Homeಮುಖಪುಟಲಡಕ್‍ಗೆ ಹೋಗಲು ಅಧಿಕಾರಿಗಳು ಹೆದರೋದ್ಯಾಕೆ ಗೊತ್ತೇ?

ಲಡಕ್‍ಗೆ ಹೋಗಲು ಅಧಿಕಾರಿಗಳು ಹೆದರೋದ್ಯಾಕೆ ಗೊತ್ತೇ?

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ ಇಬ್ಭಾಗವಾಗಿದೆ. ಒಂದು ಜಮ್ಮುಕಾಶ್ಮೀರ ಮತ್ತೊಂದು ಲಡಕ್.ಇವೆರೆಡು ಈಗ ಕೇಂದ್ರಾಡಳಿತಕ್ಕೆ ಒಳಪಟ್ಟ ಪ್ರದೇಶಗಳು. ಜಮ್ಮುಕಾಶ್ಮೀರದಲ್ಲಿ ವಿಧಾನಸಭೆ ಇದ್ದರೆ, ಲಡಕ್‍ನಲ್ಲಿ ಇಲ್ಲ. ಇಲ್ಲಿಗೆ ಇಬ್ಬರು ಲೆಫ್ಟಿನೆಂಟ್ ಗೌರ್ನರ್ ಗಳು ನೇಮಕ ಆಗಬೇಕು. ಆದರೆ ಇದುವರೆಗೆ ಆ ಪ್ರಕ್ರಿಯೆ ನಡೆದಿಲ್ಲ. ಕಣಿವೆ ರಾಜ್ಯ ಎರಡು ಭಾಗವಾದ ಮೇಲೆ ಗಡಿಗಳನ್ನು ಗುರುತಿಸಿದೆ. ಲಡಕ್‍ನಲ್ಲಿ ಎರಡು ಜಿಲ್ಲೆಗಳು ಇದ್ದರೆ, ಜಮ್ಮುಕಾಶ್ಮೀರದಲ್ಲಿ 20 ಜಿಲ್ಲೆಗಳು ಉಳಿದಿವೆ. ವಿಂಗಡಣೆಯೇನೋ ಆಯಿತು. ಆದರೆ ನೌಕರರ ನಿಯೋಜನೆ ಆಗಬೇಕಲ್ಲವೇ? ಹೊಸ ನೇಮಕಾತಿಯೂ ನಡೆಯಬೇಕಲ್ಲವೇ? ಇದು ಸರ್ಕಾರಕ್ಕೆ ತಲೆನೋವು ಸೃಷ್ಟಿಸಿದೆ.

ಜಮ್ಮು ವಿಭಾಗದಲ್ಲಿ ಹತ್ತು ಜಿಲ್ಲೆಗಳು ಮತ್ತು ಕಾಶ್ಮೀರ ವಿಭಾಗದಲ್ಲಿ ಹತ್ತು ಜಿಲ್ಲೆಗಳು ಬರುತ್ತವೆ. ಜಮ್ಮು ಉಪವಿಭಾಗ 26,293 ಚದರ ಕಿ.ಲೋ ಮೀಟರ್ ವ್ಯಾಪ್ತಿಯಲ್ಲಿ ಹರಡಿಕೊಂಡಿದೆ. ಇಲ್ಲಿ 53,50,811 ಮಂದಿ ಜನರು ವಾಸವಿದ್ದಾರೆ. ಅಂತೆಯೇ ಕಾಶ್ಮೀರ 15,948 ಚದರ ಕಿ.ಲೋ ಮೀಟರ್ ವ್ಯಾಪ್ತಿಯಲ್ಲಿ ವಿಸ್ತರಿಸಿದೆ. ಈ ವಿಭಾಗದಲ್ಲಿ 69,07,623 ಜನ ವಾಸಿಸುತ್ತಿದ್ದಾರೆ ಎಂಬ ಅಂಕಿ ಅಂಶಗಳು 2011 ಜನಗಣತಿಯಿಂದ ತಿಳಿಯುತ್ತದೆ. ಅಂದರೆ ಜಮ್ಮುಕಾಶ್ಮೀರ ಎರಡು ವಿಭಾಗಗಳಿಂದ ಸೇರಿದರೆ 1,22,58,434 ಜನ ನೆಲೆಸಿರುವ ಮಾಹಿತಿ ಲಭ್ಯವಾಗುತ್ತದೆ.

