Homeಮುಖಪುಟವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ...

ವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ ಸೂರ್ಯ, ವೀರೇಂದ್ರ ಹೆಗ್ಗಡೆಗೆ ಸ್ಥಾನ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಪರಿಶೀಲನೆಗೆ ಶುಕ್ರವಾರ ಕೇಂದ್ರ ಸರ್ಕಾರ 31 ಸದಸ್ಯರ ಜಂಟಿ ಸದನ ಸಮಿತಿ (ಜೆಪಿಸಿ) ರಚಿಸಿದೆ. ಜೆಪಿಸಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಪ್ರಸ್ತಾವನೆಯನ್ನು ಉಭಯ ಸದನಗಳು ಅಂಗೀಕರಿಸಿವೆ.

ಅಸ್ತಿತ್ವದಲ್ಲಿರುವ 1995ರ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ತಿದ್ದುಪಡಿ ಮಸೂದೆ ಪ್ರಸ್ತಾಪಿಸಿದ್ದು, ಅವುಗಳ ಬಗ್ಗೆ ಸದನ ಸಮಿತಿ ಪರಿಶೀಲನೆ ನಡೆಸಲಿದೆ.

ಸಂಸತ್ತಿನ ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಜಂಟಿ ಸದನ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ. ಸಮಿತಿಯ 21 ಸದಸ್ಯರನ್ನು ಲೋಕಸಭೆಯಿಂದ ಮತ್ತು ಉಳಿದವರು ರಾಜ್ಯಸಭೆಯಿಂದ ಆಯ್ಕೆ ಮಾಡಲಾಗಿದೆ.

ಲೋಕಸಭೆಯ ಸಂಸದರಾದ ಜಗದಾಂಬಿಕಾ ಪಾಲ್, ಡಾ ನಿಶಿಕಾಂತ್ ದುಬೆ, ತೇಜಸ್ವಿ ಸೂರ್ಯ, ಅಪರಾಜಿತಾ ಸಾರಂಗಿ, ಡಾ ಸಂಜಯ್ ಜೈಸ್ವಾಲ್, ದಿಲೀಪ್ ಸೈಕಿಯಾ, ಅಭಿಜಿತ್ ಗಂಗೋಪಾದಾಯ, ಡಿ ಕೆ ಅರುಣಾ, ಗೌರವ್ ಗೊಗೊಯ್, ಇಮ್ರಾನ್ ಮಸೂದ್, ಡಾ ಮೊಹಮ್ಮದ್ ಜಾವೇದ್, ಮೊಹಿಬ್ಬುಲ್ಲಾ, ಕಲ್ಯಾಣ್ ಬ್ಯಾನರ್ಜಿ, ಎ ರಾಜಾ, ಲಾವು ಶ್ರೀಕೃಷ್ಣ ದೇವರಾಯಲು, ದಿಲೇಶ್ವರ ಕಮೈತ್, ಅರವಿಂದ್ ಸಾವಂತ್, ಮಹ್ತ್ರೆ ಬಲ್ಯ ಮಾಮ ಸುರೇಶ್ ಗೋಪಿನಾಥ್, ನರೇಶ್ ಗಣಪತ್ ಮ್ಹಾಸ್ಕೆ, ಅರುಣ್ ಭಾರತಿ ಮತ್ತು ಅಸಾದುದ್ದೀನ್ ಓವೈಸಿ ಸಮಿಯಲ್ಲಿ ಇದ್ದಾರೆ.

ರಾಜ್ಯಸಭೆಯಿಂದ ಬ್ರಿಜ್ ಲಾಲ್, ಮೇಧಾ ವಿಶ್ರಮ್ ಕುಲಕರ್ಣಿ, ಗುಲಾಮ್ ಅಲಿ, ರಾಧಾ ಮೋಹನ್ ದಾಸ್ ಅಗರವಾಲ್ (ಎಲ್ಲರೂ ಬಿಜೆಪಿ) ಸೈಯದ್ ನಾಸೀರ್ ಹುಸೇನ್ (ಕಾಂಗ್ರೆಸ್), ಮೊಹಮ್ಮದ್ ನದಿಮುಲ್ ಹಕ್ (ಟಿಎಂಸಿ), ವಿ ವಿಜಯಸಾಯಿ ರೆಡ್ಡಿ (ವೈಎಸ್‌ಆರ್‌ಸಿಪಿ) , ಎಂ ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ), ಸಂಜಯ್ ಸಿಂಗ್ (ಎಎಪಿ) ಮತ್ತು ನಾಮನಿರ್ದೇಶಿತ ಸದಸ್ಯರಾದ ಧರ್ಮಸ್ಥಳದ ಡಾ. ವಿರೇಂದ್ರ ಹೆಗ್ಗಡೆ ಸಮಿತಿಯ ಸದ್ಯಸರಾಗಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಗಿದ್ದು, ತೀವ್ರ ಚರ್ಚೆಯ ನಂತರ ಜಂಟಿ ಸದನ ಸಮಿತಿಗೆ ಕಳುಹಿಸಲಾಗಿದೆ. ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ಮುಸ್ಲಿಮರನ್ನು ಗುರಿಯಾಗಿಸಿ ಮಸೂದೆಯನ್ನು ರೂಪಿಸಲಾಗಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ : ಪಠ್ಯ ಪುಸ್ತಕದಿಂದ ‘ಸಂವಿಧಾನದ ಪ್ರಸ್ತಾವನೆ’ ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...