Homeಮುಖಪುಟಹರ್ಯಾಣ, ಮಹಾರಾಷ್ಟ್ರ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡಲಿಲ್ಲ ಏಕೆ..?

ಹರ್ಯಾಣ, ಮಹಾರಾಷ್ಟ್ರ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡಲಿಲ್ಲ ಏಕೆ..?

- Advertisement -
- Advertisement -

ಜ್ಯೂನಿಯರ್ ಇಂದಿರಾ, ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಚಾರ ನಡೆಸಲಿಲ್ಲ. ಲೋಕಸಭೆ ಚುನಾವಣೆ ವೇಳೆ ದೇಶದ ವಿವಿಧ ಭಾಗಗಳಲ್ಲಿ ಪ್ರಚಾರ ಮತ್ತು ಪಕ್ಷ ಸಂಘಟನೆ ಮಾಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ, ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಯಾಕೆ ಮಹತ್ವ ನೀಡಲಿಲ್ಲ ಎಂಬ ಪ್ರಶ್ನೆ ಬಲವಾಗಿ ಕೇಳಿ ಬಂದಿತ್ತು. ಇದಕ್ಕೀಗ ಕಾಂಗ್ರೆಸ್ ಮುಖಂಡರು ಉತ್ತರ ನೀಡಿದ್ದಾರೆ.

‘ಉತ್ತರ ಪ್ರದೇಶದಲ್ಲಿ ಕಳೆದು ಹೋಗಿರುವ ಪಕ್ಷದ ಜನಪ್ರಿಯತೆಯನ್ನು ಹೆಚ್ಚಿಸಲು, ಮತ್ತೆ ರಾಜ್ಯವನ್ನು ತಮ್ಮ ಪಕ್ಷದ ಸುಪರ್ದಿಗೆ ತೆಗೆದುಕೊಳ್ಳಲು, ಬೂತ್ ಮಟ್ಟದಿಂದ ಸಂಘಟನೆ ಮಾಡುತ್ತಿದ್ದಾರೆ. ಪಕ್ಷವನ್ನು ಪುನರುಜ್ಜೀವನಗೊಳಿಸಲು ಉತ್ಸುಕತೆಯಿಂದ ಕೆಲಸದಲ್ಲಿ ನಿರತರಾಗಿದ್ದಾರೆ’. ಹೀಗಾಗಿ ಅವರಿಗೆ ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸೈಡ್‍ಲೈನ್ ಆಗುತ್ತಿದೆ. ಕೆಲ ವರ್ಷಗಳಲ್ಲಿ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಮುನ್ನೆಲೆಗೆ ಬಂದಿವೆ. ಹೀಗಾಗಿ ಕಾಂಗ್ರೆಸ್ ಸ್ವಕ್ಷೇತ್ರದಲ್ಲಿ ಕ್ಷೀಣಿಸುತ್ತಿದೆ. ಹೀಗಾಗಿ ಪಕ್ಷದ ಸಂಘಟನೆ ಬಹುಮುಖ್ಯವಾಗಿದೆ. ಆದ್ದರಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ ಮತ್ತು ಅಲ್ಲಿನ ಬೆಳವಣಿಗೆಗಳನ್ನು ನೋಡಿಕೊಳ್ಳುವುದರಲ್ಲಿ ಪ್ರಿಯಾಂಕಾ ಬ್ಯುಸಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

1989 ರ ನಂತರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜನಪ್ರಿಯತೆ ರಾಜಕೀಯವಾಗಿ ಕುಗ್ಗುತ್ತಾ ಹೋಯಿತು. ಇಲ್ಲಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಪ್ರಾಬಲ್ಯ ಹೆಚ್ಚಿತು. 2019ರ ಲೋಕಸಭೆ ಚುನಾವಣೆ ವೇಳೆ ಉತ್ತರ ಪ್ರದೇಶದ ಅಮೇಠಿಯಲ್ಲಿ ರಾಹುಲ್ ಗಾಂಧಿ 50 ಸಾವಿರ ವೋಟ್ ಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋತರು. ರಾಯ್‍ಬರೇಲಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಗೆಲುವು ಸಾಧಿಸಿ, ಪಕ್ಷದ ಮರ್ಯಾದೆ ಉಳಿಸಿದ್ದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಉತ್ತರ ಪ್ರದೇಶ, ಗುಜರಾತ್, ಅಸ್ಸಾಂ, ಪಂಜಾಬ್, ಹರ್ಯಾಣ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜ್ಯೂನಿಯರ್ ಇಂದಿರಾ ಬೃಹತ್ ಕ್ಯಾಂಪೇನ್ ನಡೆಸಿದ್ದರು. ಜನವರಿ 23ರಲ್ಲಿ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹುದ್ದೆಗೇರಿದ ಪ್ರಿಯಾಂಕಾ, ಪಕ್ಷವನ್ನು ಕಟ್ಟುವಲ್ಲಿ ನಿರತರಾಗಿದ್ದಾರೆ. ನಿಶ್ಚಿತ ಗುರಿಯತ್ತ ದೃಷ್ಟಿ ನೆಟ್ಟಿರುವ ಪ್ರಿಯಾಂಕಾ ಪ್ರಮುಖ ಕಾರ್ಯಚಟುವಟಿಕೆಗಳನ್ನು ನಡೆಸಿ, ಪಕ್ಷವನ್ನು ಸದೃಢವಾಗಿಸುತ್ತಾರೆ. ನಶಿಸುತ್ತಿರುವ ಕಾಂಗ್ರೆಸ್‍ಗೆ ಪ್ರಿಯಾಂಕಾ ಬೂಸ್ಟ್ ನಂತೆ ಕೆಲಸ ಮಾಡುತ್ತಾರೆ ಎಂಬ ಮಾತುಗಳು, ಚರ್ಚೆಗಳು ನಡೆದಿದ್ದವು.

ಅದಾಗ್ಯೂ ಹರ್ಯಾಣದಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಚಾರಕ್ಕೆ ಅಣಿಯಾಗಿದ್ದರು. ಆದರೆ ಪ್ರಿಯಾಂಕ ಮಾತ್ರ ಮಹಾರಾಷ್ಟ್ರದಲ್ಲಿ ಪ್ರಚಾರಕ್ಕೆ ಕನಿಷ್ಠ ತಯಾರಿಯನ್ನೂ ಮಾಡಲಿಲ್ಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈಗ ಅದಕ್ಕೆ ಉತ್ತರ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...