Homeಫ್ಯಾಕ್ಟ್‌ಚೆಕ್FACT CHECK : 'ಭಾರತ್ ಮಾತಾ ಕಿ ಜೈ' ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು...

FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಯುವಕರ ಗುಂಪೊಂದು ಹಲ್ಲೆ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಂಚಿಕೊಂಡಿರುವ ಹಲವರು “ಮುಂಬೈನಲ್ಲಿ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಮರು ವೃದ್ದನಿಗೆ ಥಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜುಲೈ 29,2024ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅನು ಅನಿತಾ (@Ani_Sanatani) ಎಂಬ ಬಳಕೆದಾರರು “ಭಾರತ ಮಾತೆಗೆ ಜೈ ಎನ್ನಲಾಗದ ಪರಿಸ್ಥಿತಿ. ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಇದು ಭಾರತದಲ್ಲಿನ ಜಿಹಾದಿ ಮುಸಲ್ಮಾನರ ಪ್ರದೇಶಗಳಲ್ಲಿ ಭಾರತ್ ಮಾತಾಕಿ ಜೈ ಎನ್ನಲಾಗದ ಪರಿಸ್ಥಿತಿ. ಇದು ಇಸ್ಲಾಮಿಕ್ ದೇಶ ಅಲ್ಲ. ಇದು ಭಾರತ್ ಮಾತಾಕಿ ಜೈ! ಹೇಳಿದ ಭಾರತದ ಒಬ್ಬ ದೇಶ ಭಕ್ತ ಮುದುಕನ ಪರಿಸ್ಥಿತಿ” ಎಂದು ಬರೆದುಕೊಂಡಿದ್ದರು.

ಜುಲೈ 31ರಂದು ಅದೇ ಇದೇ ವಿಡಿಯೋವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ‘ಪ್ರಭಾಕರ್ ಭಟ್’ ಎಂಬವರು ” ಎಚ್ಚೆತ್ತುಕೊಳ್ಳಿ ಭಾರತೀಯರೇ.. ಒಬ್ಬ ರಾಷ್ಟ್ರೀಯವಾದಿ ವೃದ್ಧರು ಭಾರತ ಮಾತೆಗೆ ಜೈ ಎಂದಾಗ ಅವರನ್ನು ಹೊಡೆದು ಬಡಿದು ದೈಹಿಕ ಹಲ್ಲೆ ಮಾಡಿದ ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಮಹಾರಾಷ್ಟ್ರ ಪೋಲೀಸರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಈ ಘಟನೆಯ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು” ಎಂದು ಬರೆಕೊಂಡಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣ ಬಳಕೆದಾರರು ಮಾಡಿರುವ ಪ್ರತಿಪಾದನೆ ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಮುಂಬೈನ ಭಿಂಡಿ ಬಜಾರ್‌ನ ವಿಡಿಯೋ ಅಲ್ಲ. ಅಕ್ಟೋಬರ್ 15, 2019ರಂದು ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದ ಘಟನೆಯದ್ದು ಎಂದು ಗೊತ್ತಾಗಿದೆ. ‘ವೃದ್ದರೊಬ್ಬರು ಬೀದಿಯಲ್ಲಿ ಹೋಗುತ್ತಿದ್ದವರನ್ನು ನಿಂದಿಸಿದ್ದಕ್ಕೆ ಸ್ಥಳೀಯರು ಥಳಿಸಿರುವುದಾಗಿ’ ಮಾಧ್ಯಮಗಳು ವರದಿ ಮಾಡಿವೆ.

ಬಿಲ್ವಾರದ ಆಝಾದ್ ಚೌಕ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿಗಳು ವೃದ್ದನಿಗೆ ಥಳಿಸಿದ್ದಾರೆ ಎಂದು ಬಿಲ್ವಾರ ಎಸ್ಪಿ ಹರ್ಷೇಂದ್ರ ಕುಮಾರ್ ಹೇಳಿರುವುದಾಗಿ 2023ರ ಅಕ್ಟೋಬರ್ 12ರಂದು ದಿ ಕ್ವಿಂಟ್ ವರದಿ ಮಾಡಿತ್ತು.

2019ರಲ್ಲಿ ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಹರಿದಾಡುತ್ತಿದ್ದಾಗ ಕ್ವಿಂಟ್ ಅದರ ಸತ್ಯಾಸತ್ಯತೆ ಪರಿಶೀಲಿಸಿತ್ತು. ಆ ವೇಳೆ ಎಸ್ಪಿ ಹರ್ಷೇಂದ್ರ ಕುಮಾರ್ ಜೊತೆ ಮಾತನಾಡಿತ್ತು. ಆಗ ಎಸ್ಪಿ ಕೊಟ್ಟ ಪ್ರತಿಕ್ರಿಯೆಯನ್ನೇ 2023ರ ವರದಿಯಲ್ಲೂ ಉಲ್ಲೇಖಿಸಿತ್ತು.

2019ರಲ್ಲಿ ಸುಳ್ಳು ಸಂದೇಶದೊಂದಿಗೆ ಇದೇ ವಿಡಿಯೋ ವೈರಲ್ ಆದಾಗ, 19 ಅಕ್ಟೋಬರ್ 2019ರಂದು ದೆಹಲಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಫೇಸ್‌ಬುಕ್‌ನಲ್ಲಿ ವಿಡಿಯೋ ಕುರಿತು ಬರೆದುಕೊಂಡಿದ್ದರು. ಅದರಲ್ಲಿ ಈ ಘಟನೆ ರಾಜಸ್ಥಾನದ ಆಝಾದ್ ಚೌಕ್‌ನಲ್ಲಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದರು. 2019ರ ಸೆಪ್ಟೆಂಬರ್ 25ರಂದು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಮತದಾನ ನಿಗದಿಯಾಗಿತ್ತು. ಅದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ವೈರಲ್ ಆಗಿತ್ತು.

ವೃದ್ದನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಅಲಿಯಾಸ್ ಸಿಂಧಿ (39) ಹೇಮಂತ್ ನಥಾನಿ (45), ಭಗವಾನ್ ದಾಸ್ (37), ಮಜೂರ್ ಶೇಖ್ (31) ಇರ್ಫಾನ್ (34) ಎಂಬವರ ಮೇಲೆ 20 ಅಕ್ಟೋಬರ್ 2019ರಂದು ಎಫ್‌ಐಅರ್ ಕೂಡ ದಾಖಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ವಿಡಿಯೋದಲ್ಲಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಆಝಾದ್ ಚೌಕ್ ಪ್ರದೇಶದಲ್ಲಿ 2019ರ ಅಕ್ಟೋಬರ್ 15ರಂದು ನಡೆದದ್ದು ಎಂದು ಗೊತ್ತಾಗಿದೆ. ವೃದ್ದರೊಬ್ಬರು ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಸ್ಥಳೀಯ ವ್ಯಾಪಾರಿಗಳು ಥಳಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ವಿಡಿಯೋವನ್ನು ಮುಂಬೈನ ಭಿಂಡಿ ಬಜಾರ್‌ನಲ್ಲಿ ಭಾರತ್ ಮಾತಾಕಿ ಜೈ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷ ಪೂರಿತ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಶಿಬಿರದ ಮೇಲೆ ಮುಸ್ಲಿಮರಿಂದ ಬಾಂಬ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...