ಜಮ್ಮುಕಾಶ್ಮೀರದಲ್ಲಿ ಕೃಷಿ ಯೋಗ್ಯ ಭೂಮಿ ಇದ್ದು ಸೇಬು, ಕೇಸರಿ ಬೆಳೆಗೆ ಪ್ರಸಿದ್ದಿ ಪಡೆದಿದೆ. ಲಕ್ಷಾಂತರ ಮಂದಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಉತ್ತಮ ರಸ್ತೆಗಳು, ವಾಸ ಯೋಗ್ಯ ಮನೆಗಳು, ಹೋಟೆಲ್‍ಗಳು, ಸುಂದರವಾದ ಮರಗಿಡ, ಶುದ್ಧ ಕುಡಿಯುವ ನೀರು ಹೀಗೆ ಎಲ್ಲಾ ಸೌಲಭ್ಯಗಳು ದೊರೆಯುತ್ತವೆ. ಐಶಾರಾಮಿ ರೆಸ್ಟೋರೆಂಟ್‍ಗಳಿಗೆ ಕೊರತೆ ಇಲ್ಲ. ಹೀಗಾಗಿ ಅಧಿಕಾರಿಗಳು ಇಲ್ಲಿರಲು ಇಷ್ಟಪಡುತ್ತಾರೆ.

ಲಡಕ್‍ನಲ್ಲಿ ಲೇಹ್ ಮತ್ತು ಕಾರ್ಗಿಲ್ ಎರಡು ಜಿಲ್ಲೆಗಳು ಬರುತ್ತವೆ. ಇದು ಶಿಖರ ಪ್ರದೇಶ. ಮರುಭೂಮಿ ಬಿಟ್ಟರೆ ಬೇರೆ ಏನನ್ನು ನೋಡಲು ಸಾಧ್ಯವಿಲ್ಲ. ಉತ್ತಮ ರಸ್ತೆ ಇಲ್ಲ. ಕಡಿದಾದ ದಾರಿಗಳು, ಸದಾ ಹಿಮ ಬೀಳುವ ಸ್ಥಳ. ಕುಡಿಯುವ ನೀರು ಸಿಗುವುದು ಕಷ್ಟ. ಮಂಜುಗಡ್ಡೆ ಕರಗಿಸಿ ನೀರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ವರ್ಷಪೂರ್ತಿ ಹಿಮ ಬೀಳುತ್ತಲೇ ಇರುತ್ತದೆ. ವಾಸ ಯೋಗ್ಯ ಮನೆಗಳ ಕೊರತೆ ಇದೆ. ಮರಗಿಡಗಳಿಲ್ಲದ ಪ್ರದೇಶ ಇದಾಗಿದೆ. ಏಪ್ರಿಲ್-ಜುಲೈ ತಿಂಗಳವರೆಗೆ ವ್ಯವಸಾಯ ಮಾಡಲು ಆಗುವುದೇ ಇಲ್ಲ. ಲಡಕ್ 59,146 ಚದರ ಕಿಲೋ ಮೀಟರ್ ವ್ಯಾಪ್ತಿ ಹೊಂದಿದ್ದು 2,90,000 ಜನ ಇಲ್ಲಿ ವಾಸಿಸುತ್ತಾರೆ. ಕಾರ್ಗಿಲ್ ಮುಸ್ಲಿಂ ಬಾಹುಳ್ಯ ಪ್ರದೇಶವಾಗಿದ್ದು 1,43,388 ಜನರಿದ್ದರೆ, ಲಡಕ್ ಬೌದ್ದರ ಪ್ರಾಬಲ್ಯವಿರುವ ಪ್ರದೇಶ. ಇಲ್ಲಿ ಬೌದ್ಧರ ಸಂಖ್ಯೆ 1,47,107 ಇದೆ. ಲಡಕ್‍ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್ ಹವಾಮಾನವಿರುತ್ತದೆ. ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು.

ಹೌದು, ಇದೇ ಕಾರಣಕ್ಕಾಗಿಯೇ ಜಮ್ಮುಕಾಶ್ಮೀರ ಬಿಟ್ಟು ಹೋಗಲು ಯಾವ ಅಧಿಕಾರಿಯೂ ಇಚ್ಚಿಸುತ್ತಿಲ್ಲ. ಇಲ್ಲಿನ ಹವಾಗುಣ, ಸೌಲಭ್ಯಗಳು, ರಸ್ತೆಗಳು, ಹೋಟೆಲ್‍ಗಳು, ಅಂಗಡಿಮುಂಗಟ್ಟುಗಳು, ವ್ಯವಸಾಯಯೋಗ್ಯ ಭೂಮಿ ಪ್ರಮುಖ ಕಾರಣ. ಜಮ್ಮುಕಾಶ್ಮೀರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ನೌಕರರಿದ್ದಾರೆ. ಇವರ ಪೈಕಿ 80 ಸಾವಿರ ಮಂದಿ ನೌಕರರು ಸ್ವತಂತ್ರರಾಗಿ ಮತ್ತು ಅರೆ ಸ್ವತಂತ್ರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ವರದಿಗಳು ತಿಳಿಸುತ್ತವೆ. ಸರ್ಕಾರ ಈಗ 350 ಮಂದಿ ಪೊಲೀಸ್ ಅಧಿಕಾರಿಗಳನ್ನು ಲಡಕ್‍ಗೆ ನಿಯೋಜನೆ ಮಾಡಿದೆ. ಅವರ್ಯಾರೂ ಅಲ್ಲಿಗೆ ಹೋಗಲು ಸುತಾರಾಂ ಇಷ್ಟಪಡುತ್ತಿಲ್ಲ.

