Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ಪುರುಷರ ತಂಡವೊಂದು ಮಹಿಳೆಯೊಬ್ಬರನ್ನು ಎತ್ತಿಕೊಂಡು ಹೋಗಿ ವಾಹನದೊಳಕ್ಕೆ ತುರುಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವರು ಇದು ಬಾಂಗ್ಲಾದಲ್ಲಿ ಹಿಂದೂ ಮಹಿಳೆಯನ್ನು ಅಪಹರಿಸಿದ ದೃಶ್ಯ ಎಂದು ಬರೆದುಕೊಂಡಿದ್ದಾರೆ.

‘ಕನ್ನಡ ನಾಡು ನುಡಿ ಜಲ’ ಎಂಬ ಫೇಸ್‌ಬುಕ್ ಗ್ರೂಪ್‌ನಲ್ಲಿ ಆಗಸ್ಟ್ 9,2024 ವಿಡಿಯೋ ಪೋಸ್ಟ್ ಮಾಡಿರುವ ಕುಮಾರ್ ಅಭಿನಯ್ ಎಂಬ ಬಳಕೆದಾರ “ಬಾಂಗ್ಲಾದೇಶ: ಹಾಡಹಗಲೇ ಅಪ್ರಾಪ್ತ ಹಿಂದೂ ಹುಡುಗಿಯನ್ನ ಅಪಹರಿಸಿದ ಮುಸಲ್ಮಾನರು. ಬಾಂಗ್ಲಾದೇಶದ ಹಿಂದೂಗಳ ಸ್ಥಿತಿ ಶೋಚನೀಯ” ಎಂದು ಬರೆದುಕೊಂಡಿದ್ದಾರೆ.

ಸಲ್ಮಾನ್‌ ಸೀಮಾ ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 8, 2024ರಂದು ವಿಡಿಯೋ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಹಾಡಹಗಲೇ ಇಸ್ಲಾಮಿಸ್ಟ್‌ಗಳು ಅಪಹರಿಸಿದ್ದಾರೆ. ಇದೇ ರೀತಿಯ ದೃಶ್ಯಗಳನ್ನು ನಾವು ಬೇರೆಲ್ಲಿ ನೋಡಿದ್ದೇವೆ?. IRGC ಭಯೋತ್ಪಾದಕರು ಕೆಚ್ಚೆದೆಯ ಇರಾನಿನ ಮಹಿಳೆಯರ ಮೇಲೆ ದಾಳಿ ಮಾಡಿದಾಗ ಈ ರೀತಿಯ ಘಟನೆ ಕಂಡಿದ್ದೇವೆ. ಹಮಾಸ್, ಐಆರ್‌ಜಿಸಿ, ಐಸಿಸ್, ಹಿಜ್ಬುಲ್ಲಾ, ಹೌತಿಗಳು, ಬಾಂಗ್ಲಾದೇಶದ ಇಸ್ಲಾಮಿಸ್ಟ್‌ಗಳು, ನೈಜೀರಿಯಾದ ಬೊಕೊ ಹರಾಮ್ ಮತ್ತು ಅಲ್ ಖೈದಾ ಇವೆಲ್ಲವೂ ಒಂದೇ ಬೇರುಗಳು. ಸಿಸಿಪಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಪಾಕಿಸ್ತಾನದಿಂದ ಬೆಂಬಲಿತವಾಗಿರುವ ಈ ರೀತಿಯ ದಾಳಿಗಳು ಬಾಂಗ್ಲಾದೇಶದ ಭವಿಷ್ಯವನ್ನು ನಾಶಮಾಡುತ್ತವೆ. ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್‌ ಶಾಟ್ ಹಾಕಿ ಸರ್ಚ್‌ ಮಾಡಿದಾಗ en.prothomalo.com ಎಂಬ ವೆಬ್‌ಸೈಟ್‌ವೊಂದು ಆಗಸ್ಟ್ 9, 2024ರಂದು ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ವರದಿಯಲ್ಲಿ ” ಕೌಟುಂಬಿಕ ಕಲಹದ ವಿಡಿಯೋವನ್ನು ಕೋಮುಗಲಭೆ ಅಥವಾ ದೌರ್ಜನ್ಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗಿದೆ” ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬಾಂಗ್ಲಾದೇಶ ನೊವಾಖಾಲಿಯ ಸೆನ್‌ಬಾಗ್‌ ಎಂಬಲ್ಲಿ ಕೌಟುಂಬಿದ ಕಲಹದಿಂದ ತವರು ಮನೆಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿ ಕೆಲ ವ್ಯಕ್ತಿಗಳೊಂದಿಗೆ ಕೂಡಿ ಒತ್ತಾಯಪೂರ್ವಕವಾಗಿ ಕರೆದೊಯ್ಯಲು ಮುಂದಾಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ, ಪತಿ ಮತ್ತು ಆತನ ಜೊತೆಗಿದ್ದವರು ಮಹಿಳೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ವಾಹನಕ್ಕೆ ಹತ್ತಿಸಲು ನೋಡಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆಯ ಪತಿ ಮತ್ತು ಮೂವರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ವಾಹನವನ್ನು ಹಾನಿಗೊಳಿಸಿದ್ದಾರೆ.

ಆಗಸ್ಟ್ 9, 2024ರಂದು ವೈರಲ್ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಸ್ಕ್ರೀನ್‌ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ” ಹೌದು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿರುವ ಹಲವಾರು ಘಟನೆಗಳು ವರದಿಯಾಗಿವೆ. ಆದರೆ @Salwan_Momika1 ಮತ್ತು ಓಪ್‌ಇಂಡಿಯಾ ಸಂಪಾದಕ @UnSubtleDesi ಹಂಚಿಕೊಂಡಿರುವ ಈ ನಿರ್ದಿಷ್ಟ ವಿಡಿಯೋಗೂ ಹಿಂದೂ-ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ. ಹಿಂದೂ ಮಹಿಳೆಯನ್ನು ಅಪಹರಿಸಿದ ವ್ಯಕ್ತಿ ಆಕೆಯ ಮಾದಕ ವ್ಯಸನಿ ಹಿಂದೂ ಪತಿಯಾಗಿದ್ದು, 6 ತಿಂಗಳ ಹಿಂದೆ ಆಕೆಯಿಂದ ಬೇರ್ಪಟ್ಟಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಕೌಟುಂಬಿದ ಕಲಹದಿಂದ ತವರು ಮನೆ ಸೇರಿದ್ದ ಹಿಂದೂ ಮಹಿಳೆಯರನ್ನು ಆಕೆಯ ಪತಿ ಮತ್ತು ಆತನ ತಂಡ ಅಪಹರಿಸಿದ ವಿಡಿಯೋವನ್ನು ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಮುಸ್ಲಿಮರು ಅಪಹರಿಸಿದ್ದಾರೆ ಎಂಬರ್ಥದಲ್ಲಿ ತಪ್ಪಾಗಿ ಹಂಚಿಕೊಳ್ಳುತ್ತಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...