Homeಮುಖಪುಟ"ನೀವು ಮಾತನಾಡುವ ಟೋನ್ ಸರಿಯಿಲ್ಲ" : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ;...

“ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

- Advertisement -
- Advertisement -

ಇಂದು ರಾಜ್ಯಸಭೆಯಲ್ಲಿ ಮಾತನಾಡಲು ‘ಜಯಾ ಬಚ್ಚನ್’ ಅವರನ್ನು ಆಹ್ವಾನಿಸುವ ವೇಳೆ ಸಭಾಪತಿ ಜಗದೀಪ್ ಧನಕರ್ ‘ಜಯಾ ಅಮಿತಾಬ್ ಬಚ್ಚನ್’ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭಾಪತಿಗಳ ಹೆಸರು ಸಂಭೋದನೆಗೆ ತೀವ್ರ ಸಿಡಿಮಿಡಿಗೊಂಡ ಜಯಾ ಬಚ್ಚನ್, “ನನ್ನ ಜೊತೆ ನೀವು ಮಾತನಾಡುವ ಟೋನ್ ಸರಿಯಿಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

“ನಾನೊಬ್ಬಳು ಕಲಾವಿದೆ. ದೇಹ ಭಾಷೆ ಮತ್ತು ಅಭಿವ್ಯಕ್ತಿ ನನಗೆ ಅರ್ಥವಾಗುತ್ತದೆ. ನೀವು ಮಾತನಾಡುವ ಟೋನ್ ಸರಿಯಿಲ್ಲ. ನಾವು ಸಹೊದ್ಯೋಗಿಗಳು. ಆದರೆ, ನಿಮ್ಮ ಟೋನ್ ಒಪ್ಪುವಂತದಲ್ಲ” ಎಂದು ಜಯಾ ಬಚ್ಚನ್ ಕಿಡಿಕಾರಿದರು. ಸಭಾಪತಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಜಗದೀಪ್ ಧನಕರ್, “ನೀವು ಸೆಲೆಬ್ರಿಟಿಯಾಗಿರಬಹುದು. ಆದರೆ, ಸದನದ ಗೌರವವನ್ನು ಅರ್ಥೈಸಿಕೊಳ್ಳಬೇಕು” ಎಂದರು. ಜಯಾ ಬಚ್ಚನ್ ಪರ ನಿಂತು ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಸದಸ್ಯರ ವಿರುದ್ದ ಸಿಡಿಮಿಡಿಗೊಂಡರು.

“ಜಯಾ ಜೀ ನೀವು ಬಹಳ ಗೌರವವನ್ನು ಸಂಪಾದಿಸಿದ್ದೀರಿ. ನೀವು ನಟಿಯಾದರೆ ಅದು ನಿರ್ದೇಶಕರಿಗೆ ಸಂಬಂಧಿಸಿದ ವಿಷಯ. ಪ್ರತಿದಿನ ನಾನು ಅದನ್ನು ಪುನರಾವರ್ತಿಸಲು ಸಾಧ್ಯವಿಲ್ಲ. ನಿಮ್ಮಿಂದ ಕಲಿಯಬೇಕಾದ ಅಗತ್ಯವೂ ಇಲ್ಲ. ನೀವು ನನ್ನ ಟೋನ್ ಬಗ್ಗೆ ಮಾತನಾಡುತ್ತಿದ್ದೀರಾ? ಸಾಕು ನಿಲ್ಲಿಸಿ, ನೀವು ಏನೇ ಆಗಿರಬಹುದು. ಸದನದ ಗಾಂಭೀರ್ಯವನ್ನು ಕಾಪಾಡಿಕೊಂಡು ನಡೆದುಕೊಳ್ಳುವುದನ್ನು ಕಲಿಯಿರಿ” ಎಂದು ಸಭಾಪತಿ ಧನಕರ್ ಹೇಳಿದರು.

ಬಳಿಕ ಸಭಾಪತಿ ಧನಕರ್ ಗುರಿಯಾಗಿಸಿ ಹೇಳಿಕೆ ನೀಡಿದ್ದಕ್ಕೆ ಜಯಾ ಬಚ್ಚನ್ ವಿರುದ್ದ ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ ಖಂಡನಾ ನಿರ್ಣಯ ಮಂಡಿಸಿದರು.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಾ ಬಚ್ಚನ್ “ಸಭಾಪತಿಗಳ ಮಾತಿನ ಟೋನ್ ಸರಿ ಇರಲಿಲ್ಲ, ನಾನು ವಿರೋಧಿಸಿದೆ. ನಾವು ಶಾಲಾ ಮಕ್ಕಳಲ್ಲ, ನಮ್ಮಲ್ಲಿ ಕೆಲವರು ಹಿರಿಯ ನಾಗರಿಕರೂ ಇದ್ದಾರೆ. ಸಭಾಪತಿಗಳ ಟೋನ್‌ ನನಗೆ ಬೇಸರ ತರಿಸಿದೆ. ಮುಖ್ಯವಾಗಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿದೆ. ಇದು ಸಂಪ್ರದಾಯಕ್ಕೆ ವಿರುದ್ದ. ನೀವು ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು” ಎಂದು ಹೇಳಿದರು.

ಮುಂದಿನ ನಡೆಯೇನು? ಎಂದು ಪತ್ರಕರ್ತರು ಕೇಳಿದ್ದಕ್ಕೆ “ಸಭಾಪತಿಗಳು ನಮ್ಮ ಕ್ಷಮೆ ಕೇಳಬೇಕು. ಅವರು ನಮ್ಮನ್ನು ಕೇರ್ ಮಾಡುವುದಿಲ್ಲ ಎಂದಿದ್ದಾರೆ. ಅವರು ಕೇರ್ ಮಾಡಲೇಬೇಕು, ಏಕೆಂದರೆ ನಾವು ಸಂಸತ್ತಿನ ಸದಸ್ಯರು” ಎಂದರು.

ಇದನ್ನೂ ಓದಿ : ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...