Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...