Homeಮುಖಪುಟ"ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ" : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

“ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

- Advertisement -
- Advertisement -

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜಾತಿ ಪ್ರಶ್ನಿಸಿ ವಿವಾದವೊಂದನ್ನು ಸೃಷ್ಟಿಸಿದ್ದರು. ಈ ಹಿನ್ನೆಲೆ ಆರ್‌ಎಸ್‌ಎಸ್‌ ಮುಖವಾಣಿ ‘ಪಾಂಚಜನ್ಯ’ ಸಾಪ್ತಾಹಿಕವು ತನ್ನ ಇತ್ತೀಚಿನ ಸಂಚಿಕೆಯಲ್ಲಿ ಜಾತಿ ವ್ಯವಸ್ಥೆಯನ್ನು ಬಲವಾಗಿ ಸಮರ್ಥಿಸಿದೆ ಎಂದು indianexpress.com ವರದಿ ಮಾಡಿದೆ.

ಜಾತಿ ವ್ಯವಸ್ಥೆಯನ್ನು ಭಾರತೀಯ ಸಮಾಜದ “ಒಗ್ಗೂಡಿಸುವ ಅಂಶ” ಎಂದು ತನ್ನ ಸಂಪಾದಕೀಯದಲ್ಲಿ ಪ್ರತಿಪಾದಿಸಿರುವ ವಾರಪತ್ರಿಕೆ, “ಮೊಘಲರಿಗೆ ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಬ್ರಿಟಿಷರು ಅದನ್ನು ತಮ್ಮ ಭಾರತವನ್ನು ಆಕ್ರಮಿಸುವ ಮಾರ್ಗದಲ್ಲಿನ ತಡೆ ಎಂಬುವುದಾಗಿ ಪರಿಗಣಿಸಿದ್ದರು” ಎಂದಿದೆ.

“ಜಾತಿ ವ್ಯವಸ್ಥೆಯು ಭಾರತದ ವಿವಿಧ ವರ್ಗಗಳನ್ನು ಅವರ ವೃತ್ತಿ ಮತ್ತು ಸಂಪ್ರದಾಯದ ಆಧಾರದಲ್ಲಿ ವರ್ಗೀಕರಿಸಿದ ಒಂದು ಸರಪಳಿಯಾಗಿತ್ತು. ಕೈಗಾರಿಕಾ ಕ್ರಾಂತಿಯ ನಂತರ, ಬಂಡವಾಳಶಾಹಿಗಳು ಜಾತಿ ವ್ಯವಸ್ಥೆಯನ್ನು ಭಾರತದ ಕಾವಲುಗಾರನಂತೆ ನೋಡಿದರು” ಎಂದು ವಾರಪತ್ರಿಕೆಯ ಸಂಪಾದಕ ಹಿತೇಶ್ ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ” ಎಂದು indianexpress.com ಹೇಳಿದೆ.