ಕೆಲವು ನೌಕರರು ಲಡಕ್ ತಮ್ಮ ಸ್ವಂತ ಸ್ಥಳವಾಗಿದ್ದರೂ ಅಲ್ಲಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಲಡಕ್‍ಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಮೌನ ವಹಿಸಿದ್ದಾರೆ. ಬಹುತೇಕ ಅಧಿಕಾರಿಗಳು ಲಡಕ್ ಅನ್ನು ಆಯ್ಕೆ ಮಾಡಿಕೊಳ್ಳಲು ತಣ್ಣಗಿನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದರಿಂದ ಯಾವ ಕ್ರಮ ಕೈಗೊಳ್ಳಬೇಕು ಎಂಬ ಪ್ರಶ್ನೆ ಸರ್ಕಾರಕ್ಕೆ ಎದುರಾಗಿದೆ. ಕೆಲವು ನೌಕರರು ಲಡಕ್ ಆಯ್ಕೆಗೆ ಸರ್ಕಾರ ಸೂಚಿಸಿದರೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಪ್ರವಾಸಿಗರು ಲಡಕ್ ಕುರಿತು ಹೇಳುವ ಮಾತುಗಳು ಕೂಡ ಇಲ್ಲಿ ಗಮನಾರ್ಹ. ಲಡಕ್‍ನಲ್ಲಿ ಆಕ್ಸಿಜನ್ ಕಡಿಮೆ. ಒಣಭೂಮಿ ಮರಗಳಿಲ್ಲ. ದೈಹಿಕ ದೌರ್ಬಲ್ಯ ಇರುವವರು ಇಲ್ಲಿಗೆ ಭೇಟಿ ನೀಡುವುದೇ ಸರಿಯಲ್ಲ. ದೆಹಲಿಯಲ್ಲಿ ಮೂರು ಅಂತಸ್ತಿನ ಮಹಡಿ ಹತ್ತಿದಾಗ ಆಗುವಷ್ಟು ಸುಸ್ತು ಒಂದು ಮಹಿಡಿಯನ್ನು ಹತ್ತಿದಾಗ ಆಗುತ್ತದೆ. ಸಾಹಸ ಚಟುವಟಿಕೆ, ಚಾರಣ ನಡೆಸಲು ಪ್ರಶಸ್ತ ಸ್ಥಳ ಯುವಕರು ಇಲ್ಲಿ ಸಾಹಸ ಕಾರ್ಯಗಳನ್ನು ಕೈಗೊಳ್ಳಬಹುದು. ಲಡಕ್‍ನಿಂದ ಪ್ರತಿವರ್ಷ ಶೇಕಡ 45ರಷ್ಟು ಸ್ಥಳೀಯರು ದೆಹಲಿ ಮತ್ತು ಜಮ್ಮು ಪ್ರದೇಶಗಳಿಗೆ ವಲಸೆ ಹೋಗುತ್ತಾರೆ. ಪ್ರತಿ ವರ್ಷ 100 ಜನ ವೃದ್ಧರಲ್ಲಿ 10 ಮಂದಿ ಸಾವನ್ನಪ್ಪುತ್ತಾರೆ. ಹೀಗೆ ಹಲವು ವಿಷಯಗಳ ಬಗ್ಗೆ ಅನುಭವದ ಮಾತುಗಳನ್ನು ದಾಖಲಿಸಿದ್ದಾರೆ.

ಲಡಕ್ ಪ್ರದೇಶದಲ್ಲಿ ಪದೇಪದೇ ಪ್ರವಾಹ ಎದುರಾಗುತ್ತದೆ. ಭೂಕುಸಿತ ಉಂಟಾಗುತ್ತದೆ. ಹಲವು ಮಂದಿ ಸಾವನ್ನಪ್ಪಿರುವ ಘಟನೆಗಳು ಕಣ್ಣಮುಂದಿವೆ. ಇಷ್ಟೆಲ್ಲಾ ಅನಾನುಕೂಲಗಳನ್ನು ಇಟ್ಟುಕೊಂಡು ಅಧಿಕಾರಿಗಳು ಲಡಕ್ ಹೋಗುವುದಾದರೂ ಹೇಗೆ? ಸರ್ಕಾರ ಸೂಕ್ತ ಸೌಲಭ್ಯ ಕಲ್ಪಿಸಿದರೆ ಅಧಿಕಾರಿಗಳು ಅಲ್ಲಿಗೆ ಹೋಗಿ ನಿಷ್ಟೆಯಿಂದ ಕೆಲಸ ಮಾಡಲು ಸಾಧ್ಯ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...