Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ಪುರುಷರ ತಂಡವೊಂದು ಮಹಿಳೆಯೊಬ್ಬರನ್ನು ಎತ್ತಿಕೊಂಡು ಹೋಗಿ ವಾಹನದೊಳಕ್ಕೆ ತುರುಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವರು ಇದು ಬಾಂಗ್ಲಾದಲ್ಲಿ ಹಿಂದೂ ಮಹಿಳೆಯನ್ನು ಅಪಹರಿಸಿದ ದೃಶ್ಯ ಎಂದು ಬರೆದುಕೊಂಡಿದ್ದಾರೆ.

‘ಕನ್ನಡ ನಾಡು ನುಡಿ ಜಲ’ ಎಂಬ ಫೇಸ್‌ಬುಕ್ ಗ್ರೂಪ್‌ನಲ್ಲಿ ಆಗಸ್ಟ್ 9,2024 ವಿಡಿಯೋ ಪೋಸ್ಟ್ ಮಾಡಿರುವ ಕುಮಾರ್ ಅಭಿನಯ್ ಎಂಬ ಬಳಕೆದಾರ “ಬಾಂಗ್ಲಾದೇಶ: ಹಾಡಹಗಲೇ ಅಪ್ರಾಪ್ತ ಹಿಂದೂ ಹುಡುಗಿಯನ್ನ ಅಪಹರಿಸಿದ ಮುಸಲ್ಮಾನರು. ಬಾಂಗ್ಲಾದೇಶದ ಹಿಂದೂಗಳ ಸ್ಥಿತಿ ಶೋಚನೀಯ” ಎಂದು ಬರೆದುಕೊಂಡಿದ್ದಾರೆ.

ಸಲ್ಮಾನ್‌ ಸೀಮಾ ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 8, 2024ರಂದು ವಿಡಿಯೋ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಹಾಡಹಗಲೇ ಇಸ್ಲಾಮಿಸ್ಟ್‌ಗಳು ಅಪಹರಿಸಿದ್ದಾರೆ. ಇದೇ ರೀತಿಯ ದೃಶ್ಯಗಳನ್ನು ನಾವು ಬೇರೆಲ್ಲಿ ನೋಡಿದ್ದೇವೆ?. IRGC ಭಯೋತ್ಪಾದಕರು ಕೆಚ್ಚೆದೆಯ ಇರಾನಿನ ಮಹಿಳೆಯರ ಮೇಲೆ ದಾಳಿ ಮಾಡಿದಾಗ ಈ ರೀತಿಯ ಘಟನೆ ಕಂಡಿದ್ದೇವೆ. ಹಮಾಸ್, ಐಆರ್‌ಜಿಸಿ, ಐಸಿಸ್, ಹಿಜ್ಬುಲ್ಲಾ, ಹೌತಿಗಳು, ಬಾಂಗ್ಲಾದೇಶದ ಇಸ್ಲಾಮಿಸ್ಟ್‌ಗಳು, ನೈಜೀರಿಯಾದ ಬೊಕೊ ಹರಾಮ್ ಮತ್ತು ಅಲ್ ಖೈದಾ ಇವೆಲ್ಲವೂ ಒಂದೇ ಬೇರುಗಳು. ಸಿಸಿಪಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಪಾಕಿಸ್ತಾನದಿಂದ ಬೆಂಬಲಿತವಾಗಿರುವ ಈ ರೀತಿಯ ದಾಳಿಗಳು ಬಾಂಗ್ಲಾದೇಶದ ಭವಿಷ್ಯವನ್ನು ನಾಶಮಾಡುತ್ತವೆ. ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್‌ ಶಾಟ್ ಹಾಕಿ ಸರ್ಚ್‌ ಮಾಡಿದಾಗ en.prothomalo.com ಎಂಬ ವೆಬ್‌ಸೈಟ್‌ವೊಂದು ಆಗಸ್ಟ್ 9, 2024ರಂದು ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ವರದಿಯಲ್ಲಿ ” ಕೌಟುಂಬಿಕ ಕಲಹದ ವಿಡಿಯೋವನ್ನು ಕೋಮುಗಲಭೆ ಅಥವಾ ದೌರ್ಜನ್ಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗಿದೆ” ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬಾಂಗ್ಲಾದೇಶ ನೊವಾಖಾಲಿಯ ಸೆನ್‌ಬಾಗ್‌ ಎಂಬಲ್ಲಿ ಕೌಟುಂಬಿದ ಕಲಹದಿಂದ ತವರು ಮನೆಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿ ಕೆಲ ವ್ಯಕ್ತಿಗಳೊಂದಿಗೆ ಕೂಡಿ ಒತ್ತಾಯಪೂರ್ವಕವಾಗಿ ಕರೆದೊಯ್ಯಲು ಮುಂದಾಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ, ಪತಿ ಮತ್ತು ಆತನ ಜೊತೆಗಿದ್ದವರು ಮಹಿಳೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ವಾಹನಕ್ಕೆ ಹತ್ತಿಸಲು ನೋಡಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆಯ ಪತಿ ಮತ್ತು ಮೂವರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ವಾಹನವನ್ನು ಹಾನಿಗೊಳಿಸಿದ್ದಾರೆ.

ಆಗಸ್ಟ್ 9, 2024ರಂದು ವೈರಲ್ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಸ್ಕ್ರೀನ್‌ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ” ಹೌದು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿರುವ ಹಲವಾರು ಘಟನೆಗಳು ವರದಿಯಾಗಿವೆ. ಆದರೆ @Salwan_Momika1 ಮತ್ತು ಓಪ್‌ಇಂಡಿಯಾ ಸಂಪಾದಕ @UnSubtleDesi ಹಂಚಿಕೊಂಡಿರುವ ಈ ನಿರ್ದಿಷ್ಟ ವಿಡಿಯೋಗೂ ಹಿಂದೂ-ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ. ಹಿಂದೂ ಮಹಿಳೆಯನ್ನು ಅಪಹರಿಸಿದ ವ್ಯಕ್ತಿ ಆಕೆಯ ಮಾದಕ ವ್ಯಸನಿ ಹಿಂದೂ ಪತಿಯಾಗಿದ್ದು, 6 ತಿಂಗಳ ಹಿಂದೆ ಆಕೆಯಿಂದ ಬೇರ್ಪಟ್ಟಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಕೌಟುಂಬಿದ ಕಲಹದಿಂದ ತವರು ಮನೆ ಸೇರಿದ್ದ ಹಿಂದೂ ಮಹಿಳೆಯರನ್ನು ಆಕೆಯ ಪತಿ ಮತ್ತು ಆತನ ತಂಡ ಅಪಹರಿಸಿದ ವಿಡಿಯೋವನ್ನು ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಮುಸ್ಲಿಮರು ಅಪಹರಿಸಿದ್ದಾರೆ ಎಂಬರ್ಥದಲ್ಲಿ ತಪ್ಪಾಗಿ ಹಂಚಿಕೊಳ್ಳುತ್ತಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...