Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...