ನು ಖರೀದಿಸಬೇಕು ಎಂದು ಕೇಳಿದರಂತೆ. `ಏನಾದರೂ ಆಗಬಹುದು` ಅಂತ ಅಧ್ಯಕ್ಷರು ಉತ್ತರಿಸಿದರಂತೆ. ಮರುದಿನ ಪತ್ರಿಕೆಗಳಲ್ಲಿ `ಬೈ ಎನಿಥಿಂಗ್. ದ್ಯಾಟ್ ಈಸ್ ದ ನ್ಯೂ ಡೀಲ್’ (`ಏನನ್ನಾದರೂ ಖರೀದಿಸಿ. ಅದೊಂದೇ ಉಪಾಯ`) ಎಂಬ ಶೀರ್ಷಿಕೆ ರಾರಾಜಿಸಿತ್ತಂತೆ.

ಅವರ ಈ ಮಾತಿನಿಂದಲೇ ಕೊಳ್ಳುಬಾಕತನದ ಪರಿ ಆರಂಭವಾಯಿತು ಎನ್ನುವವರೂ ಇದ್ದಾರೆ.

ಇಂದಿನ ಭಾರತದ ವಿಷಯಕ್ಕೆ ಬಂದರೆ ಏನಾದರೂ ಆಗಿ ಮಾರುಕಟ್ಟೆ ಚೇತರಿಸಿಕೊಂಡರೆ ಸಾಕು. ಏನಾದರೂ ಆಗಲಿ ಅನ್ನುವವರಿದ್ದಾರೆ. ಅಷ್ಟೊಂದು ಪರಾಕಾಷ್ಟೆ ಬೇಡ.

ಚೇತರಿಕೆ ಆಗಲಿ, ಅದರೊಂದಿಗೆ ಸ್ವಲ್ಪ ಕೂಳುಬಾಕತನ ಕಮ್ಮಿಯಾಗಲಿ ಅಂತಲೂ ಅನ್ನಿಸುತ್ತದೆ. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...