Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ‌ಯು ಬಿಜೆಪಿ ಮುಖಂಡ ಪ್ರತಾಪ್ ಸಿಂಹ‌ ಸ್ನೇಹಿತ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ. ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಏಕಸದಸ್ಯ ಪೀಠವು ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿತ್ತು. ನಿನ್ನೆ ಪ್ರತಾಪ್ ಸಿಂಹ ಅವರು ಕೊಲೆ‌ ಆರೋಪಿ ನವೀನ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್, “ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ ಎ-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ. ಮದ್ದೂರಿನ ಯುವ ಸ್ನೇಹಿತರೂ ಜತೆಗಿದ್ದರು” ಎಂದು ಬರೆದುಕೊಂಡಿದ್ದಾರೆ.

ಕೊಲೆ ಆರೋಪಿಯೊಂದಿಗೆ ಬಿಜೆಪಿ ನಾಯಕನ ಸ್ನೇಹ

ಜನಪರ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಪ್ರತಾಪ್ ಸಿಂಹ ಭೇಟಿಯಾಗಿರುವುದು ವಿವಾದಕ್ಕೆ ನಾಂದಿ ಹಾಡಿದೆ. ಕೊಲೆ ಆರೋಪಿಯೊಬ್ಬ ಪ್ರತಾಪ್ ಸಿಂಹ ಸ್ನೇಹಿತ ಎಂಬ ವಿಚಾರವೂ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಮೈಸೂರು-ಕೊಡಗು ಲೋಕಸಭೆ ಟಿಕೆಡ್ ಕೈತಪ್ಪಿದ ನಂತರ ಕಾರ್ಯಕರ್ತರ ಜತೆ ನಿಲ್ಲುತ್ತೇನೆ ಎಂದು ಬಿಂಬಿಸಿಕೊಳ್ಳುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕೊಲೆ ಆರೋಪಿಗಳು ಮತ್ತು ಹಿಂದುತ್ವದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಪುನಿತ್ ಕೆಹಳ್ಳಿ ಎಂಬಾತನ ಬೆಂಬಲಕ್ಕೆ ನಿಂತು ಸದಾ ಸುದ್ದಿಯಲ್ಲಿದ್ದಾರೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಮಾಂಸ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಬಂಧನ ವಿರೋಧಿಸಿ ಎಸಿಪಿ ಚಂದನ್ ಅವರ ಮೇಲೆ ಪ್ರತಾಪ್ ಸಿಂಹ ಹಲ್ಲೆ ಆರೋಪ ಹೊರಿಸಿ, ಪೊಲೀಸ್ ಠಾಣೆಗೆ ತೆರಳಿದ್ದರು. ಅಪರಾಧ ಹಿನ್ನೆಲೆಯ ಪುನೀತ್ ಕೆರೆಹಳ್ಳಿಯನ್ನು ನನ್ನ ಸಹೋದರ ಎಂದಿದ್ದರು.‌ ಬಿಜೆಪಿ ಅತೃಪ್ತರ ಗುಂಪಿನಲ್ಲಿ ಮೈಸೂರು-ಕೊಡಗು ಮಾಜಿ ಸಂಸದ, ಇದೀಗ ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾಗಿ ಆತ ನನ್ನ ಸ್ನೇಹಿತ ಎಂದಿದ್ದಾರೆ. ಕೊಲೆ‌ ಆರೋಪಿಗಳು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರನ್ನು ಪ್ರತಾಪ್ ಸಿಂಹ ತನಗೆ ಸಹೋದರ ಮತ್ತು ಸ್ನೇಹಿತರು ಎಂದು ಹೇಳುತ್ತಿರುವುದು ಆಕ್ರೊಶಕ್ಕೆ ಕಾರಣವಾಗಿದೆ. ಈತನಿಗೆ ಟಿಕೆಟ್ ಕೈತಪ್ಪಿದ್ದೆ ಒಳ್ಳೆದಾಯಿತು ಎಂದು ಜಾಲತಾಣಗಳಲ್ಲಿ ಹಲವರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ; ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...