Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ಪುರುಷರ ತಂಡವೊಂದು ಮಹಿಳೆಯೊಬ್ಬರನ್ನು ಎತ್ತಿಕೊಂಡು ಹೋಗಿ ವಾಹನದೊಳಕ್ಕೆ ತುರುಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವರು ಇದು ಬಾಂಗ್ಲಾದಲ್ಲಿ ಹಿಂದೂ ಮಹಿಳೆಯನ್ನು ಅಪಹರಿಸಿದ ದೃಶ್ಯ ಎಂದು ಬರೆದುಕೊಂಡಿದ್ದಾರೆ.

‘ಕನ್ನಡ ನಾಡು ನುಡಿ ಜಲ’ ಎಂಬ ಫೇಸ್‌ಬುಕ್ ಗ್ರೂಪ್‌ನಲ್ಲಿ ಆಗಸ್ಟ್ 9,2024 ವಿಡಿಯೋ ಪೋಸ್ಟ್ ಮಾಡಿರುವ ಕುಮಾರ್ ಅಭಿನಯ್ ಎಂಬ ಬಳಕೆದಾರ “ಬಾಂಗ್ಲಾದೇಶ: ಹಾಡಹಗಲೇ ಅಪ್ರಾಪ್ತ ಹಿಂದೂ ಹುಡುಗಿಯನ್ನ ಅಪಹರಿಸಿದ ಮುಸಲ್ಮಾನರು. ಬಾಂಗ್ಲಾದೇಶದ ಹಿಂದೂಗಳ ಸ್ಥಿತಿ ಶೋಚನೀಯ” ಎಂದು ಬರೆದುಕೊಂಡಿದ್ದಾರೆ.

ಸಲ್ಮಾನ್‌ ಸೀಮಾ ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 8, 2024ರಂದು ವಿಡಿಯೋ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಹಾಡಹಗಲೇ ಇಸ್ಲಾಮಿಸ್ಟ್‌ಗಳು ಅಪಹರಿಸಿದ್ದಾರೆ. ಇದೇ ರೀತಿಯ ದೃಶ್ಯಗಳನ್ನು ನಾವು ಬೇರೆಲ್ಲಿ ನೋಡಿದ್ದೇವೆ?. IRGC ಭಯೋತ್ಪಾದಕರು ಕೆಚ್ಚೆದೆಯ ಇರಾನಿನ ಮಹಿಳೆಯರ ಮೇಲೆ ದಾಳಿ ಮಾಡಿದಾಗ ಈ ರೀತಿಯ ಘಟನೆ ಕಂಡಿದ್ದೇವೆ. ಹಮಾಸ್, ಐಆರ್‌ಜಿಸಿ, ಐಸಿಸ್, ಹಿಜ್ಬುಲ್ಲಾ, ಹೌತಿಗಳು, ಬಾಂಗ್ಲಾದೇಶದ ಇಸ್ಲಾಮಿಸ್ಟ್‌ಗಳು, ನೈಜೀರಿಯಾದ ಬೊಕೊ ಹರಾಮ್ ಮತ್ತು ಅಲ್ ಖೈದಾ ಇವೆಲ್ಲವೂ ಒಂದೇ ಬೇರುಗಳು. ಸಿಸಿಪಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಪಾಕಿಸ್ತಾನದಿಂದ ಬೆಂಬಲಿತವಾಗಿರುವ ಈ ರೀತಿಯ ದಾಳಿಗಳು ಬಾಂಗ್ಲಾದೇಶದ ಭವಿಷ್ಯವನ್ನು ನಾಶಮಾಡುತ್ತವೆ. ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್‌ ಶಾಟ್ ಹಾಕಿ ಸರ್ಚ್‌ ಮಾಡಿದಾಗ en.prothomalo.com ಎಂಬ ವೆಬ್‌ಸೈಟ್‌ವೊಂದು ಆಗಸ್ಟ್ 9, 2024ರಂದು ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ವರದಿಯಲ್ಲಿ ” ಕೌಟುಂಬಿಕ ಕಲಹದ ವಿಡಿಯೋವನ್ನು ಕೋಮುಗಲಭೆ ಅಥವಾ ದೌರ್ಜನ್ಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗಿದೆ” ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬಾಂಗ್ಲಾದೇಶ ನೊವಾಖಾಲಿಯ ಸೆನ್‌ಬಾಗ್‌ ಎಂಬಲ್ಲಿ ಕೌಟುಂಬಿದ ಕಲಹದಿಂದ ತವರು ಮನೆಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿ ಕೆಲ ವ್ಯಕ್ತಿಗಳೊಂದಿಗೆ ಕೂಡಿ ಒತ್ತಾಯಪೂರ್ವಕವಾಗಿ ಕರೆದೊಯ್ಯಲು ಮುಂದಾಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ, ಪತಿ ಮತ್ತು ಆತನ ಜೊತೆಗಿದ್ದವರು ಮಹಿಳೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ವಾಹನಕ್ಕೆ ಹತ್ತಿಸಲು ನೋಡಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆಯ ಪತಿ ಮತ್ತು ಮೂವರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ವಾಹನವನ್ನು ಹಾನಿಗೊಳಿಸಿದ್ದಾರೆ.

ಆಗಸ್ಟ್ 9, 2024ರಂದು ವೈರಲ್ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಸ್ಕ್ರೀನ್‌ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ” ಹೌದು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿರುವ ಹಲವಾರು ಘಟನೆಗಳು ವರದಿಯಾಗಿವೆ. ಆದರೆ @Salwan_Momika1 ಮತ್ತು ಓಪ್‌ಇಂಡಿಯಾ ಸಂಪಾದಕ @UnSubtleDesi ಹಂಚಿಕೊಂಡಿರುವ ಈ ನಿರ್ದಿಷ್ಟ ವಿಡಿಯೋಗೂ ಹಿಂದೂ-ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ. ಹಿಂದೂ ಮಹಿಳೆಯನ್ನು ಅಪಹರಿಸಿದ ವ್ಯಕ್ತಿ ಆಕೆಯ ಮಾದಕ ವ್ಯಸನಿ ಹಿಂದೂ ಪತಿಯಾಗಿದ್ದು, 6 ತಿಂಗಳ ಹಿಂದೆ ಆಕೆಯಿಂದ ಬೇರ್ಪಟ್ಟಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಕೌಟುಂಬಿದ ಕಲಹದಿಂದ ತವರು ಮನೆ ಸೇರಿದ್ದ ಹಿಂದೂ ಮಹಿಳೆಯರನ್ನು ಆಕೆಯ ಪತಿ ಮತ್ತು ಆತನ ತಂಡ ಅಪಹರಿಸಿದ ವಿಡಿಯೋವನ್ನು ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಮುಸ್ಲಿಮರು ಅಪಹರಿಸಿದ್ದಾರೆ ಎಂಬರ್ಥದಲ್ಲಿ ತಪ್ಪಾಗಿ ಹಂಚಿಕೊಳ್ಳುತ್ತಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...