Homeಮುಖಪುಟಮೈಸೂರು ಪಾದಯಾತ್ರೆ ಮುಗಿದ ಬೆನ್ನಲ್ಲೇ ಬಿಜೆಪಿ ಅತೃಪ್ತರಿಂದ ಪ್ರತ್ಯೇಕ ಸಭೆ; ಬಿಎಸ್‌ವೈ ವಿರೋಧಿ ಬಣ ಸಕ್ರಿಯ

ಮೈಸೂರು ಪಾದಯಾತ್ರೆ ಮುಗಿದ ಬೆನ್ನಲ್ಲೇ ಬಿಜೆಪಿ ಅತೃಪ್ತರಿಂದ ಪ್ರತ್ಯೇಕ ಸಭೆ; ಬಿಎಸ್‌ವೈ ವಿರೋಧಿ ಬಣ ಸಕ್ರಿಯ

- Advertisement -
- Advertisement -

ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ (ಮೂಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್‌‍ ನಾಯಕರು ಪಾದಯಾತ್ರೆ ನಡೆಸಿದ ಬೆನ್ನಲ್ಲೇ, ಈ ಹೋರಾಟದಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿಯ ಹಿರಿಯ ನಾಯಕರು ಭಾನುವಾರ ರಹಸ್ಯ ಸಭೆ ನಡೆಸಿದ್ದಾರೆ.

ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ರಾಜ್ಯ ಬಿಜೆಪಿಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ನಗರ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಅತೃಪ್ತರ ಗುಪ್ತ ಸಭೆಯಲ್ಲಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕೂಡ ಭಾಗವಹಿಸಿದ್ದರು.

ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸೋತ ಹಾಗೂ ಟಿಕೆಟ್ ವಂಚಿತ ಅತೃಪ್ತರನ್ನು ಒಟ್ಟುಗೂಡಿಸುವಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ರಮೇಶ್‌ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಡಿ.ಕೆ. ಶಿವಕುಮಾರ್ ಜತೆಗೆ ಒಪ್ಪಂದ ಮಾಡಿಕೊಂಡಿರುವ ಬಿಎಸ್‌‍ವೈ, ಬಿ.ವೈ.ವಿಜಯೇಂದ್ರ ಹಾಗೂ ಅಶೋಕ್‌ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅತೃಪ್ತರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳದೇ ಹಿಂದೆ ಸರಿದಿದ್ದರು. ಬೆಳಗಾವಿ ಜಿಲ್ಲೆಯ ಯಾವ ನಾಯಕರೂ ಸಹ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಬಾಲಚಂದ್ರ ಜಾರಕಿಹೊಳಿ ಸಹ ಅಂತರ ಕಾಯ್ದುಕೊಂಡಿದ್ದಾರೆ.

ಇದೀಗ ಅತೃಪ್ತ ನಾಯಕರು ಸಭೆ ನಡೆಸಿದ್ದು, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಜಿಎಂ ಸಿದ್ದೇಶ್ವರ ಹಾಗೂ ಪ್ರತಾಪ್ ಸಿಂಹ. ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿಎಸ್‌ವೈ ಮಾಜಿ ಆಪ್ತ ಸಹಾಯಕ ಸಂತೋಷ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು. ಮೂಡಾ ಪಾದಯಾತ್ರೆಗೆ ವಿರುದ್ಧವಾಗಿ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ವಾಲ್ಮೀಕಿ ಹಗರಣದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಬಿಎಸ್‌ವೈ ಕುಟುಂಬದ ವಿರುದ್ಧ ಯತ್ನಾಳ್‌ ನೇತೃತ್ವದಲ್ಲಿ ಮತ್ತೊಂದು ತಂಡ ಸಕ್ರಿಯವಾಗುತ್ತಿದೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಬಿಎಸ್‌ವೈ ಕುಟುಂಬದ ವಿರುದ್ಧ ನಿರ್ದಾಕ್ಷಿಣ್ಯವಾಗಿ ಮಾತನಾಡುತ್ತಿರುವ ಯತ್ನಾಳ್ ಅವರಿಗೆ ಹಲವರು ಬಿಜೆಪಿ ನಾಯಕರು ಸಾಥ್ ಕೊಟ್ಟಿರುವುದು ಪಕ್ಷದ ಬಲಾಢ್ಯ ನಾಯಕರಿಗೆ ಈ ಗುಂಪಿನ ಕಾರ್ಯಚಟುವಟಿಕೆಗಳು ನುಂಗಲಾರದ ತುತ್ತಾಗಿದೆ. ಉತ್ತರ ಕರ್ನಾಟಕದ ಪ್ರಮುಖ ನಾಯಕರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರೂ, ಬಹುತೇಕ ನಾಯಕರು ಯತ್ನಾಳ್‌ ಬೆನ್ನ ಹಿಂದೆ ಇರುವುದು ಸ್ಪಷ್ಟವಾಗಿದೆ.