“ಜಾತಿ ವ್ಯವಸ್ಥೆಯು ಯಾವಾಗಲೂ ಆಕ್ರಮಣಕೋರರ ಗುರಿಯಾಗಿತ್ತು ಎಂದು ವಾದಿಸಿರುವ ಶಂಕರ್,‌ ಮೊಘಲರು ತಮ್ಮ ಖಡ್ಗದ ಬಲದಿಂದ ಅದನ್ನು ಗುರಿಯಾಗಿಸಿಕೊಂಡಿದ್ದರೆ, ಕ್ರೈಸ್ತ ಮಿಶನರಿಗಳು ಸೇವೆ ಮತ್ತು ಸುಧಾರಣೆಯ ಸೋಗಿನಲ್ಲಿ ಹಾಗೆ ಮಾಡಿದ್ದರು. ಜಾತಿಯ ರೂಪದಲ್ಲಿ ಭಾರತೀಯ ಸಮಾಜವು ಒಬ್ಬರ ಜಾತಿಗೆ ದ್ರೋಹವನ್ನು ಬಗೆಯುವುದು ದೇಶಕ್ಕೆ ದ್ರೋಹವಾಗಿದೆ ಎಂಬ ಸರಳವಾದ ವಿಷಯವನ್ನು ಅರ್ಥ ಮಾಡಿಕೊಂಡಿದೆ. ಮಿಶನರಿಗಳು ಭಾರತದ ಈ ಒಗ್ಗಟ್ಟಿನ ಸಮೀಕರಣವನ್ನು ಮೊಘಲರಿಗಿಂತ ಚೆನ್ನಾಗಿ ಅರಿತಿದ್ದರು. ಭಾರತ ಮತ್ತು ಅದರ ಸ್ವಾಭಿಮಾನವನ್ನು ಮುರಿಯಬೇಕಿದ್ದರೆ ಮೊದಲು ಜಾತಿ ವ್ಯವಸ್ಥೆಯನ್ನು ಬಂಧನ ಅಥವಾ ಶೃಂಖಲೆ ಎಂದು ಕರೆಯುವ ಮೂಲಕ ಜಾತಿಯ ಏಕೀಕರಣ ಸಮೀಕರಣವನ್ನು ಮುರಿಯಬೇಕು ಎನ್ನುವುದನ್ನು ಅವರು ಕಂಡುಕೊಂಡಿದ್ದರು. ಜಾತಿ ವ್ಯವಸ್ಥೆಯ ಕುರಿತು ಮಿಶನರಿಗಳ ಈ ತಿಳುವಳಿಕೆಯನ್ನು ಬ್ರಿಟಿಷರು ತಮ್ಮ ‘ಒಡೆದು ಆಳುವ’ ನೀತಿಗಾಗಿ ಅಳವಡಿಸಿಕೊಂಡಿದ್ದರು” ಎಂದು ಸಂಪಾದಕೀಯವು ವಾದಿಸಿದೆ ವರದಿ ತಿಳಿಸಿದೆ.

‘ಪಾಂಚಜನ್ಯ’ ದಿಂದ ಜಾತಿ ವ್ಯವಸ್ಥೆಯ ಈ ಸಮರ್ಥನೆಯು ಮಹತ್ವದ್ದಾಗಿದೆ, ಏಕೆಂದರೆ ವಂಚಿತ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ತಾನು ವಿರುದ್ಧವಾಗಿಲ್ಲ ಎಂದು ವಿವರಿಸುವುದು ಆರೆಸ್ಸೆಸ್‌ಗೆ ಕಷ್ಟವಾಗಿರುವ ಸಮಯದಲ್ಲಿ ಈ ಸಮರ್ಥನೆ ಬಂದಿದೆ.

ಜಾತಿ ತಾರತಮ್ಯವು ಭಾರತೀಯ ಸಮಾಜಕ್ಕೆ ಶಾಪವಾಗಿದೆ ಮತ್ತು ಅದನ್ನು ತೊಡೆದುಹಾಕಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಪದೇ ಪದೇ ಹೇಳುತ್ತಾರೆ. ತಮ್ಮ ಸಹೋದ್ಯೋಗಿಗಳ ಜಾತಿ ತಮಗೆ ತಿಳಿದಿಲ್ಲ ಎಂದು ಆರೆಸ್ಸೆಸ್ ಸದಸ್ಯರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಳೆದ 2,000 ವರ್ಷಗಳಿಂದ ಕೆಳಜಾತಿಗಳು ಅನುಭವಿಸಿರುವ ತಾರತಮ್ಯವನ್ನು ಸರಿದೂಗಿಸಲು ಮೀಸಲಾತಿಯನ್ನು ಇನ್ನೂ 200 ವರ್ಷಗಳ ಕಾಲ ಮುಂದುವರಿಸಿದರೂ ತಾನು ಅದನ್ನು ಬೆಂಬಲಿಸುತ್ತೇನೆ ಎಂದು ಭಾಗವತ್ ಕಳೆದ ವರ್ಷ ಹೇಳಿದ್ದರು.

