Homeಮುಖಪುಟಎಸ್‌ಸಿ, ಎಸ್‌ಟಿಯಲ್ಲಿ 'ಕೆನೆಪದರ'ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

ಎಸ್‌ಸಿ, ಎಸ್‌ಟಿಯಲ್ಲಿ ‘ಕೆನೆಪದರ’ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

- Advertisement -
- Advertisement -

ಎಸ್‌ಸಿ, ಎಸ್‌ಟಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ. ಈ ವಿಚಾರದಲ್ಲಿ ಎನ್‌ಡಿಎ ಸರ್ಕಾರ ಸಂವಿಧಾನಕ್ಕೆ ಬದ್ದವಾಗಿ ಇರಲಿದೆ ಎಂದು ನಿನ್ನೆ (ಆ.9) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, “ಡಾ. ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯಲ್ಲಿ ಕೆನೆಪದರಕ್ಕೆ ಯಾವುದೇ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

“ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಕುರಿತು ಕೆಲವು ಸಲಹೆಗಳನ್ನು ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿವರವಾದ ಚರ್ಚೆ ನಡೆದಿದೆ” ಎಂದು ವೈಷ್ಣವ್ ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆ ಸಚಿವರು ಈ ವಿಷಯ ಎತ್ತಿದರೇ? ಎಂಬ ಪ್ರಶ್ನೆಗೆ ಉತ್ತರಿಸಲು ವೈಷ್ಣವ್ ನಿರಾಕರಿಸಿದ್ದಾರೆ. ಸಂಪುಟ ಸಭೆಯಲ್ಲಿ ಕೆನೆಪದರ ವಿಷಯವನ್ನು ಒಂದು ವಿಷಯವನ್ನಾಗಿ ಎತ್ತಿಕೊಳ್ಳಲಾಗಿತ್ತು. ಎಸ್‌ಸಿ, ಎಸ್‌ಟಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ. ಈ ವಿಚಾರದಲ್ಲಿ ಎನ್‌ಡಿಎ ಸರ್ಕಾರ ಸಂವಿಧಾನಕ್ಕೆ ಬದ್ಧವಾಗಿ ಇರಲಿದೆ ಎಂದು ಪುನರುಚ್ಚರಿಸಿದ್ದಾರೆ.

ಒಳ ಮೀಸಲಾತಿ ಸಂಬಂಧ ಶಾಸಕಾಂಗದ ಕಡೆಯಿಂದ ಯಾವುದಾದರು ಬದಲಾವಣೆಗಳನ್ನು ಯೋಜಿಸಲಾಗಿದೆಯೇ? ಎಂಬ ಪ್ರಶ್ನೆಗೆ, ” ಸಚಿವ ಸಂಪುಟ ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ನಾನು ನಿಮಗೆ ಹೇಳಿದ್ದೇನೆ” ಎಂದು ವೈಷ್ಣವ್ ಜಾರಿಕೊಂಡಿದ್ದಾರೆ.

ಶುಕ್ರವಾರ ಸಂಪುಟ ಸಭೆಗೂ ಮುನ್ನ ಎಸ್‌ಸಿ ಮತ್ತು ಎಸ್‌ಟಿ ಸಂಸದರ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಒಳಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಇಂದು ಎಸ್‌ಸಿ, ಎಸ್‌ಟಿ ಸಂಸದರ ನಿಯೋಗ ನನ್ನನ್ನು ಭೇಟಿ ಮಾಡಿದ್ದಾರೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ನಾವು ಬದ್ದರಾಗಿದ್ದೇವೆ” ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠವು 6:1 ಬಹುಮತದ ತೀರ್ಪಿನಲ್ಲಿ ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಎಸ್‌ಸಿ ಸಮುದಾಯಗಳನ್ನು ಉಪ-ವರ್ಗೀಕರಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ಇದೆ ಎಂದಿತ್ತು.

ತೀರ್ಪು ಪ್ರಕಟಿಸುವ ವೇಳೆ ಎಸ್‌ಸಿ, ಎಸ್‌ಟಿಯಲ್ಲಿ ಕೆನೆಪದರವನ್ನು ಗುರುತಿಸುವ ನೀತಿಯನ್ನು ರಾಜ್ಯಗಳು ರೂಪಿಸಬೇಕು ಮತ್ತು ಅವರಿಗೆ ಮೀಸಲಾತಿಯ ಪ್ರಯೋಜನವನ್ನು ನಿರಾಕರಿಸಬೇಕು ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ಹೇಳಿದ್ದರು.

ಪ್ರಧಾನಿಯನ್ನು ಭೇಟಿಯಾದ ನಿಯೋಗದ ಭಾಗವಾಗಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಸಿಕಂದರ್ ಕುಮಾರ್ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಕೆನೆಪದರ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಾವೆಲ್ಲರೂ ಚಿಂತಿತರಾಗಿದ್ದೆವು. ಈ ವಿಷಯದಲ್ಲಿ ಕಳವಳ ವ್ಯಕ್ತಪಡಿಸಿ ಜನರು ನಮಗೆ ಕರೆ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಸಂಸದ ಫಗ್ಗನ್ ಸಿಂಗ್ ಕುಲಸ್ತೆ ಮಾತನಾಡಿ, “ಕೆನೆಪದರದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ಅವಲೋಕನವನ್ನು ಕಾರ್ಯಗತಗೊಳಿಸಬಾರದು ಎಂದು ನಿಯೋಗವು ಪ್ರಧಾನಿಗೆ ತನ್ನ ಜ್ಞಾಪಕ ಪತ್ರದಲ್ಲಿ ಒತ್ತಾಯಿಸಿದೆ” ಎಂದಿದ್ದಾರೆ.

“ಪ್ರಧಾನಿ ಕೂಡ ಇದೇ ರೀತಿಯ ಅಭಿಪ್ರಾಯವನ್ನು ಹೊಂದಿದ್ದು, ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಚಿಂತಿಸಬೇಡಿ, ಎಸ್‌ಸಿ-ಎಸ್‌ಟಿಯಲ್ಲಿ ಕೆನೆಪದರ ಜಾರಿಗೆ ತರುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ” ಎಂದು ಕುಲಸ್ತೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ : “ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...