ಲಿಂಬಾವಳಿ ಹೇಳಿದ್ದೇನು?

ಪಕ್ಷದ ಹಿರಿಯ ನಾಯಕರಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರವಿಂದ ಲಿಂಬಾವಳಿ ಕೂಡ ಒಬ್ಬರು. ಇದೀಗ ಇವರೂ ಸಹ ಬಿಎಸ್‌ವೈ ಕುಟುಂಬದ ವಿರುದ್ಧ ಬಂಡಾಯ ಸಾರಿದ್ದು, ಅತೃಪ್ತರ ಗುಂಪು ಸೇರಿದ್ದಾರೆ.

ಸಭೆ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಿಂಬಾವಳಿ, “ಇದು ಅತೃಪ್ತರ ಅಥವಾ ಭಿನ್ನಮತಿಯರ ಸಭೆ ಅಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೀನಾಯವಾಗಿ ಸೋತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಆಗದಿದ್ದರೂ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗಿದೆ. ಬಿಜೆಪಿ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಪಕ್ಷದಲ್ಲಿನ ದೋಷಗಳನ್ನು ಸರಿಪಡಿಸಿಕೊಂಡು ಪಕ್ಷ ಬಲಪಡಿಸಲು ಸಭೆಯಲ್ಲಿ ಚರ್ಚಿಸಲಾಗಿದೆ” ಎಂದು ಹೇಳಿದರು.

“ಮುಖ್ಯವಾಗಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಮತ್ತು ಎಸ್​ಸಿಪಿ, ಟಿಎಸ್​ಪಿ ಮೀಸಲಿಟ್ಟಿರುವ ಹಣವನ್ನು ತಮ್ಮ ಗ್ಯಾರಂಟಿಗಳಿಗೆ ಬಳಸಿರುವ ಬಗ್ಗೆಯೂ ಸುದೀರ್ಘ ಹೋರಾಟ ಕೈಗೆತ್ತಿಕೊಳ್ಳಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಎಲ್ಲ ಸಂಗತಿಗಳನ್ನು ಹೈಕಮಾಂಡ್ ಮತ್ತು ರಾಷ್ಟ್ರೀಯ ನಾಯಕತ್ವಕ್ಕೆ ತಿಳಿಸುತ್ತೇವೆ. ಮುಡಾ ಹಗರಣದ ಪಾದಯಾತ್ರೆ ರೀತಿಯಲ್ಲಿ ಇನ್ನು ಹೆಚ್ಚು ಪ್ರಭಾವಿಯಾಗಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಅಂತಿಮ ಸಲಹೆಗಳು ಸಂಜೆ ವೇಳೆಗೆ ಸಿದ್ಧವಾಗಬಹುದು” ಎಂದು ತಿಳಿಸಿದರು.

ಹೈಕಮಾಂಡ್ ಗಮನಕ್ಕೆ ತಂದು ಸಭೆ ಮಾಡುತ್ತಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಪಕ್ಷದ ಹಿರಿಯ ನಾಯಕ, ಹಾಗಾಗಿ ಪಕ್ಷದ ಪದ್ದತಿ ಗೊತ್ತಿದೆ. ಆ ಪದ್ಧತಿ ಅನುಸಾರ ಸಭೆ ಮಾಡುತ್ತಿದ್ದೇವೆ. ಸಭೆಯಲ್ಲಿ 12 ಜನ ಸೇರಿದ್ದೇವೆ” ಎಂದರು.

ಇದನ್ನೂ ಓದಿ; ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್; ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...