“ಒಂದು ಜಾತಿ ಗುಂಪಿನಲ್ಲಿ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಗೊಂಡ ಕೌಶಲ್ಯಗಳಿಂದಾಗಿ ಬಂಗಾಳದ ನೇಕಾರರಂತಹ ಕುಶಲಕರ್ಮಿಗಳು ಎಷ್ಟೊಂದು ನಿಪುಣರಾಗಿದ್ದರೆಂದರೆ ಅವರಂತೆ ಉತ್ಪನ್ನಗಳನ್ನು ಉತ್ಪಾದಿಸಲು ಮ್ಯಾಂಚೆಸ್ಟರ್‌ನ ಜವಳಿ ಗಿರಣಿಗಳಿಗೂ ಸಾಧ್ಯವಾಗಿರಲಿಲ್ಲ ಎಂದು ಪ್ರತಿಪಾದಿಸಿರುವ ಸಂಪಾದಕೀಯವು, ಆಕ್ರಮಣಕೋರರು ಭಾರತದ ಕೈಗಾರಿಕೆಗಳನ್ನು ನಾಶಗೊಳಿಸಿದ್ದು ಮಾತ್ರವಲ್ಲ, ಭಾರತದ ಅನನ್ಯತೆಯನ್ನು ಬದಲಿಸಲು ಮತಾಂತರದ ಮೇಲೂ ಕೇಂದ್ರೀಕರಿಸಿದ್ದರು. ಜಾತಿಗತ ಗುಂಪುಗಳು ಇದಕ್ಕೆ ಮಣಿಯದಿದ್ದಾಗ ಅವರನ್ನು ಅವಮಾನಿಸಲಾಗಿತ್ತು. ಸ್ವಾಭಿಮಾನಿ ಸಮುದಾಯವು ತನ್ನ ತಲೆಯ ಮೇಲೆ ಮಾನವ ಮಲ ಹೊರುವಂತೆ ಬಲವಂತಗೊಳಿಸಿದ್ದವರು ಇದೇ ಜನರಾಗಿದ್ದರು. ಅದಕ್ಕೂ ಮೊದಲು ಭಾರತದಲ್ಲಿ ಇಂತಹ ಸಂಪ್ರದಾಯವಿರಲಿಲ್ಲ”ಎಂದು ಹೇಳಿದೆ.

“ಭಾರತೀಯ ಪೀಳಿಗೆಗಳ ಪ್ರತಿಭೆಗಳನ್ನು ಕಂಡು ಮತ್ಸರ ಪಡುತ್ತಿದ್ದ ಅವೇ ಕಣ್ಣುಗಳು ಹಿಂದೂ ಧರ್ಮದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾಶಗೊಳಿಸುವ ಕನಸು ಕಾಣುತ್ತಿವೆ” ಎಂದು ಶಂಕರ್ ಸಂಪಾದಕೀಯದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಪಾದಕೀಯ, “ಹಿಂದೂ ಜೀವನವು ಘನತೆ, ನೈತಿಕತೆ, ಜವಾಬ್ದಾರಿ ಮತ್ತು ಕೋಮು ಭ್ರಾತೃತ್ವವನ್ನು ಒಳಗೊಂಡಿದ್ದು, ಜಾತಿಯ ಸುತ್ತ ಸುತ್ತುತ್ತದೆ. ಇದು ವೈಯಕ್ತಿಕ ಕೇಂದ್ರಿತ ಮಿಷನರಿಗಳಿಗೆ ಅರ್ಥವಾಗದ ವಿಷಯ. ಮಿಷನರಿಗಳು ತಮ್ಮ ಮತಾಂತರ ಕಾರ್ಯಕ್ರಮಕ್ಕೆ ಜಾತಿಯನ್ನು ಅಡ್ಡಿಯಾಗಿ ಕಂಡರೆ, ಕಾಂಗ್ರೆಸ್ ಅದನ್ನು ಹಿಂದೂ ಐಕ್ಯತೆಗೆ ಒಂದು ತಡೆಯಾಗಿ ನೋಡುತ್ತದೆ. ಬ್ರಿಟಿಷರ ಮಾದರಿಯಲ್ಲಿ ಲೋಕಸಭೆ ಸ್ಥಾನಗಳನ್ನು ಜಾತಿ ಆಧಾರದ ಮೇಲೆ ವಿಭಜಿಸಿ ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸಲು ಬಯಸುತ್ತಿದೆ. ಅದಕ್ಕಾಗಿಯೇ ಅದು ಜಾತಿ ಗಣತಿಯನ್ನು ಬಯಸುತ್ತದೆ ಎಂದು ಪಾಂಚಜನ್ಯ ಸಂಪಾದಕೀಯ ಹೇಳಿದೆ ಎಂದು indianexpress.com ವಿವರಿಸಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಕೃತ್ಯದ ನಂತರ ತನ್ನ ಬಟ್ಟೆಗಳನ್ನು ತೊಳೆದಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...