Homeಮುಖಪುಟಗಾಝಾದ ಶಾಲೆ ಮೇಲೆ ಇಸ್ರೇಲ್ ದಾಳಿ : 100ಕ್ಕೂ ಅಧಿಕ ಜನರು ಸಾವು

ಗಾಝಾದ ಶಾಲೆ ಮೇಲೆ ಇಸ್ರೇಲ್ ದಾಳಿ : 100ಕ್ಕೂ ಅಧಿಕ ಜನರು ಸಾವು

- Advertisement -
- Advertisement -

ಗಾಝಾ ನಗರದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದರಾಜ್ ಪ್ರದೇಶದ ಅಲ್-ತಬಿನ್ ಶಾಲೆಯಲ್ಲಿ ಬೆಳಗ್ಗಿನ ಪ್ರಾಥನೆ ನಡೆಯುತ್ತಿದ್ದ ವೇಳೆ ಇಸ್ರೇಲ್ ದಾಳಿ ನಡೆಸಿದೆ. ಇದರಿಂದ ಹೆಚ್ಚು ಸಾವು ನೋವುಗಳು ಸಂಭವಿಸಿದೆ ಎಂದು ಗಾಝಾದ ಸರ್ಕಾರಿ ಮಾಧ್ಯಮಗಳು ಹೇಳಿವೆ.

ಶಾಲೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್ ವಾಯುಪಡೆ, ಹಮಾಸ್ ಕಮಾಂಡ್ ಸೆಂಟರ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದಿದೆ.

ದಾಳಿಗೂ ಮುನ್ನ ನಾಗರಿಕರಿಗೆ ಅಪಾಯ ಉಂಟಾಗುವುದನ್ನು ತಪ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಹೇಳಿದೆ. ಹಾಗಿದ್ದರೆ, 100 ಅಧಿಕ ಜನರು ವಿಶೇಷವಾಗಿ ಮಕ್ಕಳು ಬಲಿಯಾಗಿದ್ದು ಹೇಗೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಅಲ್-ತಬಿನ್ ಶಾಲೆಯ ಪ್ರಾರ್ಥನಾ ಕೊಠಡಿಯನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದ್ದು, ತರಗತಿ ಕೊಠಡಿಗಳಲ್ಲೂ ಜನರನ್ನು ಹತ್ಯೆ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗಿದ್ದಾರೆ. ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅಲ್ ಅಹ್ಲಿ ಅರಬ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಯ ತೀವ್ರತೆಗೆ ಜನರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೆಲವರ ದೇಹಗಳು ಸುಟ್ಟು ಕರಕಲಾಗಿತ್ತು. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಸಿಬ್ಬಂದಿ, ಮತ್ತು ಅಗತ್ಯ ವಸ್ತುಗಳು ಲಭ್ಯವಿಲ್ಲ. ಹಾಗಾಗಿ, ಬಳಸಿದ ವಸ್ತುಗಳನ್ನೇ ಮತ್ತೆ ಬಳಸುವ ಅನಿವಾರ್ಯತೆ ಎದುರಾಗಿದೆ. ಇತರ ಸಮಯಗಳಲ್ಲಿ ಬಳಸಿ ಬಿಸಾಡುವ ವೈದ್ಯಕೀಯ ಸಾಮಗ್ರಿಗಳನ್ನು ಇಲ್ಲಿ ಜೀವ ಉಳಿಸಲು ಪುನರ್ಬಳಕೆ ಮಾಡಲಾಗುತ್ತಿದೆ ಎಂದು ಅಲ್-ಜಝೀರಾದ ವರದಿಗಾರ ಹನಿ ಮಹಮೂದ್ ಹೇಳಿದ್ದಾರೆ.

ಪ್ಯಾಲೇಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವಸಂಸ್ಥೆಯ ‘ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ತೀನ್ ‘ ಪ್ರಕಾರ ಇಸ್ರೇಲಿ ಸೇನಾಪಡೆ ದಕ್ಷಿಣ ಗಾಝಾದ ಖಾನ್ ಯೂನುಸ್ ಪ್ರದೇಶದಿಂದ ಸುಮಾರು 60ರಿಂದ 70 ಸಾವಿರ ಜನರನ್ನು ಈಗಾಗಲೇ ಜನಸಂಖ್ಯೆಯಿಂದ ತುಂಬಿರುವ ಮವಾಸಿ ಪ್ರದೇಶಕ್ಕೆ ಸ್ಥಳಾಂತರಿಸಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ದರಾಜ್ ಶಾಲೆ ಮೇಲಿನ ದಾಳಿಗೆ ಇಸ್ರೇಲ್ 2,000 ಪೌಂಡ್ ಬಾಂಬ್‌ಗಳನ್ನು ಬಳಸಿದೆ ಎಂದು ಗಾಝಾದ ಮಾಧ್ಯಮ ಕಚೇರಿಗಳು ಹೇಳಿವೆ.

ಇಂದಿನ ದಾಳಿಗೂ ಮುನ್ನ ಕೊನೆಯದಾಗಿ ಇಸ್ರೇಲ್ ನಡೆಸಿದ ದಾಳಿಯಿಂದ ಖಾನ್ ಯೂನುಸ್‌ನಲ್ಲಿ 19 ಸೇರಿ ಗಾಝಾದ ವಿವಿದೆಡೆ ಒಟ್ಟು 35 ಮಂದಿ ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 7, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 39,699 ಜನರು ಸಾವನ್ನಪ್ಪಿದ್ದು, 91,722 ಜನರು ಗಾಯಗೊಂಡಿದ್ದಾರೆ.

ಫೋಟೋ ಸಾಂದರ್ಭಿಕ

ಇದನ್ನೂ ಓದಿ : ಎಸ್‌ಸಿ, ಎಸ್‌ಟಿಯಲ್ಲಿ ‘ಕೆನೆಪದರ’ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...